ಮನರಂಜನೆ

ಭಾರ್ಗವನಿಗೆ ಮುಹೂರ್ತ: ಜೂನ್‍.23ರಿಂದ ಚಿತ್ರೀಕರಣ ಪ್ರಾರಂಭ

ಕೊನೆಗೂ ಉಪೇಂದ್ರ ಅಭಿನಯದ ‘ಭಾರ್ಗವ’ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇತ್ತೀಚೆಗೆ ಹಲಸೂರಿನ ಸೋಮೇಶ್ವರ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆದಿದ್ದು, ಚಿತ್ರದ ಮೊದಲ ದೃಶ್ಯಕ್ಕೆ ಪ್ರಸನ್ನ ಚಿತ್ರಮಂದಿರದ ಮಾಲೀಕ ಆನಂದಪ್ಪ ಕ್ಲಾಪ್‍ ಮಾಡುವ ಮೂಲಕ ಚಾಲನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ನಿರ್ದೇಶಕ ನಾಗಣ್ಣ, ನಿರ್ಮಾಪಕ ‘ಸೂರಪ್ಪ’ ಬಾಬು ಸೇರಿದಂತೆ ಹಲವರು ಹಾಜರಿದ್ದರು. ಚಿತ್ರದ ಮುಹೂರ್ತವಾಗಿದ್ದರೂ, ಚಿತ್ರೀಕರಣ ಪ್ರಾರಂಭವಾಗುವುದಕ್ಕೆ ಸ್ವಲ್ಪ ಸಮಯವಿದೆ. ಜೂನ್‍.23ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

ಉಪೇಂದ್ರ ಅಭಿನಯದ ‘ಭಾರ್ಗವ’ ಚಿತ್ರವು ಯುಗಾದಿ ಹಬ್ಬದಂದು ಘೋಷಣೆಯಾಗಿತ್ತು. ಆ ನಂತರ ಅಕ್ಷಯ ತೃತೀಯ ದಿನದಂದು ಚಿತ್ರಕ್ಕೆ ‘ಭಾರ್ಗವ’ ಎಂಬ ಹೆಸರನ್ನು ಘೋಷಿಸಲಾಗಿತ್ತು. ಇದೀಗ ಚಿತ್ರಕ್ಕೆ ಕೊನೆಗ ಚಾಲನೆ ಸಿಕ್ಕಿದೆ. ಈ ಚಿತ್ರಕ್ಕೆ A Violent Family Man ಎಂಬ ಅಡಿಬರಹವಿದೆ.

ಅಂದಹಾಗೆ, ಈ ಚಿತ್ರಕ್ಕೆ ನಾಯಕಿಯಾಗಿ ಅಂಕಿತಾ ಅಮರ್ ಆಯ್ಕೆಯಾಗಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದಲ್ಲಿ ತಮ್ಮ ನಟನೆ ಮೂಲಕ ಗಮನ ಸೆಳೆದವರು ಅಂಕಿತಾ ಅಮರ್. ನಾಯಕಿಯಾಗಿ ನಟಿಸಿದ ಮೊದಲ ಚಿತ್ರದಲ್ಲೇ ಮೆಚ್ಚುಗೆ ಪಡೆದಿದ್ದ ಅವರು, ಇದೀಗ ‘ಭಾರ್ಗವ’ ಚಿತ್ರದಲ್ಲಿ ಉಪೇಂದ್ರ ಎದುರು ನಾಯಕಿಯಾಗಿ ನಟಿಸುತ್ತಿದ್ದಾರೆ.

ಇದಕ್ಕೂ ಮೊದಲು ‘ಗೌರಮ್ಮ’, ‘ಕುಟುಂಬ’, ‘ಗೋಕರ್ಣ’ ಮತ್ತು ‘ದುಬೈ ಬಾಬು’ ಚಿತ್ರಗಳಲ್ಲಿ ಉಪೇಂದ್ರ ಅವರನ್ನು ನಿರ್ದೇಶನ ಮಾಡಿದ್ದರು ಹಿರಿಯ ನಿರ್ದೇಶಕ ನಾಗಣ್ಣ. ಈಗ ಐದನೇ ಬಾರಿಗೆ ನಾಗಣ್ಣ ಅಭಿನಯದ ಈ ಚಿತ್ರದಲ್ಲಿ ಉಪೇಂದ್ರ ನಾಯಕನಾಗಿ ನಟಿಸುತ್ತಿರುವುದು ವಿಶೇಷ.

ರಾಂಬಾಬು ಪ್ರೊಡಕ್ಷನ್ಸ್ ಬ್ಯಾನರ್rte ಅಡಿ ‘ಭಾರ್ಗವ’ ಚಿತ್ರವನ್ನು ‘ಸೂರಪ್ಪ’ ಬಾಬು ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ‍ಜನ್ಯ ಸಂಗೀತ, ರಾಜರತ್ನಂ ಅವರ ಛಾಯಾಗ್ರಹಣವಿದೆ. ಉಳಿದ ಕಲಾವಿದರು ಮತ್ತು ತಂತ್ರಜ್ಞರ ಹೆಸರುಗಳು ಇನ್ನಷ್ಟೇ ಘೋಷಣೆಯಾಗಬೇಕಿವೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

8 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

9 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

9 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

9 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

9 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

10 hours ago