ಮನರಂಜನೆ

ಭಾರ್ಗವನಿಗೆ ಮುಹೂರ್ತ: ಜೂನ್‍.23ರಿಂದ ಚಿತ್ರೀಕರಣ ಪ್ರಾರಂಭ

ಕೊನೆಗೂ ಉಪೇಂದ್ರ ಅಭಿನಯದ ‘ಭಾರ್ಗವ’ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇತ್ತೀಚೆಗೆ ಹಲಸೂರಿನ ಸೋಮೇಶ್ವರ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆದಿದ್ದು, ಚಿತ್ರದ ಮೊದಲ ದೃಶ್ಯಕ್ಕೆ ಪ್ರಸನ್ನ ಚಿತ್ರಮಂದಿರದ ಮಾಲೀಕ ಆನಂದಪ್ಪ ಕ್ಲಾಪ್‍ ಮಾಡುವ ಮೂಲಕ ಚಾಲನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ನಿರ್ದೇಶಕ ನಾಗಣ್ಣ, ನಿರ್ಮಾಪಕ ‘ಸೂರಪ್ಪ’ ಬಾಬು ಸೇರಿದಂತೆ ಹಲವರು ಹಾಜರಿದ್ದರು. ಚಿತ್ರದ ಮುಹೂರ್ತವಾಗಿದ್ದರೂ, ಚಿತ್ರೀಕರಣ ಪ್ರಾರಂಭವಾಗುವುದಕ್ಕೆ ಸ್ವಲ್ಪ ಸಮಯವಿದೆ. ಜೂನ್‍.23ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

ಉಪೇಂದ್ರ ಅಭಿನಯದ ‘ಭಾರ್ಗವ’ ಚಿತ್ರವು ಯುಗಾದಿ ಹಬ್ಬದಂದು ಘೋಷಣೆಯಾಗಿತ್ತು. ಆ ನಂತರ ಅಕ್ಷಯ ತೃತೀಯ ದಿನದಂದು ಚಿತ್ರಕ್ಕೆ ‘ಭಾರ್ಗವ’ ಎಂಬ ಹೆಸರನ್ನು ಘೋಷಿಸಲಾಗಿತ್ತು. ಇದೀಗ ಚಿತ್ರಕ್ಕೆ ಕೊನೆಗ ಚಾಲನೆ ಸಿಕ್ಕಿದೆ. ಈ ಚಿತ್ರಕ್ಕೆ A Violent Family Man ಎಂಬ ಅಡಿಬರಹವಿದೆ.

ಅಂದಹಾಗೆ, ಈ ಚಿತ್ರಕ್ಕೆ ನಾಯಕಿಯಾಗಿ ಅಂಕಿತಾ ಅಮರ್ ಆಯ್ಕೆಯಾಗಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದಲ್ಲಿ ತಮ್ಮ ನಟನೆ ಮೂಲಕ ಗಮನ ಸೆಳೆದವರು ಅಂಕಿತಾ ಅಮರ್. ನಾಯಕಿಯಾಗಿ ನಟಿಸಿದ ಮೊದಲ ಚಿತ್ರದಲ್ಲೇ ಮೆಚ್ಚುಗೆ ಪಡೆದಿದ್ದ ಅವರು, ಇದೀಗ ‘ಭಾರ್ಗವ’ ಚಿತ್ರದಲ್ಲಿ ಉಪೇಂದ್ರ ಎದುರು ನಾಯಕಿಯಾಗಿ ನಟಿಸುತ್ತಿದ್ದಾರೆ.

ಇದಕ್ಕೂ ಮೊದಲು ‘ಗೌರಮ್ಮ’, ‘ಕುಟುಂಬ’, ‘ಗೋಕರ್ಣ’ ಮತ್ತು ‘ದುಬೈ ಬಾಬು’ ಚಿತ್ರಗಳಲ್ಲಿ ಉಪೇಂದ್ರ ಅವರನ್ನು ನಿರ್ದೇಶನ ಮಾಡಿದ್ದರು ಹಿರಿಯ ನಿರ್ದೇಶಕ ನಾಗಣ್ಣ. ಈಗ ಐದನೇ ಬಾರಿಗೆ ನಾಗಣ್ಣ ಅಭಿನಯದ ಈ ಚಿತ್ರದಲ್ಲಿ ಉಪೇಂದ್ರ ನಾಯಕನಾಗಿ ನಟಿಸುತ್ತಿರುವುದು ವಿಶೇಷ.

ರಾಂಬಾಬು ಪ್ರೊಡಕ್ಷನ್ಸ್ ಬ್ಯಾನರ್rte ಅಡಿ ‘ಭಾರ್ಗವ’ ಚಿತ್ರವನ್ನು ‘ಸೂರಪ್ಪ’ ಬಾಬು ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ‍ಜನ್ಯ ಸಂಗೀತ, ರಾಜರತ್ನಂ ಅವರ ಛಾಯಾಗ್ರಹಣವಿದೆ. ಉಳಿದ ಕಲಾವಿದರು ಮತ್ತು ತಂತ್ರಜ್ಞರ ಹೆಸರುಗಳು ಇನ್ನಷ್ಟೇ ಘೋಷಣೆಯಾಗಬೇಕಿವೆ.

ಆಂದೋಲನ ಡೆಸ್ಕ್

Recent Posts

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

8 mins ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

20 mins ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

41 mins ago

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…

49 mins ago

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

2 hours ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

3 hours ago