ಮನರಂಜನೆ

ಗಂಡ-ಹೆಂಡತಿ ಮತ್ತು ಅವನು ; ‘ಉಸಿರು’ ಚಿತ್ರದ ಟೀಸರ್‌ ಬಿಡುಗಡೆ

ಕಳೆದ ವರ್ಷ ‘ದ್ವಂದ್ವ’ ಚಿತ್ರದಲ್ಲಿ ಕನ್ನಡಿಗರಿಗೆ ಮುಖ ತೋರಿಸಿದ್ದ ತಿಲಕ್‍, ಈಗ ಇನ್ನೊಂದು ಹೊಸ ಚಿತ್ರದೊಂದಿಗೆ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ಅವರು ‘ಉಸಿರು’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವನ್ನು ಆರ್.ಎಸ್.ಪಿ. ಪ್ರೊಡಕ್ಷನ್ಸ್ ಬ್ಯಾನರ್‍ನಲ್ಲಿ ಲಕ್ಷ್ಮಿ ಹರೀಶ್‍ ನಿರ್ಮಿಸಿದರೆ, ಪ್ರಭಾಕರ್‌ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದ್ದು, ಶ್ರೀನಗರ ಕಿಟ್ಟಿ ಮತ್ತು ರವಿ ಆರ್‌. ಗರಣಿ ಟೀಸರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

ಪೊಲೀಸ್ ಅಧಿಕಾರಿಯೊಬ್ಬ ಆತಂಕಕಾರಿ ವ್ಯಕ್ತಿಯಿಂದ ತನ್ನ ಹೆಂಡತಿಯನ್ನು ಹೇಗೆ ಕಾಪಾಡಿಕೊಳ್ಳುತ್ತಾನೆ ಎಂಬುದು ‘ಉಸಿರು’ ಚಿತ್ರದ ಕಥೆಯಾಗಿದ್ದು, ಈ ಚಿತ್ರಕ್ಕಾಗಿ ಬೆಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಮೂಡಿಗೆರೆ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.

ನಿರ್ದೇಶಕರಾಗಬೇಕೆಂಬುದು ಪ್ರಭಾಕರ್‌ ಅವರ 12 ವರ್ಷಗಳ ಕನಸಂತೆ. ‘ಈ ಹಿಂದೆ ಒಂದೆರಡು ತಮಿಳು ಸಿನಿಮಾಗಳಿಗೆ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದೆ. ಇದು ನನ್ನ ನಿರ್ದೇಶನದ ಪ್ರಥಮ ಚಿತ್ರ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ. ಚಿತ್ರದಲ್ಲಿ ಎಲ್ಲಾ ರೀತಿಯ ಎಮೋಶನ್ಸ್ ಇದ್ದು, ಪ್ರತಿ ಪಾತ್ರಕ್ಕೂ ಅದರದೇ ಆದ ಗುರುತು ಇರುತ್ತದೆ, ಯಾವ ಪಾತ್ರವೂ ಹೀಗೆ ಬಂದು ಹೋಗುವುದಲ್ಲ. ಚಿತ್ರಕ್ಕೆ ‘07.08.09’ ಎಂಬ ಅಡಿಬರಹವಿದೆ. ಇಡೀ ಚಿತ್ರ ಈ ವಿಷಯದ ಮೇಲೆ ಸುತ್ತುತ್ತದೆ. ಈ ಚಿತ್ರದಲ್ಲಿ ತಿಲಕ್ ಒಬ್ಬ ಪೊಲೀಸ್ ಅಧಿಕಾರಿಯಾಗಿದ್ದು, ಅವರ ಪತ್ನಿಯ ಪಾತ್ರದಲ್ಲಿ ಪ್ರಿಯಾ ಹೆಗ್ಡೆ ನಟಿಸಿದ್ದಾರೆ’ ಎಂದು ಹೇಳಿದರು.

ಈ ತರಹದ ಪರಿಕಲ್ಪನೆ ತಾನೆಲ್ಲೂ ಕೇಳಿರಲಿಲ್ಲ ಎನ್ನುವ ತಿಲಕ್‍, ‘07.08.09 ಎನ್ನುವ ಕೋಡ್ ವರ್ಡ್ ಚಿತ್ರದಲ್ಲಿ ತುಂಬಾ ಪ್ರಮುಖ ಪಾತ್ರವಹಿಸುತ್ತದೆ. ಈ ಚಿತ್ರ ಪ್ರೇಕ್‍ಷಕರಿಗೆ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ’ ಎಂದರೆ, ‘ನನ್ನ ಪಾತ್ರಕ್ಕೆ ಹಲವಾರು ಆಯಾಮಗಳಿವೆ ಇದೆ. ನನ್ನ ಪಾತ್ರದಿಂದ ಚಿತ್ರಕಥೆಗೆ ದೊಡ್ಡ ತಿರುವು ಸಿಗುತ್ತದೆ’ ಎಂದು ನಾಯಕಿ ಪ್ರಿಯಾ ಹೆಗ್ಡೆ.

ನಿರ್ಮಾಪಕಿ ಲಕ್ಷ್ಮಿ ಹರೀಶ್ ಮಾತನಾಡಿ, ‘ಕೇಳಿದ್ದು ಸುಳ್ಳಾಗಬಹುದು, ನೋಡಿದ್ದು ಸುಳ್ಳಾಗಬಹುದು, ನಿಧಾನಿಸಿ ಯೋಚಿಸಿದಾಗ ನಿಜವು ತಿಳಿವುದು ಎಂಬ ಅಂಶವನ್ನಿಟ್ಟುಕೊಂಡು ಈ ಚಿತ್ರ ಮಾಡಿದ್ದೇವೆ. ಈ ಕಥೆ ಬಹಳ ಇಷ್ಟವಾಗಿ ಚಿತ್ರ ಪ್ರಾರಂಭಿಸಿದೆವು. ಚಿತ್ರದ ಡಿಐ ಕೆಲಸಗಳು ನಡೆಯುತ್ತಿದ್ದು, ಸದ್ಯದಲ್ಲೇ ಬಿಡುಗಡೆ ಆಗಲಿದೆ’ ಎಂದರು.

‘ಉಸಿರು’ ಚಿತ್ರಕ್ಕೆ ಗಣೇಶ್‍ ನಾರಾಯಣನ್‍ ಸಂಗೀತ ಸಂಯೋಜಿಸಿದರೆ, ಭೈರವರಾಮ ಸಂಭಾಷಣೆ ರಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

3 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

4 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

5 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

5 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

6 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

7 hours ago