ಮನರಂಜನೆ

ಗಂಡ-ಹೆಂಡತಿ ಮತ್ತು ಅವನು ; ‘ಉಸಿರು’ ಚಿತ್ರದ ಟೀಸರ್‌ ಬಿಡುಗಡೆ

ಕಳೆದ ವರ್ಷ ‘ದ್ವಂದ್ವ’ ಚಿತ್ರದಲ್ಲಿ ಕನ್ನಡಿಗರಿಗೆ ಮುಖ ತೋರಿಸಿದ್ದ ತಿಲಕ್‍, ಈಗ ಇನ್ನೊಂದು ಹೊಸ ಚಿತ್ರದೊಂದಿಗೆ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ಅವರು ‘ಉಸಿರು’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವನ್ನು ಆರ್.ಎಸ್.ಪಿ. ಪ್ರೊಡಕ್ಷನ್ಸ್ ಬ್ಯಾನರ್‍ನಲ್ಲಿ ಲಕ್ಷ್ಮಿ ಹರೀಶ್‍ ನಿರ್ಮಿಸಿದರೆ, ಪ್ರಭಾಕರ್‌ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದ್ದು, ಶ್ರೀನಗರ ಕಿಟ್ಟಿ ಮತ್ತು ರವಿ ಆರ್‌. ಗರಣಿ ಟೀಸರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

ಪೊಲೀಸ್ ಅಧಿಕಾರಿಯೊಬ್ಬ ಆತಂಕಕಾರಿ ವ್ಯಕ್ತಿಯಿಂದ ತನ್ನ ಹೆಂಡತಿಯನ್ನು ಹೇಗೆ ಕಾಪಾಡಿಕೊಳ್ಳುತ್ತಾನೆ ಎಂಬುದು ‘ಉಸಿರು’ ಚಿತ್ರದ ಕಥೆಯಾಗಿದ್ದು, ಈ ಚಿತ್ರಕ್ಕಾಗಿ ಬೆಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಮೂಡಿಗೆರೆ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.

ನಿರ್ದೇಶಕರಾಗಬೇಕೆಂಬುದು ಪ್ರಭಾಕರ್‌ ಅವರ 12 ವರ್ಷಗಳ ಕನಸಂತೆ. ‘ಈ ಹಿಂದೆ ಒಂದೆರಡು ತಮಿಳು ಸಿನಿಮಾಗಳಿಗೆ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದೆ. ಇದು ನನ್ನ ನಿರ್ದೇಶನದ ಪ್ರಥಮ ಚಿತ್ರ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ. ಚಿತ್ರದಲ್ಲಿ ಎಲ್ಲಾ ರೀತಿಯ ಎಮೋಶನ್ಸ್ ಇದ್ದು, ಪ್ರತಿ ಪಾತ್ರಕ್ಕೂ ಅದರದೇ ಆದ ಗುರುತು ಇರುತ್ತದೆ, ಯಾವ ಪಾತ್ರವೂ ಹೀಗೆ ಬಂದು ಹೋಗುವುದಲ್ಲ. ಚಿತ್ರಕ್ಕೆ ‘07.08.09’ ಎಂಬ ಅಡಿಬರಹವಿದೆ. ಇಡೀ ಚಿತ್ರ ಈ ವಿಷಯದ ಮೇಲೆ ಸುತ್ತುತ್ತದೆ. ಈ ಚಿತ್ರದಲ್ಲಿ ತಿಲಕ್ ಒಬ್ಬ ಪೊಲೀಸ್ ಅಧಿಕಾರಿಯಾಗಿದ್ದು, ಅವರ ಪತ್ನಿಯ ಪಾತ್ರದಲ್ಲಿ ಪ್ರಿಯಾ ಹೆಗ್ಡೆ ನಟಿಸಿದ್ದಾರೆ’ ಎಂದು ಹೇಳಿದರು.

ಈ ತರಹದ ಪರಿಕಲ್ಪನೆ ತಾನೆಲ್ಲೂ ಕೇಳಿರಲಿಲ್ಲ ಎನ್ನುವ ತಿಲಕ್‍, ‘07.08.09 ಎನ್ನುವ ಕೋಡ್ ವರ್ಡ್ ಚಿತ್ರದಲ್ಲಿ ತುಂಬಾ ಪ್ರಮುಖ ಪಾತ್ರವಹಿಸುತ್ತದೆ. ಈ ಚಿತ್ರ ಪ್ರೇಕ್‍ಷಕರಿಗೆ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ’ ಎಂದರೆ, ‘ನನ್ನ ಪಾತ್ರಕ್ಕೆ ಹಲವಾರು ಆಯಾಮಗಳಿವೆ ಇದೆ. ನನ್ನ ಪಾತ್ರದಿಂದ ಚಿತ್ರಕಥೆಗೆ ದೊಡ್ಡ ತಿರುವು ಸಿಗುತ್ತದೆ’ ಎಂದು ನಾಯಕಿ ಪ್ರಿಯಾ ಹೆಗ್ಡೆ.

ನಿರ್ಮಾಪಕಿ ಲಕ್ಷ್ಮಿ ಹರೀಶ್ ಮಾತನಾಡಿ, ‘ಕೇಳಿದ್ದು ಸುಳ್ಳಾಗಬಹುದು, ನೋಡಿದ್ದು ಸುಳ್ಳಾಗಬಹುದು, ನಿಧಾನಿಸಿ ಯೋಚಿಸಿದಾಗ ನಿಜವು ತಿಳಿವುದು ಎಂಬ ಅಂಶವನ್ನಿಟ್ಟುಕೊಂಡು ಈ ಚಿತ್ರ ಮಾಡಿದ್ದೇವೆ. ಈ ಕಥೆ ಬಹಳ ಇಷ್ಟವಾಗಿ ಚಿತ್ರ ಪ್ರಾರಂಭಿಸಿದೆವು. ಚಿತ್ರದ ಡಿಐ ಕೆಲಸಗಳು ನಡೆಯುತ್ತಿದ್ದು, ಸದ್ಯದಲ್ಲೇ ಬಿಡುಗಡೆ ಆಗಲಿದೆ’ ಎಂದರು.

‘ಉಸಿರು’ ಚಿತ್ರಕ್ಕೆ ಗಣೇಶ್‍ ನಾರಾಯಣನ್‍ ಸಂಗೀತ ಸಂಯೋಜಿಸಿದರೆ, ಭೈರವರಾಮ ಸಂಭಾಷಣೆ ರಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…

11 mins ago

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

2 hours ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

2 hours ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

3 hours ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

5 hours ago

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…

5 hours ago