ಮನರಂಜನೆ

ಕೊನೆಗೂ ಬರುತ್ತಿದ್ದಾನೆ ‘ವಾಮನ’; ಏಪ್ರಿಲ್‍.10ಕ್ಕೆ ಚಿತ್ರ ಬಿಡುಗಡೆ

ಧನ್ವೀರ್‍ ಗೌಡ ಅಭಿನಯದ ‘ವಾಮನ’ ಚಿತ್ರವು 2023ರ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗುತ್ತದೆ ಎಂದು ಚಿತ್ರತಂಡ ಘೋಷಿಸಿತ್ತು. ಆದರೆ, ಅಂದುಕೊಂಡಂತೆ ಚಿತ್ರ ಬಿಡುಗಡೆಯಾಗಲೇ ಇಲ್ಲ. ಅದಾದ ಮೇಲೆ ಧನ್ವೀರ್‍ ಅಭಿನಯದ ‘ಕೈವ’ ಚಿತ್ರ ಬಿಡುಗಡೆಯಾದರೂ ‘ವಾಮನ’ ಮಾತ್ರ ಬರಲಿಲ್ಲ. ನಾಯಕ ಮತ್ತು ನಿರ್ಮಾಪಕರ ನಡುವಿನ ಮುನಿಸಿನಿಂದ ಚಿತ್ರ ಬಿಡುಗಡೆಯಾಗುವುದೇ ಸಂಶಯ ಎಂಬ ಮಾತುಗಳು ಕೇಳಿ ಬಂದಿದ್ದವು.

ಹೀಗಿರುವಾಗಲೇ, ಒಂದೂವರೆ ವರ್ಷಗಳ ನಂತರ ಕೊನೆಗೂ ‘ವಾಮನ’ ಬಿಡುಗಡೆಯಾವುದಕ್ಕೆ ಸಿದ್ಧನಾಗಿದ್ದಾನೆ. ಚಿತ್ರವನ್ನು ಏಪ್ರಿಲ್‍.10ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ. ಪ್ರಚಾರದ ಮೊದಲ ಹಂತವಾಗಿ ಚಿತ್ರದ ತಾಯಿ ಸೆಂಟಿಮೆಂಟ್‍ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ.

ಈ ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದಿರುವ ‘ಕಂದ ಕನಸ ರೂಪ …’ ಎಂಬ ತಾಯಿ – ಮಗನ ಬಾಂಧವ್ಯದ ಕುರಿತಾದ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ‘ಕಾಂತಾರ’ ಖ್ಯಾತಿಯ ವೆಂಕಟೇಶ್ ಡಿ.ಸಿ ಈ ಹಾಡನ್ನು ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿರುವ ಈ ಹಾಡು A2 music ಚಾನಲ್‍ನಲ್ಲಿ ಬಿಡುಗಡೆಯಾಗಿದೆ.

ಈ ಹಾಡನ್ನು ವಿಶ್ವದ ಎಲ್ಲಾ ತಾಯಂದಿರಿಗೆ ಅರ್ಪಿಸುತ್ತೇನೆ ಎಂದು ಮಾತನಾಡಿದ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಶಂಕರ್ ರಾಮನ್, ‘ನನಗೆ ‘ಕೈ ತುತ್ತು ಕೊಟ್ಟವಳೆ …’ ಹಾಗೂ ‘ಬೇಡುವೆನು ವರವನು …’ ಹಾಡುಗಳು ತುಂಬಾ ಇಷ್ಟ. ಅಂತಹುದೇ ಹಾಡು ನಮ್ಮ ಚಿತ್ರಕ್ಕೆ ಬೇಕು ಎಂದು ಕೇಳಿದಾಗ ಪ್ರಮೋದ್ ಮರವಂತೆ ಈ ಹಾಡನ್ನು ಬರೆದುಕೊಟ್ಟಿದ್ದಾರೆ. ತಾಯಿ ತನ್ನ ಬವಣೆಗಳನ್ನು ಮಗನ ಮುಂದೆ ಹೇಳಿಕೊಳ್ಳುವ ಈ ಹಾಡು ಎಲ್ಲರಿಗೂ ಇಷ್ಟವಾಗಲಿದೆ’ ಎಂದರು.

ಚಿತ್ರ ಬಿಡುಗಡೆಯ ದಿನಾಂಕ ಘೋಷಣೆಯಾದರೂ, ಮುನಿಸು ಮರೆಯಾದಂತೆ ಕಾಣಲಿಲ್ಲ. ಸಮಾರಂಭದಲ್ಲಿ ಹಾಜರಿದ್ದರೂ ನಿರ್ಮಾಪಕ ಚೇತನ್‍ ಗೌಡ ಮತ್ತು ನಾಯಕ ಧನ್ವೀರ್‍ ಗೌಡ ಜೊತೆಯಾಗಿ ಕಾಣಿಸಿಕೊಳ್ಳಲಿಲ್ಲ. ಇಷ್ಟಕ್ಕೂ ಚಿತ್ರದ ಬಿಡುಗಡೆ ತಡವಾಗಿದ್ದೇಕೆ ಎಂಬ ಮಾಧ್ಯಮದವರ ಪ್ರಶ್ನೆಗೆ, ‘ವ್ಯಾಪಾರದ ವಿಷಯವಾಗಿ ಚಿತ್ರ ಸ್ವಲ್ಪ ತಡವಾಯಿತು’ ಎಂದು ನಿರ್ಮಾಪಕರು ಹೇಳಿದ್ದಾರೆ.

‘ವಾಮನ’ ಚಿತ್ರದಲ್ಲಿ ಧನ್ವೀರ್‌ಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದು, ಜೊತೆಗೆ ತಾರಾ, ಶಿವರಾಜ್ ಕೆ.ಆರ್.ಪೇಟೆ, ಕಾಕ್ರೋಚ್‍ ಸುಧಿ ಮುಂತಾದವರು ಅಭಿನಯಿಸಿದ್ದಾರೆ. ಮಹೇಂದ್ರ ಸಿಂಹ ಅವರ ಛಾಯಾಗ್ರಹಣ ಮತ್ತು ಅಜನೀಶ್ ಲೋಕನಾಥ್ ಸಂಗೀತ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…

38 mins ago

ನಾಲ್ಕೈದು ದಿನಗಳ ನಂತರ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…

54 mins ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

2 hours ago

ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಔತಣಕೂಟ: ಯಾವ ದಿನ ಗೊತ್ತಾ.?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…

2 hours ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…

3 hours ago

ಹಳೆ ಕೆಸರೆಯ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಸದ ರಾಶಿ

ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…

4 hours ago