ಮನರಂಜನೆ

ಕೊನೆಗೂ ಬರುತ್ತಿದ್ದಾನೆ ‘ವಾಮನ’; ಏಪ್ರಿಲ್‍.10ಕ್ಕೆ ಚಿತ್ರ ಬಿಡುಗಡೆ

ಧನ್ವೀರ್‍ ಗೌಡ ಅಭಿನಯದ ‘ವಾಮನ’ ಚಿತ್ರವು 2023ರ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗುತ್ತದೆ ಎಂದು ಚಿತ್ರತಂಡ ಘೋಷಿಸಿತ್ತು. ಆದರೆ, ಅಂದುಕೊಂಡಂತೆ ಚಿತ್ರ ಬಿಡುಗಡೆಯಾಗಲೇ ಇಲ್ಲ. ಅದಾದ ಮೇಲೆ ಧನ್ವೀರ್‍ ಅಭಿನಯದ ‘ಕೈವ’ ಚಿತ್ರ ಬಿಡುಗಡೆಯಾದರೂ ‘ವಾಮನ’ ಮಾತ್ರ ಬರಲಿಲ್ಲ. ನಾಯಕ ಮತ್ತು ನಿರ್ಮಾಪಕರ ನಡುವಿನ ಮುನಿಸಿನಿಂದ ಚಿತ್ರ ಬಿಡುಗಡೆಯಾಗುವುದೇ ಸಂಶಯ ಎಂಬ ಮಾತುಗಳು ಕೇಳಿ ಬಂದಿದ್ದವು.

ಹೀಗಿರುವಾಗಲೇ, ಒಂದೂವರೆ ವರ್ಷಗಳ ನಂತರ ಕೊನೆಗೂ ‘ವಾಮನ’ ಬಿಡುಗಡೆಯಾವುದಕ್ಕೆ ಸಿದ್ಧನಾಗಿದ್ದಾನೆ. ಚಿತ್ರವನ್ನು ಏಪ್ರಿಲ್‍.10ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ. ಪ್ರಚಾರದ ಮೊದಲ ಹಂತವಾಗಿ ಚಿತ್ರದ ತಾಯಿ ಸೆಂಟಿಮೆಂಟ್‍ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ.

ಈ ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದಿರುವ ‘ಕಂದ ಕನಸ ರೂಪ …’ ಎಂಬ ತಾಯಿ – ಮಗನ ಬಾಂಧವ್ಯದ ಕುರಿತಾದ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ‘ಕಾಂತಾರ’ ಖ್ಯಾತಿಯ ವೆಂಕಟೇಶ್ ಡಿ.ಸಿ ಈ ಹಾಡನ್ನು ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿರುವ ಈ ಹಾಡು A2 music ಚಾನಲ್‍ನಲ್ಲಿ ಬಿಡುಗಡೆಯಾಗಿದೆ.

ಈ ಹಾಡನ್ನು ವಿಶ್ವದ ಎಲ್ಲಾ ತಾಯಂದಿರಿಗೆ ಅರ್ಪಿಸುತ್ತೇನೆ ಎಂದು ಮಾತನಾಡಿದ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಶಂಕರ್ ರಾಮನ್, ‘ನನಗೆ ‘ಕೈ ತುತ್ತು ಕೊಟ್ಟವಳೆ …’ ಹಾಗೂ ‘ಬೇಡುವೆನು ವರವನು …’ ಹಾಡುಗಳು ತುಂಬಾ ಇಷ್ಟ. ಅಂತಹುದೇ ಹಾಡು ನಮ್ಮ ಚಿತ್ರಕ್ಕೆ ಬೇಕು ಎಂದು ಕೇಳಿದಾಗ ಪ್ರಮೋದ್ ಮರವಂತೆ ಈ ಹಾಡನ್ನು ಬರೆದುಕೊಟ್ಟಿದ್ದಾರೆ. ತಾಯಿ ತನ್ನ ಬವಣೆಗಳನ್ನು ಮಗನ ಮುಂದೆ ಹೇಳಿಕೊಳ್ಳುವ ಈ ಹಾಡು ಎಲ್ಲರಿಗೂ ಇಷ್ಟವಾಗಲಿದೆ’ ಎಂದರು.

ಚಿತ್ರ ಬಿಡುಗಡೆಯ ದಿನಾಂಕ ಘೋಷಣೆಯಾದರೂ, ಮುನಿಸು ಮರೆಯಾದಂತೆ ಕಾಣಲಿಲ್ಲ. ಸಮಾರಂಭದಲ್ಲಿ ಹಾಜರಿದ್ದರೂ ನಿರ್ಮಾಪಕ ಚೇತನ್‍ ಗೌಡ ಮತ್ತು ನಾಯಕ ಧನ್ವೀರ್‍ ಗೌಡ ಜೊತೆಯಾಗಿ ಕಾಣಿಸಿಕೊಳ್ಳಲಿಲ್ಲ. ಇಷ್ಟಕ್ಕೂ ಚಿತ್ರದ ಬಿಡುಗಡೆ ತಡವಾಗಿದ್ದೇಕೆ ಎಂಬ ಮಾಧ್ಯಮದವರ ಪ್ರಶ್ನೆಗೆ, ‘ವ್ಯಾಪಾರದ ವಿಷಯವಾಗಿ ಚಿತ್ರ ಸ್ವಲ್ಪ ತಡವಾಯಿತು’ ಎಂದು ನಿರ್ಮಾಪಕರು ಹೇಳಿದ್ದಾರೆ.

‘ವಾಮನ’ ಚಿತ್ರದಲ್ಲಿ ಧನ್ವೀರ್‌ಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದು, ಜೊತೆಗೆ ತಾರಾ, ಶಿವರಾಜ್ ಕೆ.ಆರ್.ಪೇಟೆ, ಕಾಕ್ರೋಚ್‍ ಸುಧಿ ಮುಂತಾದವರು ಅಭಿನಯಿಸಿದ್ದಾರೆ. ಮಹೇಂದ್ರ ಸಿಂಹ ಅವರ ಛಾಯಾಗ್ರಹಣ ಮತ್ತು ಅಜನೀಶ್ ಲೋಕನಾಥ್ ಸಂಗೀತ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ…

18 mins ago

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…

40 mins ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

2 hours ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

3 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

4 hours ago

ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷ: ಇನ್ನೂ ಚೇತರಿಸಿಕೊಳ್ಳದ ಪಾಕ್‌

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ.…

4 hours ago