ಮನರಂಜನೆ

ಬಗೆಹರಿದ ‘ವಾರಣಾಸಿ’ ಶೀರ್ಷಿಕೆ ವಿವಾದ; ಹೊಸ ಹೆಸರು ಏನು ಗೊತ್ತಾ?

ಜನಪ್ರಿಯ ನಿರ್ದೇಶಕ ಎಸ್‍.ಎಸ್‍. ರಾಜಮೌಳಿ ಎರಡು ವಾರಗಳ ಹಿಂದಷ್ಟೇ ತಮ್ಮ ಹೊಸ ಚಿತ್ರ ‘ವಾರಣಾಸಿ’ಯ ಟೈಟಲ್‍ ಟೀಸರ್ ಬಿಡುಗಡೆ ಮಾಡಿದ್ದರು. ಹೈದರಾಬಾದ್‍ನಲ್ಲಿ ನಡೆದ ಈ ಸಮಾರಂಭ, ಜಗತ್ತಿನಾದ್ಯಂತ ಸುದ್ದಿ ಮಾಡಿತ್ತು. ಯಾವಾಗ, ಶೀರ್ಷಿಕೆ ಅನಾವರಣವಾಗಿತ್ತೋ, ಆಗ ಹೊಸ ವಿವಾದವೊಂದು ಹುಟ್ಟಿಕೊಂಡಿತ್ತು. ಈಗ ಆ ವಿವಾದ ಬಗೆಹರಿದಿದೆ ಎಂಬ ಸುದ್ದಿಯೊಂದು ಕೇಳಿಬರುತ್ತಿದೆ.

ಹೌದು, ‘ವಾರಣಾಸಿ’ ಚಿತ್ರವನ್ನು ರಾಜಮಳಿಗೂ ಮೊದಲೇ ರಾಮ ಬ್ರಹ್ಮ ಹನುಮ ಕ್ರಿಯೇಷನಸ್ ಬ್ಯಾನರ್ ಅಡಿ ಸಿ.ಎಚ್‍. ಸುಬ್ಬಾರೆಡ್ಡಿ ಎನ್ನುವವರು 2023ರ ಜುಲೈ 24ರಂದು ‘ವಾರಣಾಸಿ’ ಎಂಬ ಹೆಸರನ್ನು ತೆಲುಗು ಚಲನಚಿತ್ರ ನಿರ್ಮಾಪಕರ ಕೌನ್ಸಿಲ್‍ನಲ್ಲಿ ನೋಂದಾಯಿಸಿದ್ದರು. ಆ ನಂತರ ಈ ವರ್ಷದ ಜೂನ್‍ 24ರಂದು ಅದನ್ನು ನವೀಕರಿಸಿದ್ದು, 2026ರ ಜುಲೈ 23ರವರೆಗೂ ‘ವಾರಣಾಸಿ’ ಎಂಬ ಶೀರ್ಷಿಕೆಯು ಅವರ ಬಳಿಯೇ ಇರುತ್ತದೆ. ಹೀಗಿರುವಾಗ, ತಮಗೆ ಕೊಟ್ಟ ಶೀರ್ಷಿಕೆಯನ್ನು ರಾಜಮೌಳಿ ಬಳಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ತಗಾದೆ ತೆಗೆದಿದ್ದರು. ಅಷ್ಟೇ ಅಲ್ಲ, ತಮ್ಮ ವಾದಕ್ಕೆ ಪೂರಕವಾದ ಮಾಹಿತಿಯನ್ನು ಸಲ್ಲಿಸಿದ್ದರು.

ಇದನ್ನು ಓದಿ: ‘ಆಜಾದ್ ಭಾರತ್’ ಚಿತ್ರದೊಂದಿಗೆ ಬಂದ ರೂಪಾ ಅಯ್ಯರ್: ಜನವರಿ.2ರಂದು ಚಿತ್ರ ಬಿಡುಗಡೆ

ಇದೀಗ, ಈ ಶೀರ್ಷಿಕೆ ವಿವಾದ ಬಗೆಹರಿದಿದೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ, ಸುಬ್ಬಾರೆಡ್ಡಿ ಬರೀ ತೆಲುಗು ಭಾಷೆಯಲ್ಲಿ ‘ವಾರಣಾಸಿ’ ಚಿತ್ರವನ್ನು ನಿರ್ಮಿಸುವುದಕ್ಕೆ ಉದ್ದೇಶಿಸಿದ್ದರಂತೆ. ಆದರೆ, ರಾಜಮೌಳಿ’ ಹಾಗಲ್ಲ. ತಮ್ಮ ‘ವಾರಣಾಸಿ’ ಚಿತ್ರವನ್ನು ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲೀಷ್‍ ಸೇರಿದಂತೆ ಒಟ್ಟು ಆರು ಭಾಷೆಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದರು. ಆರೂ ಭಾಷೆಗಳಲ್ಲಿ ಸಲ್ಲುವಂತೆ ‘ವಾರಣಾಸಿ’ ಎಂಬ ಕಾಮನ್‍ ಹೆಸರನ್ನು ಇಟ್ಟಿದ್ದರು.

ಇದೀಗ ಅವರು ತೆಲುಗು ಚಿತ್ರಗ ‘ರಾಜಮೌಳಿಸ್ ವಾರಣಾಸಿ’ ಎಂದು ಹೆಸರು ಬದಲಾಯಿಸಿದ್ದು, ಮಿಕ್ಕ ಐದು ಭಾಷೆಗಳಲ್ಲಿ ‘ವಾರಣಾಸಿ’ ಎಂಬ ಹೆಸರಿನಲ್ಲೇ ಬಿಡುಗಡೆಯಾಗಲಿದೆಯಂತೆ.

ಇದೊಂದು ಪೌರಾಣಿಕ ಹಿನ್ನೆಲೆಯ ಫ್ಯಾಂಟಸಿ ಚಿತ್ರವಾಗಿದ್ದು, ‘ವಾರಣಾಸಿ’ ಚಿತ್ರವನ್ನು ಶ್ರೀ ದುರ್ಗಾ ಆರ್ಟ್ಸ್ ಮತ್ತು ಶೋಯಿಂಗ್‍ ಬಿಝಿನೆಸ್‍ ಸಂಸ್ಥೆಗಳಡಿ ಕೆ.ಎಲ್‍. ನಾರಾಯಣ ಮತ್ತು ಎಸ್‍.ಎಸ್. ಕಾರ್ತಿಕೇಯ ಜೊತೆಯಾಗಿ ನಿರ್ಮಿಸುತ್ತಿದ್ದು, ರಾಜಮೌಳಿ ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಮಹೇಶ್‍ ಬಾಬು, ರುದ್ರ ಎಂಬ ಪಾತ್ರದಲ್ಲಿ ಅಭಿನಯಿಸಿದರೆ, ಪ್ರಿಯಾಂಕಾ ಚೋಪ್ರಾ ಮತ್ತು ಪೃಥ್ವಿರಾಜ್‍ ಸುಕುಮಾರನ್‍, ಮಂದಾಕಿನಿ ಮತ್ತು ಕುಂಭ ಎಂಬ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಎಂ.ಎಂ. ಕೀರವಾಣಿ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

10 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

10 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

10 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

10 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

11 hours ago