ಮನರಂಜನೆ

ಬಗೆಹರಿದ ‘ವಾರಣಾಸಿ’ ಶೀರ್ಷಿಕೆ ವಿವಾದ; ಹೊಸ ಹೆಸರು ಏನು ಗೊತ್ತಾ?

ಜನಪ್ರಿಯ ನಿರ್ದೇಶಕ ಎಸ್‍.ಎಸ್‍. ರಾಜಮೌಳಿ ಎರಡು ವಾರಗಳ ಹಿಂದಷ್ಟೇ ತಮ್ಮ ಹೊಸ ಚಿತ್ರ ‘ವಾರಣಾಸಿ’ಯ ಟೈಟಲ್‍ ಟೀಸರ್ ಬಿಡುಗಡೆ ಮಾಡಿದ್ದರು. ಹೈದರಾಬಾದ್‍ನಲ್ಲಿ ನಡೆದ ಈ ಸಮಾರಂಭ, ಜಗತ್ತಿನಾದ್ಯಂತ ಸುದ್ದಿ ಮಾಡಿತ್ತು. ಯಾವಾಗ, ಶೀರ್ಷಿಕೆ ಅನಾವರಣವಾಗಿತ್ತೋ, ಆಗ ಹೊಸ ವಿವಾದವೊಂದು ಹುಟ್ಟಿಕೊಂಡಿತ್ತು. ಈಗ ಆ ವಿವಾದ ಬಗೆಹರಿದಿದೆ ಎಂಬ ಸುದ್ದಿಯೊಂದು ಕೇಳಿಬರುತ್ತಿದೆ.

ಹೌದು, ‘ವಾರಣಾಸಿ’ ಚಿತ್ರವನ್ನು ರಾಜಮಳಿಗೂ ಮೊದಲೇ ರಾಮ ಬ್ರಹ್ಮ ಹನುಮ ಕ್ರಿಯೇಷನಸ್ ಬ್ಯಾನರ್ ಅಡಿ ಸಿ.ಎಚ್‍. ಸುಬ್ಬಾರೆಡ್ಡಿ ಎನ್ನುವವರು 2023ರ ಜುಲೈ 24ರಂದು ‘ವಾರಣಾಸಿ’ ಎಂಬ ಹೆಸರನ್ನು ತೆಲುಗು ಚಲನಚಿತ್ರ ನಿರ್ಮಾಪಕರ ಕೌನ್ಸಿಲ್‍ನಲ್ಲಿ ನೋಂದಾಯಿಸಿದ್ದರು. ಆ ನಂತರ ಈ ವರ್ಷದ ಜೂನ್‍ 24ರಂದು ಅದನ್ನು ನವೀಕರಿಸಿದ್ದು, 2026ರ ಜುಲೈ 23ರವರೆಗೂ ‘ವಾರಣಾಸಿ’ ಎಂಬ ಶೀರ್ಷಿಕೆಯು ಅವರ ಬಳಿಯೇ ಇರುತ್ತದೆ. ಹೀಗಿರುವಾಗ, ತಮಗೆ ಕೊಟ್ಟ ಶೀರ್ಷಿಕೆಯನ್ನು ರಾಜಮೌಳಿ ಬಳಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ತಗಾದೆ ತೆಗೆದಿದ್ದರು. ಅಷ್ಟೇ ಅಲ್ಲ, ತಮ್ಮ ವಾದಕ್ಕೆ ಪೂರಕವಾದ ಮಾಹಿತಿಯನ್ನು ಸಲ್ಲಿಸಿದ್ದರು.

ಇದನ್ನು ಓದಿ: ‘ಆಜಾದ್ ಭಾರತ್’ ಚಿತ್ರದೊಂದಿಗೆ ಬಂದ ರೂಪಾ ಅಯ್ಯರ್: ಜನವರಿ.2ರಂದು ಚಿತ್ರ ಬಿಡುಗಡೆ

ಇದೀಗ, ಈ ಶೀರ್ಷಿಕೆ ವಿವಾದ ಬಗೆಹರಿದಿದೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ, ಸುಬ್ಬಾರೆಡ್ಡಿ ಬರೀ ತೆಲುಗು ಭಾಷೆಯಲ್ಲಿ ‘ವಾರಣಾಸಿ’ ಚಿತ್ರವನ್ನು ನಿರ್ಮಿಸುವುದಕ್ಕೆ ಉದ್ದೇಶಿಸಿದ್ದರಂತೆ. ಆದರೆ, ರಾಜಮೌಳಿ’ ಹಾಗಲ್ಲ. ತಮ್ಮ ‘ವಾರಣಾಸಿ’ ಚಿತ್ರವನ್ನು ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲೀಷ್‍ ಸೇರಿದಂತೆ ಒಟ್ಟು ಆರು ಭಾಷೆಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದರು. ಆರೂ ಭಾಷೆಗಳಲ್ಲಿ ಸಲ್ಲುವಂತೆ ‘ವಾರಣಾಸಿ’ ಎಂಬ ಕಾಮನ್‍ ಹೆಸರನ್ನು ಇಟ್ಟಿದ್ದರು.

ಇದೀಗ ಅವರು ತೆಲುಗು ಚಿತ್ರಗ ‘ರಾಜಮೌಳಿಸ್ ವಾರಣಾಸಿ’ ಎಂದು ಹೆಸರು ಬದಲಾಯಿಸಿದ್ದು, ಮಿಕ್ಕ ಐದು ಭಾಷೆಗಳಲ್ಲಿ ‘ವಾರಣಾಸಿ’ ಎಂಬ ಹೆಸರಿನಲ್ಲೇ ಬಿಡುಗಡೆಯಾಗಲಿದೆಯಂತೆ.

ಇದೊಂದು ಪೌರಾಣಿಕ ಹಿನ್ನೆಲೆಯ ಫ್ಯಾಂಟಸಿ ಚಿತ್ರವಾಗಿದ್ದು, ‘ವಾರಣಾಸಿ’ ಚಿತ್ರವನ್ನು ಶ್ರೀ ದುರ್ಗಾ ಆರ್ಟ್ಸ್ ಮತ್ತು ಶೋಯಿಂಗ್‍ ಬಿಝಿನೆಸ್‍ ಸಂಸ್ಥೆಗಳಡಿ ಕೆ.ಎಲ್‍. ನಾರಾಯಣ ಮತ್ತು ಎಸ್‍.ಎಸ್. ಕಾರ್ತಿಕೇಯ ಜೊತೆಯಾಗಿ ನಿರ್ಮಿಸುತ್ತಿದ್ದು, ರಾಜಮೌಳಿ ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಮಹೇಶ್‍ ಬಾಬು, ರುದ್ರ ಎಂಬ ಪಾತ್ರದಲ್ಲಿ ಅಭಿನಯಿಸಿದರೆ, ಪ್ರಿಯಾಂಕಾ ಚೋಪ್ರಾ ಮತ್ತು ಪೃಥ್ವಿರಾಜ್‍ ಸುಕುಮಾರನ್‍, ಮಂದಾಕಿನಿ ಮತ್ತು ಕುಂಭ ಎಂಬ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಎಂ.ಎಂ. ಕೀರವಾಣಿ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

6 mins ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

12 mins ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

3 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

3 hours ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

3 hours ago