ಮನರಂಜನೆ

ಬಗೆಹರಿದ ‘ವಾರಣಾಸಿ’ ಶೀರ್ಷಿಕೆ ವಿವಾದ; ಹೊಸ ಹೆಸರು ಏನು ಗೊತ್ತಾ?

ಜನಪ್ರಿಯ ನಿರ್ದೇಶಕ ಎಸ್‍.ಎಸ್‍. ರಾಜಮೌಳಿ ಎರಡು ವಾರಗಳ ಹಿಂದಷ್ಟೇ ತಮ್ಮ ಹೊಸ ಚಿತ್ರ ‘ವಾರಣಾಸಿ’ಯ ಟೈಟಲ್‍ ಟೀಸರ್ ಬಿಡುಗಡೆ ಮಾಡಿದ್ದರು. ಹೈದರಾಬಾದ್‍ನಲ್ಲಿ ನಡೆದ ಈ ಸಮಾರಂಭ, ಜಗತ್ತಿನಾದ್ಯಂತ ಸುದ್ದಿ ಮಾಡಿತ್ತು. ಯಾವಾಗ, ಶೀರ್ಷಿಕೆ ಅನಾವರಣವಾಗಿತ್ತೋ, ಆಗ ಹೊಸ ವಿವಾದವೊಂದು ಹುಟ್ಟಿಕೊಂಡಿತ್ತು. ಈಗ ಆ ವಿವಾದ ಬಗೆಹರಿದಿದೆ ಎಂಬ ಸುದ್ದಿಯೊಂದು ಕೇಳಿಬರುತ್ತಿದೆ.

ಹೌದು, ‘ವಾರಣಾಸಿ’ ಚಿತ್ರವನ್ನು ರಾಜಮಳಿಗೂ ಮೊದಲೇ ರಾಮ ಬ್ರಹ್ಮ ಹನುಮ ಕ್ರಿಯೇಷನಸ್ ಬ್ಯಾನರ್ ಅಡಿ ಸಿ.ಎಚ್‍. ಸುಬ್ಬಾರೆಡ್ಡಿ ಎನ್ನುವವರು 2023ರ ಜುಲೈ 24ರಂದು ‘ವಾರಣಾಸಿ’ ಎಂಬ ಹೆಸರನ್ನು ತೆಲುಗು ಚಲನಚಿತ್ರ ನಿರ್ಮಾಪಕರ ಕೌನ್ಸಿಲ್‍ನಲ್ಲಿ ನೋಂದಾಯಿಸಿದ್ದರು. ಆ ನಂತರ ಈ ವರ್ಷದ ಜೂನ್‍ 24ರಂದು ಅದನ್ನು ನವೀಕರಿಸಿದ್ದು, 2026ರ ಜುಲೈ 23ರವರೆಗೂ ‘ವಾರಣಾಸಿ’ ಎಂಬ ಶೀರ್ಷಿಕೆಯು ಅವರ ಬಳಿಯೇ ಇರುತ್ತದೆ. ಹೀಗಿರುವಾಗ, ತಮಗೆ ಕೊಟ್ಟ ಶೀರ್ಷಿಕೆಯನ್ನು ರಾಜಮೌಳಿ ಬಳಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ತಗಾದೆ ತೆಗೆದಿದ್ದರು. ಅಷ್ಟೇ ಅಲ್ಲ, ತಮ್ಮ ವಾದಕ್ಕೆ ಪೂರಕವಾದ ಮಾಹಿತಿಯನ್ನು ಸಲ್ಲಿಸಿದ್ದರು.

ಇದನ್ನು ಓದಿ: ‘ಆಜಾದ್ ಭಾರತ್’ ಚಿತ್ರದೊಂದಿಗೆ ಬಂದ ರೂಪಾ ಅಯ್ಯರ್: ಜನವರಿ.2ರಂದು ಚಿತ್ರ ಬಿಡುಗಡೆ

ಇದೀಗ, ಈ ಶೀರ್ಷಿಕೆ ವಿವಾದ ಬಗೆಹರಿದಿದೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ, ಸುಬ್ಬಾರೆಡ್ಡಿ ಬರೀ ತೆಲುಗು ಭಾಷೆಯಲ್ಲಿ ‘ವಾರಣಾಸಿ’ ಚಿತ್ರವನ್ನು ನಿರ್ಮಿಸುವುದಕ್ಕೆ ಉದ್ದೇಶಿಸಿದ್ದರಂತೆ. ಆದರೆ, ರಾಜಮೌಳಿ’ ಹಾಗಲ್ಲ. ತಮ್ಮ ‘ವಾರಣಾಸಿ’ ಚಿತ್ರವನ್ನು ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲೀಷ್‍ ಸೇರಿದಂತೆ ಒಟ್ಟು ಆರು ಭಾಷೆಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದರು. ಆರೂ ಭಾಷೆಗಳಲ್ಲಿ ಸಲ್ಲುವಂತೆ ‘ವಾರಣಾಸಿ’ ಎಂಬ ಕಾಮನ್‍ ಹೆಸರನ್ನು ಇಟ್ಟಿದ್ದರು.

ಇದೀಗ ಅವರು ತೆಲುಗು ಚಿತ್ರಗ ‘ರಾಜಮೌಳಿಸ್ ವಾರಣಾಸಿ’ ಎಂದು ಹೆಸರು ಬದಲಾಯಿಸಿದ್ದು, ಮಿಕ್ಕ ಐದು ಭಾಷೆಗಳಲ್ಲಿ ‘ವಾರಣಾಸಿ’ ಎಂಬ ಹೆಸರಿನಲ್ಲೇ ಬಿಡುಗಡೆಯಾಗಲಿದೆಯಂತೆ.

ಇದೊಂದು ಪೌರಾಣಿಕ ಹಿನ್ನೆಲೆಯ ಫ್ಯಾಂಟಸಿ ಚಿತ್ರವಾಗಿದ್ದು, ‘ವಾರಣಾಸಿ’ ಚಿತ್ರವನ್ನು ಶ್ರೀ ದುರ್ಗಾ ಆರ್ಟ್ಸ್ ಮತ್ತು ಶೋಯಿಂಗ್‍ ಬಿಝಿನೆಸ್‍ ಸಂಸ್ಥೆಗಳಡಿ ಕೆ.ಎಲ್‍. ನಾರಾಯಣ ಮತ್ತು ಎಸ್‍.ಎಸ್. ಕಾರ್ತಿಕೇಯ ಜೊತೆಯಾಗಿ ನಿರ್ಮಿಸುತ್ತಿದ್ದು, ರಾಜಮೌಳಿ ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಮಹೇಶ್‍ ಬಾಬು, ರುದ್ರ ಎಂಬ ಪಾತ್ರದಲ್ಲಿ ಅಭಿನಯಿಸಿದರೆ, ಪ್ರಿಯಾಂಕಾ ಚೋಪ್ರಾ ಮತ್ತು ಪೃಥ್ವಿರಾಜ್‍ ಸುಕುಮಾರನ್‍, ಮಂದಾಕಿನಿ ಮತ್ತು ಕುಂಭ ಎಂಬ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಎಂ.ಎಂ. ಕೀರವಾಣಿ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

13 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

15 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

16 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

16 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

19 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago