ಮನರಂಜನೆ

ಬಗೆಹರಿದ ‘ವಾರಣಾಸಿ’ ಶೀರ್ಷಿಕೆ ವಿವಾದ; ಹೊಸ ಹೆಸರು ಏನು ಗೊತ್ತಾ?

ಜನಪ್ರಿಯ ನಿರ್ದೇಶಕ ಎಸ್‍.ಎಸ್‍. ರಾಜಮೌಳಿ ಎರಡು ವಾರಗಳ ಹಿಂದಷ್ಟೇ ತಮ್ಮ ಹೊಸ ಚಿತ್ರ ‘ವಾರಣಾಸಿ’ಯ ಟೈಟಲ್‍ ಟೀಸರ್ ಬಿಡುಗಡೆ ಮಾಡಿದ್ದರು. ಹೈದರಾಬಾದ್‍ನಲ್ಲಿ ನಡೆದ ಈ ಸಮಾರಂಭ, ಜಗತ್ತಿನಾದ್ಯಂತ ಸುದ್ದಿ ಮಾಡಿತ್ತು. ಯಾವಾಗ, ಶೀರ್ಷಿಕೆ ಅನಾವರಣವಾಗಿತ್ತೋ, ಆಗ ಹೊಸ ವಿವಾದವೊಂದು ಹುಟ್ಟಿಕೊಂಡಿತ್ತು. ಈಗ ಆ ವಿವಾದ ಬಗೆಹರಿದಿದೆ ಎಂಬ ಸುದ್ದಿಯೊಂದು ಕೇಳಿಬರುತ್ತಿದೆ.

ಹೌದು, ‘ವಾರಣಾಸಿ’ ಚಿತ್ರವನ್ನು ರಾಜಮಳಿಗೂ ಮೊದಲೇ ರಾಮ ಬ್ರಹ್ಮ ಹನುಮ ಕ್ರಿಯೇಷನಸ್ ಬ್ಯಾನರ್ ಅಡಿ ಸಿ.ಎಚ್‍. ಸುಬ್ಬಾರೆಡ್ಡಿ ಎನ್ನುವವರು 2023ರ ಜುಲೈ 24ರಂದು ‘ವಾರಣಾಸಿ’ ಎಂಬ ಹೆಸರನ್ನು ತೆಲುಗು ಚಲನಚಿತ್ರ ನಿರ್ಮಾಪಕರ ಕೌನ್ಸಿಲ್‍ನಲ್ಲಿ ನೋಂದಾಯಿಸಿದ್ದರು. ಆ ನಂತರ ಈ ವರ್ಷದ ಜೂನ್‍ 24ರಂದು ಅದನ್ನು ನವೀಕರಿಸಿದ್ದು, 2026ರ ಜುಲೈ 23ರವರೆಗೂ ‘ವಾರಣಾಸಿ’ ಎಂಬ ಶೀರ್ಷಿಕೆಯು ಅವರ ಬಳಿಯೇ ಇರುತ್ತದೆ. ಹೀಗಿರುವಾಗ, ತಮಗೆ ಕೊಟ್ಟ ಶೀರ್ಷಿಕೆಯನ್ನು ರಾಜಮೌಳಿ ಬಳಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ತಗಾದೆ ತೆಗೆದಿದ್ದರು. ಅಷ್ಟೇ ಅಲ್ಲ, ತಮ್ಮ ವಾದಕ್ಕೆ ಪೂರಕವಾದ ಮಾಹಿತಿಯನ್ನು ಸಲ್ಲಿಸಿದ್ದರು.

ಇದನ್ನು ಓದಿ: ‘ಆಜಾದ್ ಭಾರತ್’ ಚಿತ್ರದೊಂದಿಗೆ ಬಂದ ರೂಪಾ ಅಯ್ಯರ್: ಜನವರಿ.2ರಂದು ಚಿತ್ರ ಬಿಡುಗಡೆ

ಇದೀಗ, ಈ ಶೀರ್ಷಿಕೆ ವಿವಾದ ಬಗೆಹರಿದಿದೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ, ಸುಬ್ಬಾರೆಡ್ಡಿ ಬರೀ ತೆಲುಗು ಭಾಷೆಯಲ್ಲಿ ‘ವಾರಣಾಸಿ’ ಚಿತ್ರವನ್ನು ನಿರ್ಮಿಸುವುದಕ್ಕೆ ಉದ್ದೇಶಿಸಿದ್ದರಂತೆ. ಆದರೆ, ರಾಜಮೌಳಿ’ ಹಾಗಲ್ಲ. ತಮ್ಮ ‘ವಾರಣಾಸಿ’ ಚಿತ್ರವನ್ನು ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲೀಷ್‍ ಸೇರಿದಂತೆ ಒಟ್ಟು ಆರು ಭಾಷೆಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದರು. ಆರೂ ಭಾಷೆಗಳಲ್ಲಿ ಸಲ್ಲುವಂತೆ ‘ವಾರಣಾಸಿ’ ಎಂಬ ಕಾಮನ್‍ ಹೆಸರನ್ನು ಇಟ್ಟಿದ್ದರು.

ಇದೀಗ ಅವರು ತೆಲುಗು ಚಿತ್ರಗ ‘ರಾಜಮೌಳಿಸ್ ವಾರಣಾಸಿ’ ಎಂದು ಹೆಸರು ಬದಲಾಯಿಸಿದ್ದು, ಮಿಕ್ಕ ಐದು ಭಾಷೆಗಳಲ್ಲಿ ‘ವಾರಣಾಸಿ’ ಎಂಬ ಹೆಸರಿನಲ್ಲೇ ಬಿಡುಗಡೆಯಾಗಲಿದೆಯಂತೆ.

ಇದೊಂದು ಪೌರಾಣಿಕ ಹಿನ್ನೆಲೆಯ ಫ್ಯಾಂಟಸಿ ಚಿತ್ರವಾಗಿದ್ದು, ‘ವಾರಣಾಸಿ’ ಚಿತ್ರವನ್ನು ಶ್ರೀ ದುರ್ಗಾ ಆರ್ಟ್ಸ್ ಮತ್ತು ಶೋಯಿಂಗ್‍ ಬಿಝಿನೆಸ್‍ ಸಂಸ್ಥೆಗಳಡಿ ಕೆ.ಎಲ್‍. ನಾರಾಯಣ ಮತ್ತು ಎಸ್‍.ಎಸ್. ಕಾರ್ತಿಕೇಯ ಜೊತೆಯಾಗಿ ನಿರ್ಮಿಸುತ್ತಿದ್ದು, ರಾಜಮೌಳಿ ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಮಹೇಶ್‍ ಬಾಬು, ರುದ್ರ ಎಂಬ ಪಾತ್ರದಲ್ಲಿ ಅಭಿನಯಿಸಿದರೆ, ಪ್ರಿಯಾಂಕಾ ಚೋಪ್ರಾ ಮತ್ತು ಪೃಥ್ವಿರಾಜ್‍ ಸುಕುಮಾರನ್‍, ಮಂದಾಕಿನಿ ಮತ್ತು ಕುಂಭ ಎಂಬ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಎಂ.ಎಂ. ಕೀರವಾಣಿ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago