ಮನರಂಜನೆ

‘ಮಹಾನ್’ ಚಿತ್ರದಲ್ಲಿ ವರ್ಷ ಬೊಳ್ಳಮ್ಮ; ಕನ್ನಡದಲ್ಲಿ ಮೊದಲ ಚಿತ್ರ

ಕೊಡಗಿನ ಮೂಲದ ವರ್ಷ ಬೊಳ್ಳಮ್ಮ, ತಮಿಳು, ಮಲಯಾಳಂ ಮತ್ತು ತೆಲುಗು ಭಾಷೆಯ ಹಲವು ಜನಪ್ರಿಯ ಚಿತ್ರಗಳಲ್ಲಿ ನಟಿಸಿದ್ದರು. ಆದರೆ, ಇದುವರೆಗೂ ಕನ್ನಡದಲ್ಲಿ ಮಾತ್ರ ನಟಿಸಿರಲಿಲ್ಲ. ಇದೀಗ, ವಿಜಯ್‍ ರಾಘವೇಂದ್ರ ಅಭಿನಯದ ‘ಮಹಾನ್‍’ ಚಿತ್ರದ ಮೂಲಕ ಅವರು ಕನ್ನಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಪಿ.ಸಿ. ಶೇಖರ್ ನಿರ್ದೇಶನದ, ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ ’ಮಹಾನ್’ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಜನಪ್ರಿಯ ನಟಿ ವರ್ಷ ಬೊಳ್ಳಮ್ಮ, ಕನ್ನಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ.ತಮಿಳಿನ ‘ಬಿಗಿಲ್’, ‘96’ ಸೇರಿದಂತೆ ಹಲವು ಚಿತ್ರಗಳಲ್ಲಿ ವರ್ಷ ನಟಿಸಿದ್ದಾರೆ.

ಈ ಚಿತ್ರದಲ್ಲಿ ನಟಿಸುತ್ತಿರುವ ಕುರಿತು ಮಾತನಾಡಿರುವ ವರ್ಷ, ‘ಮೂಲತಃ ಕನ್ನಡದವಳಾದ ನಾನು ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಈಗ ಇದೇ ಮೊದಲ ಬಾರಿಗೆ ಕನ್ನಡದ ‘ಮಹಾನ್’ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಮಾತೃಭಾಷೆಯ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಬಹಳ ಖುಷಿಯಾಗುತ್ತಿದೆ. ‘ಮಾಹಾನ್’ ರೈತರ ಕುರಿತಾದ ಚಿತ್ರ. ರೈತರ ಬದುಕಿನ ಬವಣೆಗಳನ್ನು ನಿರ್ದೇಶಕರು ಈ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ. ಕಥೆ ಕೇಳಿದಾಗ, ಕಥೆಯಲ್ಲಿರುವ ಸಾಮಾಜಿಕ ಕಳಕಳಿ ಬಹಳ ಇಷ್ಟವಾಯಿತು. ನಾನು ವಿಜಯ ರಾಘವೇಂದ್ರ ಅವರ ಅಭಿಮಾನಿ. ಅವರೊಟ್ಟಿಗೆ ಈ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಬಹಳ ಸಂತೋಷವಾಗಿದೆ’ ಎಂದು ಹೇಳಿದ್ದಾರೆ.

‘ಮಹಾನ್‍’ ಚಿತ್ರದಲ್ಲಿ ವಿಜಯ್‍ ರಾಘವೇಂದ್ರ, ರಾಧಿಕಾ ನಾರಾಯಣ್, ಮಿತ್ರ, ನಮ್ರತ ಗೌಡ, ವರ್ಷ ಬೊಳ್ಳಮ್ಮ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್?

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…

18 mins ago

ಕಾಂಗ್ರೆಸ್‌ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌…

19 mins ago

ಫೆ.14ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಎಈ ರಘು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…

44 mins ago

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026: ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…

1 hour ago

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಕೇಂದ್ರ ಅರಣ್ಯ ಸಚಿವರ ಜೊತೆ ಎಚ್‌ಡಿಕೆ ಮಾತುಕತೆ

ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌…

1 hour ago

ಫೆ.10ಕ್ಕೆ ಹಸಗೂಲಿ ಪಾರ್ವತಾಂಬೆ ದೇವಸ್ಥಾನ ಮೊದಲ ವರ್ಷದ ಅರಾಧನೆ ಮಹೋತ್ಸವ

ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ…

1 hour ago