ಮನರಂಜನೆ

‘ಮಹಾನ್’ ಚಿತ್ರದಲ್ಲಿ ವರ್ಷ ಬೊಳ್ಳಮ್ಮ; ಕನ್ನಡದಲ್ಲಿ ಮೊದಲ ಚಿತ್ರ

ಕೊಡಗಿನ ಮೂಲದ ವರ್ಷ ಬೊಳ್ಳಮ್ಮ, ತಮಿಳು, ಮಲಯಾಳಂ ಮತ್ತು ತೆಲುಗು ಭಾಷೆಯ ಹಲವು ಜನಪ್ರಿಯ ಚಿತ್ರಗಳಲ್ಲಿ ನಟಿಸಿದ್ದರು. ಆದರೆ, ಇದುವರೆಗೂ ಕನ್ನಡದಲ್ಲಿ ಮಾತ್ರ ನಟಿಸಿರಲಿಲ್ಲ. ಇದೀಗ, ವಿಜಯ್‍ ರಾಘವೇಂದ್ರ ಅಭಿನಯದ ‘ಮಹಾನ್‍’ ಚಿತ್ರದ ಮೂಲಕ ಅವರು ಕನ್ನಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಪಿ.ಸಿ. ಶೇಖರ್ ನಿರ್ದೇಶನದ, ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ ’ಮಹಾನ್’ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಜನಪ್ರಿಯ ನಟಿ ವರ್ಷ ಬೊಳ್ಳಮ್ಮ, ಕನ್ನಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ.ತಮಿಳಿನ ‘ಬಿಗಿಲ್’, ‘96’ ಸೇರಿದಂತೆ ಹಲವು ಚಿತ್ರಗಳಲ್ಲಿ ವರ್ಷ ನಟಿಸಿದ್ದಾರೆ.

ಈ ಚಿತ್ರದಲ್ಲಿ ನಟಿಸುತ್ತಿರುವ ಕುರಿತು ಮಾತನಾಡಿರುವ ವರ್ಷ, ‘ಮೂಲತಃ ಕನ್ನಡದವಳಾದ ನಾನು ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಈಗ ಇದೇ ಮೊದಲ ಬಾರಿಗೆ ಕನ್ನಡದ ‘ಮಹಾನ್’ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಮಾತೃಭಾಷೆಯ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಬಹಳ ಖುಷಿಯಾಗುತ್ತಿದೆ. ‘ಮಾಹಾನ್’ ರೈತರ ಕುರಿತಾದ ಚಿತ್ರ. ರೈತರ ಬದುಕಿನ ಬವಣೆಗಳನ್ನು ನಿರ್ದೇಶಕರು ಈ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ. ಕಥೆ ಕೇಳಿದಾಗ, ಕಥೆಯಲ್ಲಿರುವ ಸಾಮಾಜಿಕ ಕಳಕಳಿ ಬಹಳ ಇಷ್ಟವಾಯಿತು. ನಾನು ವಿಜಯ ರಾಘವೇಂದ್ರ ಅವರ ಅಭಿಮಾನಿ. ಅವರೊಟ್ಟಿಗೆ ಈ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಬಹಳ ಸಂತೋಷವಾಗಿದೆ’ ಎಂದು ಹೇಳಿದ್ದಾರೆ.

‘ಮಹಾನ್‍’ ಚಿತ್ರದಲ್ಲಿ ವಿಜಯ್‍ ರಾಘವೇಂದ್ರ, ರಾಧಿಕಾ ನಾರಾಯಣ್, ಮಿತ್ರ, ನಮ್ರತ ಗೌಡ, ವರ್ಷ ಬೊಳ್ಳಮ್ಮ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago