ಮನರಂಜನೆ

ಜೂನ್‍ನಲ್ಲಿ ಚಿತ್ರ ಬಿಡುಗಡೆ ಮಾಡಿದ್ದೇ ತಪ್ಪಾಯ್ತು: ವಸಿಷ್ಠ ಬೇಸರದ ನುಡಿ

ವಸಿಷ್ಠ ಸಿಂಹ ಅಭಿನಯದ ‘ಲವ್‍ ಲಿ’ ಚಿತ್ರವು ಜೂನ್‍ 14ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ, ಇದೀಗ 25 ದಿನಗಳನ್ನು ಪೂರೈಸಿದೆ. ಚಿತ್ರವೇನೋ 25 ದಿನಗಳನ್ನು ಪೂರೈಸಿದ್ದರೂ, ಜನ ಮಾತ್ರ ದೊಡ್ಡ ಮಟ್ಟದಲ್ಲಿ ಚಿತ್ರ ನೋಡುವುದಕ್ಕೆ ಬರುತ್ತಿಲ್ಲ ಎಂಬ ಬೇಸರ ಚಿತ್ರತಂಡದ್ದು.

ಚಿತ್ರ 25 ದಿನ ಓಡಿದ ಸಂತಸದಲ್ಲಿ ಚಿತ್ರತಂಡದವರು ಚಿತ್ರಕ್ಕೆ ದುಡಿದ ಕಲಾವಿದರು ಮತ್ತು ಮತ್ತು ತಂತ್ರಜ್ಞರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಎದುರಿಸಿದ ಸಾಕಷ್ಟು ಸಮಸ್ಯೆಗಳನ್ನು ಚಿತ್ರತಂಡದವರು ಹೇಳಿಕೊಂಡರು.

ಜೂನ್‍ ತಿಂಗಳಲ್ಲಿ ಚಿತ್ರ ಬಿಡುಗಡೆ ಮಾಡಿದ್ದೇ ತಪ್ಪಾಯ್ತು ಎಂದರು ವಸಿಷ್ಠ ಸಿಂಹ. ‘ಜೂನ್ ತಿಂಗಳು ನಮಗೆ ಮಾರಕವಾಯಿತು. ನಮ್ಮ ಚಿತ್ರ ಬಿಡುಗಡೆ ಸಮಯದಲ್ಲಿ ಒಂದಲ್ಲಾ ಒಂದು ಸಮಸ್ಯೆ ಎದುರಾಯಿತು. ಆ ಸಮಸ್ಯೆಗಳ ನಡುವೆ ನಮ್ಮ ಚಿತ್ರ ತೆರೆ ಕಂಡಿತ್ತು. ಚಿತ್ರ ನೋಡಿದವರು ಕಥೆಯನ್ನು ಮೆಚ್ಚಿಕೊಂಡಿದ್ದಾರೆ‌. ಆದರೆ, ನಾವು ನಿರೀಕ್ಷಿಸಿದಷ್ಟು ಜನ ಬರುತ್ತಿಲ್ಲ ಎಂಬ ಬೇಸರ ಇದ್ದೇ ಇದೆ. ಈಗಾಗಲೇ ಚಿತ್ರ ನೋಡಿರುವವರಿಗೆ ಧನ್ಯವಾದ. ನೋಡದೇ ಇರುವವರು ಈಗಲೇ ನೋಡಿ’ ಎಂದು ಮನವಿ ಮಾಡಿದರು.

ನಿರ್ದೇಶಕ ಚೇತನ್‍ ಕೇಶವ್‍ಗೆ ಇದು ಮೊದಲ ಚಿತ್ರ. ಅವರುಜ ಚಿತ್ರಮಂದಿರದತ್ತ ಬರುತ್ತಿಲ್ಲ ಎಂದು ಬೇಸರದಿಂದಲೇ ಹೇಳಿಕೊಂಡರು. ‘ಕನ್ನಡದಲ್ಲಿ ಒಳ್ಳೆಯ ಕಂಟೆಂಟ್ ಚಿತ್ರ ನಿರ್ದೇಶಿಸಬೇಕೆಂಬ ಆಸೆಯಿತ್ತು. ಅದು ಈಡೇರಿದೆ‌. ಜನ ಚಿತ್ರದ ಬಗ್ಗೆ ಪ್ರಶಂಸೆಯ ಮಾತುಗಳಾಡುತ್ತಿದ್ದಾರೆ. ಆದರೆ, ನಿರೀಕ್ಷಿಸಿದಷ್ಟು ಜನರು ಚಿತ್ರ ನೋಡಿಲ್ಲ ಎಂಬ ಬೇಸರವಿದೆ. ನಮ್ಮ ಚಿತ್ರವನ್ನು ಹೆಚ್ಚಿನ ಜನರು ನೋಡಿ’ ಎಂದರು.

ಕಾರ್ಯಕಾರಿ ನಿರ್ಮಾಪಕರಾದ ಬಾಲಕೃಷ್ಣ ಹಾಗೂ ಕೃಷ್ಣ ಮಾತನಾಡಿ, ‘ನಮ್ಮ ಜನ ಬೇರೆ ಭಾಷೆಗಳ ಚಿತ್ರಗಳಿಗೆ ನೀಡುವ ಪ್ರೋತ್ಸಾಹವನ್ನು ನಮ್ಮ ಕನ್ನಡ ಚಿತ್ರಗಳಿಗೆ ನೀಡುವುದಿಲ್ಲ ಎಂಬ ಬೇಸರ ಇದೆ. ದಯಮಾಡಿ ಕರ್ನಾಟಕದ ಜನರು ಕನ್ನಡ ಚಿತ್ರಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿ. ಒಬ್ಬ ನಿರ್ಮಾಪಕ ಗೆದ್ದರೆ, ಅದರಿಂದ ಬಂದ ಹಣವನ್ನು ಮತ್ತೊಂದು ಚಿತ್ರಕ್ಕೆ ಹಾಕುತ್ತಾನೆ. ಅದರಿಂದ ಸಾಕಷ್ಟು ಜನರಿಗೆ ಉದ್ಯೋಗ ಸಿಗುತ್ತದೆ’ ಎಂದರು.

‘ಲವ್‍ ಲೀ’ ಚಿತ್ರವನ್ನು ಅಭುವನಾಸ್ ಕ್ರೀಯೆಷನ್ಸ್ ಬ್ಯಾನರ್ ನಡಿ ರವೀಂದ್ರ ಕುಮಾರ್ ನಿರ್ಮಾಣ ಮಾಡಿದ್ದಾರೆ. ವಸಿಷ್ಠ ಸಿಂಗಹಗೆ ನಾಯಕಿಯಾಗಿ ಸ್ಟೆಫಿ ಪಟೇಲ್ ‍ನಟಿಸಿದ್ದು, ಮಿಕ್ಕಂತೆ ದತ್ತಣ್ಣ, ಕಾಕ್ರೋಜ್ ಸುಧೀ, ಶೇಖರ್, ವರ್ಧನ್, ಬೇಬಿ ವಂಶಿಕಾ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅನೂಪ್‍ ಸೀಳಿನ್‍ ಸಂಗೀತವಿದೆ.

ಭೂಮಿಕಾ

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

2 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

3 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

4 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

5 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

5 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

5 hours ago