ಮನರಂಜನೆ

ಜೂನ್‍ನಲ್ಲಿ ಚಿತ್ರ ಬಿಡುಗಡೆ ಮಾಡಿದ್ದೇ ತಪ್ಪಾಯ್ತು: ವಸಿಷ್ಠ ಬೇಸರದ ನುಡಿ

ವಸಿಷ್ಠ ಸಿಂಹ ಅಭಿನಯದ ‘ಲವ್‍ ಲಿ’ ಚಿತ್ರವು ಜೂನ್‍ 14ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ, ಇದೀಗ 25 ದಿನಗಳನ್ನು ಪೂರೈಸಿದೆ. ಚಿತ್ರವೇನೋ 25 ದಿನಗಳನ್ನು ಪೂರೈಸಿದ್ದರೂ, ಜನ ಮಾತ್ರ ದೊಡ್ಡ ಮಟ್ಟದಲ್ಲಿ ಚಿತ್ರ ನೋಡುವುದಕ್ಕೆ ಬರುತ್ತಿಲ್ಲ ಎಂಬ ಬೇಸರ ಚಿತ್ರತಂಡದ್ದು.

ಚಿತ್ರ 25 ದಿನ ಓಡಿದ ಸಂತಸದಲ್ಲಿ ಚಿತ್ರತಂಡದವರು ಚಿತ್ರಕ್ಕೆ ದುಡಿದ ಕಲಾವಿದರು ಮತ್ತು ಮತ್ತು ತಂತ್ರಜ್ಞರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಎದುರಿಸಿದ ಸಾಕಷ್ಟು ಸಮಸ್ಯೆಗಳನ್ನು ಚಿತ್ರತಂಡದವರು ಹೇಳಿಕೊಂಡರು.

ಜೂನ್‍ ತಿಂಗಳಲ್ಲಿ ಚಿತ್ರ ಬಿಡುಗಡೆ ಮಾಡಿದ್ದೇ ತಪ್ಪಾಯ್ತು ಎಂದರು ವಸಿಷ್ಠ ಸಿಂಹ. ‘ಜೂನ್ ತಿಂಗಳು ನಮಗೆ ಮಾರಕವಾಯಿತು. ನಮ್ಮ ಚಿತ್ರ ಬಿಡುಗಡೆ ಸಮಯದಲ್ಲಿ ಒಂದಲ್ಲಾ ಒಂದು ಸಮಸ್ಯೆ ಎದುರಾಯಿತು. ಆ ಸಮಸ್ಯೆಗಳ ನಡುವೆ ನಮ್ಮ ಚಿತ್ರ ತೆರೆ ಕಂಡಿತ್ತು. ಚಿತ್ರ ನೋಡಿದವರು ಕಥೆಯನ್ನು ಮೆಚ್ಚಿಕೊಂಡಿದ್ದಾರೆ‌. ಆದರೆ, ನಾವು ನಿರೀಕ್ಷಿಸಿದಷ್ಟು ಜನ ಬರುತ್ತಿಲ್ಲ ಎಂಬ ಬೇಸರ ಇದ್ದೇ ಇದೆ. ಈಗಾಗಲೇ ಚಿತ್ರ ನೋಡಿರುವವರಿಗೆ ಧನ್ಯವಾದ. ನೋಡದೇ ಇರುವವರು ಈಗಲೇ ನೋಡಿ’ ಎಂದು ಮನವಿ ಮಾಡಿದರು.

ನಿರ್ದೇಶಕ ಚೇತನ್‍ ಕೇಶವ್‍ಗೆ ಇದು ಮೊದಲ ಚಿತ್ರ. ಅವರುಜ ಚಿತ್ರಮಂದಿರದತ್ತ ಬರುತ್ತಿಲ್ಲ ಎಂದು ಬೇಸರದಿಂದಲೇ ಹೇಳಿಕೊಂಡರು. ‘ಕನ್ನಡದಲ್ಲಿ ಒಳ್ಳೆಯ ಕಂಟೆಂಟ್ ಚಿತ್ರ ನಿರ್ದೇಶಿಸಬೇಕೆಂಬ ಆಸೆಯಿತ್ತು. ಅದು ಈಡೇರಿದೆ‌. ಜನ ಚಿತ್ರದ ಬಗ್ಗೆ ಪ್ರಶಂಸೆಯ ಮಾತುಗಳಾಡುತ್ತಿದ್ದಾರೆ. ಆದರೆ, ನಿರೀಕ್ಷಿಸಿದಷ್ಟು ಜನರು ಚಿತ್ರ ನೋಡಿಲ್ಲ ಎಂಬ ಬೇಸರವಿದೆ. ನಮ್ಮ ಚಿತ್ರವನ್ನು ಹೆಚ್ಚಿನ ಜನರು ನೋಡಿ’ ಎಂದರು.

ಕಾರ್ಯಕಾರಿ ನಿರ್ಮಾಪಕರಾದ ಬಾಲಕೃಷ್ಣ ಹಾಗೂ ಕೃಷ್ಣ ಮಾತನಾಡಿ, ‘ನಮ್ಮ ಜನ ಬೇರೆ ಭಾಷೆಗಳ ಚಿತ್ರಗಳಿಗೆ ನೀಡುವ ಪ್ರೋತ್ಸಾಹವನ್ನು ನಮ್ಮ ಕನ್ನಡ ಚಿತ್ರಗಳಿಗೆ ನೀಡುವುದಿಲ್ಲ ಎಂಬ ಬೇಸರ ಇದೆ. ದಯಮಾಡಿ ಕರ್ನಾಟಕದ ಜನರು ಕನ್ನಡ ಚಿತ್ರಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿ. ಒಬ್ಬ ನಿರ್ಮಾಪಕ ಗೆದ್ದರೆ, ಅದರಿಂದ ಬಂದ ಹಣವನ್ನು ಮತ್ತೊಂದು ಚಿತ್ರಕ್ಕೆ ಹಾಕುತ್ತಾನೆ. ಅದರಿಂದ ಸಾಕಷ್ಟು ಜನರಿಗೆ ಉದ್ಯೋಗ ಸಿಗುತ್ತದೆ’ ಎಂದರು.

‘ಲವ್‍ ಲೀ’ ಚಿತ್ರವನ್ನು ಅಭುವನಾಸ್ ಕ್ರೀಯೆಷನ್ಸ್ ಬ್ಯಾನರ್ ನಡಿ ರವೀಂದ್ರ ಕುಮಾರ್ ನಿರ್ಮಾಣ ಮಾಡಿದ್ದಾರೆ. ವಸಿಷ್ಠ ಸಿಂಗಹಗೆ ನಾಯಕಿಯಾಗಿ ಸ್ಟೆಫಿ ಪಟೇಲ್ ‍ನಟಿಸಿದ್ದು, ಮಿಕ್ಕಂತೆ ದತ್ತಣ್ಣ, ಕಾಕ್ರೋಜ್ ಸುಧೀ, ಶೇಖರ್, ವರ್ಧನ್, ಬೇಬಿ ವಂಶಿಕಾ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅನೂಪ್‍ ಸೀಳಿನ್‍ ಸಂಗೀತವಿದೆ.

ಭೂಮಿಕಾ

Recent Posts

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

1 hour ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

1 hour ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

1 hour ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

2 hours ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

2 hours ago

ಅಭದ್ರತೆ ಹಾದಿಯಲಿ ವಿಕಸಿತ ಭಾರತದತ್ತ ‘ಆನಿ (ಆಮೆ) ನಡಿಗೆ’

ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…

2 hours ago