ಮನರಂಜನೆ

ಜೂನ್‍ನಲ್ಲಿ ಚಿತ್ರ ಬಿಡುಗಡೆ ಮಾಡಿದ್ದೇ ತಪ್ಪಾಯ್ತು: ವಸಿಷ್ಠ ಬೇಸರದ ನುಡಿ

ವಸಿಷ್ಠ ಸಿಂಹ ಅಭಿನಯದ ‘ಲವ್‍ ಲಿ’ ಚಿತ್ರವು ಜೂನ್‍ 14ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ, ಇದೀಗ 25 ದಿನಗಳನ್ನು ಪೂರೈಸಿದೆ. ಚಿತ್ರವೇನೋ 25 ದಿನಗಳನ್ನು ಪೂರೈಸಿದ್ದರೂ, ಜನ ಮಾತ್ರ ದೊಡ್ಡ ಮಟ್ಟದಲ್ಲಿ ಚಿತ್ರ ನೋಡುವುದಕ್ಕೆ ಬರುತ್ತಿಲ್ಲ ಎಂಬ ಬೇಸರ ಚಿತ್ರತಂಡದ್ದು.

ಚಿತ್ರ 25 ದಿನ ಓಡಿದ ಸಂತಸದಲ್ಲಿ ಚಿತ್ರತಂಡದವರು ಚಿತ್ರಕ್ಕೆ ದುಡಿದ ಕಲಾವಿದರು ಮತ್ತು ಮತ್ತು ತಂತ್ರಜ್ಞರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಎದುರಿಸಿದ ಸಾಕಷ್ಟು ಸಮಸ್ಯೆಗಳನ್ನು ಚಿತ್ರತಂಡದವರು ಹೇಳಿಕೊಂಡರು.

ಜೂನ್‍ ತಿಂಗಳಲ್ಲಿ ಚಿತ್ರ ಬಿಡುಗಡೆ ಮಾಡಿದ್ದೇ ತಪ್ಪಾಯ್ತು ಎಂದರು ವಸಿಷ್ಠ ಸಿಂಹ. ‘ಜೂನ್ ತಿಂಗಳು ನಮಗೆ ಮಾರಕವಾಯಿತು. ನಮ್ಮ ಚಿತ್ರ ಬಿಡುಗಡೆ ಸಮಯದಲ್ಲಿ ಒಂದಲ್ಲಾ ಒಂದು ಸಮಸ್ಯೆ ಎದುರಾಯಿತು. ಆ ಸಮಸ್ಯೆಗಳ ನಡುವೆ ನಮ್ಮ ಚಿತ್ರ ತೆರೆ ಕಂಡಿತ್ತು. ಚಿತ್ರ ನೋಡಿದವರು ಕಥೆಯನ್ನು ಮೆಚ್ಚಿಕೊಂಡಿದ್ದಾರೆ‌. ಆದರೆ, ನಾವು ನಿರೀಕ್ಷಿಸಿದಷ್ಟು ಜನ ಬರುತ್ತಿಲ್ಲ ಎಂಬ ಬೇಸರ ಇದ್ದೇ ಇದೆ. ಈಗಾಗಲೇ ಚಿತ್ರ ನೋಡಿರುವವರಿಗೆ ಧನ್ಯವಾದ. ನೋಡದೇ ಇರುವವರು ಈಗಲೇ ನೋಡಿ’ ಎಂದು ಮನವಿ ಮಾಡಿದರು.

ನಿರ್ದೇಶಕ ಚೇತನ್‍ ಕೇಶವ್‍ಗೆ ಇದು ಮೊದಲ ಚಿತ್ರ. ಅವರುಜ ಚಿತ್ರಮಂದಿರದತ್ತ ಬರುತ್ತಿಲ್ಲ ಎಂದು ಬೇಸರದಿಂದಲೇ ಹೇಳಿಕೊಂಡರು. ‘ಕನ್ನಡದಲ್ಲಿ ಒಳ್ಳೆಯ ಕಂಟೆಂಟ್ ಚಿತ್ರ ನಿರ್ದೇಶಿಸಬೇಕೆಂಬ ಆಸೆಯಿತ್ತು. ಅದು ಈಡೇರಿದೆ‌. ಜನ ಚಿತ್ರದ ಬಗ್ಗೆ ಪ್ರಶಂಸೆಯ ಮಾತುಗಳಾಡುತ್ತಿದ್ದಾರೆ. ಆದರೆ, ನಿರೀಕ್ಷಿಸಿದಷ್ಟು ಜನರು ಚಿತ್ರ ನೋಡಿಲ್ಲ ಎಂಬ ಬೇಸರವಿದೆ. ನಮ್ಮ ಚಿತ್ರವನ್ನು ಹೆಚ್ಚಿನ ಜನರು ನೋಡಿ’ ಎಂದರು.

ಕಾರ್ಯಕಾರಿ ನಿರ್ಮಾಪಕರಾದ ಬಾಲಕೃಷ್ಣ ಹಾಗೂ ಕೃಷ್ಣ ಮಾತನಾಡಿ, ‘ನಮ್ಮ ಜನ ಬೇರೆ ಭಾಷೆಗಳ ಚಿತ್ರಗಳಿಗೆ ನೀಡುವ ಪ್ರೋತ್ಸಾಹವನ್ನು ನಮ್ಮ ಕನ್ನಡ ಚಿತ್ರಗಳಿಗೆ ನೀಡುವುದಿಲ್ಲ ಎಂಬ ಬೇಸರ ಇದೆ. ದಯಮಾಡಿ ಕರ್ನಾಟಕದ ಜನರು ಕನ್ನಡ ಚಿತ್ರಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿ. ಒಬ್ಬ ನಿರ್ಮಾಪಕ ಗೆದ್ದರೆ, ಅದರಿಂದ ಬಂದ ಹಣವನ್ನು ಮತ್ತೊಂದು ಚಿತ್ರಕ್ಕೆ ಹಾಕುತ್ತಾನೆ. ಅದರಿಂದ ಸಾಕಷ್ಟು ಜನರಿಗೆ ಉದ್ಯೋಗ ಸಿಗುತ್ತದೆ’ ಎಂದರು.

‘ಲವ್‍ ಲೀ’ ಚಿತ್ರವನ್ನು ಅಭುವನಾಸ್ ಕ್ರೀಯೆಷನ್ಸ್ ಬ್ಯಾನರ್ ನಡಿ ರವೀಂದ್ರ ಕುಮಾರ್ ನಿರ್ಮಾಣ ಮಾಡಿದ್ದಾರೆ. ವಸಿಷ್ಠ ಸಿಂಗಹಗೆ ನಾಯಕಿಯಾಗಿ ಸ್ಟೆಫಿ ಪಟೇಲ್ ‍ನಟಿಸಿದ್ದು, ಮಿಕ್ಕಂತೆ ದತ್ತಣ್ಣ, ಕಾಕ್ರೋಜ್ ಸುಧೀ, ಶೇಖರ್, ವರ್ಧನ್, ಬೇಬಿ ವಂಶಿಕಾ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅನೂಪ್‍ ಸೀಳಿನ್‍ ಸಂಗೀತವಿದೆ.

ಭೂಮಿಕಾ

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

8 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

8 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

9 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

9 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

11 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

14 hours ago