ವಸಿಷ್ಠ ಸಿಂಹ ಅಭಿನಯದ ‘ಲವ್ ಲಿ’ ಚಿತ್ರವು ಜೂನ್ 14ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ, ಇದೀಗ 25 ದಿನಗಳನ್ನು ಪೂರೈಸಿದೆ. ಚಿತ್ರವೇನೋ 25 ದಿನಗಳನ್ನು ಪೂರೈಸಿದ್ದರೂ, ಜನ ಮಾತ್ರ ದೊಡ್ಡ ಮಟ್ಟದಲ್ಲಿ ಚಿತ್ರ ನೋಡುವುದಕ್ಕೆ ಬರುತ್ತಿಲ್ಲ ಎಂಬ ಬೇಸರ ಚಿತ್ರತಂಡದ್ದು.
ಚಿತ್ರ 25 ದಿನ ಓಡಿದ ಸಂತಸದಲ್ಲಿ ಚಿತ್ರತಂಡದವರು ಚಿತ್ರಕ್ಕೆ ದುಡಿದ ಕಲಾವಿದರು ಮತ್ತು ಮತ್ತು ತಂತ್ರಜ್ಞರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಎದುರಿಸಿದ ಸಾಕಷ್ಟು ಸಮಸ್ಯೆಗಳನ್ನು ಚಿತ್ರತಂಡದವರು ಹೇಳಿಕೊಂಡರು.
ಜೂನ್ ತಿಂಗಳಲ್ಲಿ ಚಿತ್ರ ಬಿಡುಗಡೆ ಮಾಡಿದ್ದೇ ತಪ್ಪಾಯ್ತು ಎಂದರು ವಸಿಷ್ಠ ಸಿಂಹ. ‘ಜೂನ್ ತಿಂಗಳು ನಮಗೆ ಮಾರಕವಾಯಿತು. ನಮ್ಮ ಚಿತ್ರ ಬಿಡುಗಡೆ ಸಮಯದಲ್ಲಿ ಒಂದಲ್ಲಾ ಒಂದು ಸಮಸ್ಯೆ ಎದುರಾಯಿತು. ಆ ಸಮಸ್ಯೆಗಳ ನಡುವೆ ನಮ್ಮ ಚಿತ್ರ ತೆರೆ ಕಂಡಿತ್ತು. ಚಿತ್ರ ನೋಡಿದವರು ಕಥೆಯನ್ನು ಮೆಚ್ಚಿಕೊಂಡಿದ್ದಾರೆ. ಆದರೆ, ನಾವು ನಿರೀಕ್ಷಿಸಿದಷ್ಟು ಜನ ಬರುತ್ತಿಲ್ಲ ಎಂಬ ಬೇಸರ ಇದ್ದೇ ಇದೆ. ಈಗಾಗಲೇ ಚಿತ್ರ ನೋಡಿರುವವರಿಗೆ ಧನ್ಯವಾದ. ನೋಡದೇ ಇರುವವರು ಈಗಲೇ ನೋಡಿ’ ಎಂದು ಮನವಿ ಮಾಡಿದರು.
ನಿರ್ದೇಶಕ ಚೇತನ್ ಕೇಶವ್ಗೆ ಇದು ಮೊದಲ ಚಿತ್ರ. ಅವರುಜ ಚಿತ್ರಮಂದಿರದತ್ತ ಬರುತ್ತಿಲ್ಲ ಎಂದು ಬೇಸರದಿಂದಲೇ ಹೇಳಿಕೊಂಡರು. ‘ಕನ್ನಡದಲ್ಲಿ ಒಳ್ಳೆಯ ಕಂಟೆಂಟ್ ಚಿತ್ರ ನಿರ್ದೇಶಿಸಬೇಕೆಂಬ ಆಸೆಯಿತ್ತು. ಅದು ಈಡೇರಿದೆ. ಜನ ಚಿತ್ರದ ಬಗ್ಗೆ ಪ್ರಶಂಸೆಯ ಮಾತುಗಳಾಡುತ್ತಿದ್ದಾರೆ. ಆದರೆ, ನಿರೀಕ್ಷಿಸಿದಷ್ಟು ಜನರು ಚಿತ್ರ ನೋಡಿಲ್ಲ ಎಂಬ ಬೇಸರವಿದೆ. ನಮ್ಮ ಚಿತ್ರವನ್ನು ಹೆಚ್ಚಿನ ಜನರು ನೋಡಿ’ ಎಂದರು.
ಕಾರ್ಯಕಾರಿ ನಿರ್ಮಾಪಕರಾದ ಬಾಲಕೃಷ್ಣ ಹಾಗೂ ಕೃಷ್ಣ ಮಾತನಾಡಿ, ‘ನಮ್ಮ ಜನ ಬೇರೆ ಭಾಷೆಗಳ ಚಿತ್ರಗಳಿಗೆ ನೀಡುವ ಪ್ರೋತ್ಸಾಹವನ್ನು ನಮ್ಮ ಕನ್ನಡ ಚಿತ್ರಗಳಿಗೆ ನೀಡುವುದಿಲ್ಲ ಎಂಬ ಬೇಸರ ಇದೆ. ದಯಮಾಡಿ ಕರ್ನಾಟಕದ ಜನರು ಕನ್ನಡ ಚಿತ್ರಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿ. ಒಬ್ಬ ನಿರ್ಮಾಪಕ ಗೆದ್ದರೆ, ಅದರಿಂದ ಬಂದ ಹಣವನ್ನು ಮತ್ತೊಂದು ಚಿತ್ರಕ್ಕೆ ಹಾಕುತ್ತಾನೆ. ಅದರಿಂದ ಸಾಕಷ್ಟು ಜನರಿಗೆ ಉದ್ಯೋಗ ಸಿಗುತ್ತದೆ’ ಎಂದರು.
‘ಲವ್ ಲೀ’ ಚಿತ್ರವನ್ನು ಅಭುವನಾಸ್ ಕ್ರೀಯೆಷನ್ಸ್ ಬ್ಯಾನರ್ ನಡಿ ರವೀಂದ್ರ ಕುಮಾರ್ ನಿರ್ಮಾಣ ಮಾಡಿದ್ದಾರೆ. ವಸಿಷ್ಠ ಸಿಂಗಹಗೆ ನಾಯಕಿಯಾಗಿ ಸ್ಟೆಫಿ ಪಟೇಲ್ ನಟಿಸಿದ್ದು, ಮಿಕ್ಕಂತೆ ದತ್ತಣ್ಣ, ಕಾಕ್ರೋಜ್ ಸುಧೀ, ಶೇಖರ್, ವರ್ಧನ್, ಬೇಬಿ ವಂಶಿಕಾ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತವಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…