ಮನರಂಜನೆ

ಮುಖ್ಯಮಂತ್ರಿಗಳಿಂದ ಬಿಡುಗಡೆ ಆಯಿತು ‘ವೀರ ಚಂದ್ರಹಾಸ’ ಟ್ರೇಲರ್‍

ರವಿ ಬಸ್ರೂರು ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ ‘ವೀರ ಚಂದ್ರಹಾಸ’ ಚಿತ್ರವು ಏಪ್ರಿಲ್‍ 18ರಂದು ರಾಜ್ಯಾದ್ಯಂತ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಅದಕ್ಕೂ ಮೊದಲು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರದ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ರವಿ ಬಸ್ರೂರು, ಮುಖ್ಯಮಂತ್ರಿಗಳನ್ನು ಟ್ರೇಲರ್‍ ಬಿಡುಗಡೆ ಮಾಡುವುದಕ್ಕೆ ಆಹ್ವಾನಿಸಿದ್ದು, ಮುಖ್ಯಮಂತ್ರಿಗಳು ಚಿತ್ರ ನೋಡುವ ಆಶ್ವಾಸನೆಯನ್ನು ನೀಡಿದ್ದಾರೆ.

ಕನ್ನಡ ಕೆಲವು ಸಿನಿಮಾಗಳಲ್ಲಿ ಯಕ್ಷಗಾನದ ನೃತ್ಯ ಮತ್ತು ಕಲಾವಿದರನ್ನು ಬಳಸಿಕೊಳ್ಳಲಾಗಿದೆ. ಭಾರತೀಯ ಚಿತ್ರರಂಗದಲ್ಲೇ ಇದೇ ಮೊದಲ ಬಾರಿಗೆ ಯಕ್ಷಗಾನವನ್ನು ಸಂಪೂರ್ಣವಾಗಿ ಬಳಸಿಕೊಂಡು ‘ವೀರ ಚಂದ್ರಹಾಸ’ ಚಿತ್ರವನ್ನು ರೂಪಿಸಲಾಗಿದೆ. ಯಕ್ಷಗಾನ ಪ್ರಸಂಗ, ಕಲಾವಿದರು, ವೇಷ ಭೂಷಣವನ್ನೇ ಸಂಪೂರ್ಣವಾಗಿ ಇಟ್ಟುಕೊಂಡು, ‘ವೀರ ಚಂದ್ರಹಾಸ’ ಎಂಬ ಚಿತ್ರ ಮಾಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡಿರುವ ರವಿ ಬಸ್ರೂರು, ‘ಯಕ್ಷಗಾನ ಸಾಕಷ್ಟು ವಿಷಯ ಭಂಡಾರ ಇರುವಂತಹ ಒಂದು ಕಲೆ. ಸುಮಾರು 12 ವರ್ಷಗಳಿಂದ ಇಂಥದ್ದೊಂದು ಚಿತ್ರ ಮಾಡಬೇಕು ಎಂಬ ಆಸೆ ಇತ್ತು. ಅದೀಗ ಕೈಗೂಡಿದೆ. ಚಿತ್ರದಲ್ಲಿ ಸಾಕಷ್ಟು ಯಕ್ಷಗಾನ ಕಲಾವಿದರು ನಟಿಸಿದ್ದಾರೆ. ಈ ಪ್ರಸಂಗದ ಅವಧಿ ಐದು ತಾಸಿನಷ್ಟಿದ್ದು, ಅದರಲ್ಲಿ ಆಯ್ದ ಕೆಲವು ಮುಖ್ಯ ಭಾಗಗಳನ್ನಷ್ಟೇ ಬಳಸಿಕೊಂಡಿದ್ದೇವೆ. ಈ ಕಥೆಯಲ್ಲಿ ಎಲ್ಲಾ ಕಮರ್ಷಿಯಲ್ ಅಂಶಗಳು ಇವೆ. ಒಬ್ಬ ಭಿಕ್ಷುಕ ಒಂದು ರಾಜ್ಯದ ದೊರೆ ಆಗುತ್ತಾನೆ ಎನ್ನುವುದು ಚಿತ್ರದ ಕಥೆ. ಅದು ಹೇಗೆ ಸಾಧ್ಯವಾಯಿತು ಎನ್ನುವುದೇ ಚಿತ್ರ’ ಎನ್ನುತ್ತಾರೆ ರವಿ ಬಸ್ರೂರು.

‘ವೀರ ಚಂದ್ರಹಾಸ’ ಚಿತ್ರದಲ್ಲಿ 450ಕ್ಕೂ ಹೆ್ಚು ನಿಜ ಯಕ್ಷಗಾನ ಕಲಾವಿದರು ಪ್ರಮುಖ ಪಾತರಗಳಲ್ಲಿ ನಟಿಸಿದ್ದಾರಂತೆ. ಈ ಚಿತ್ರವನ್ನು ಓಂಕಾರ್‍ ಮೂವೀಸ್‍ ಬ್ಯಾನರ್‍ ಅಡಿ ಎನ್‍.ಎಸ್. ರಾಜಕುಮಾರ್ ನಿರ್ಮಿಸಿದ್ದು, ನಾಗಶ್ರೀ ಜಿ.ಎಸ್‍, ಪ್ರಸನ್ನ ಶೆಟ್ಟಿಗಾರ್ ಮಂದರ್ತಿ, ರವೀಂದ್ರ ದೇವಾಡಿಗ, ಶೀತಲ್‍ ಶೆಟ್ಟಿ, ಉದಯ್‍ ಕಡಬಾಲ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮೈಸೂರು ಕುಡಿವ ನೀರು, ಒಳಚರಂಡಿ ವ್ಯವಸ್ಥೆಗೆ 800 ಕೋಟಿ ರೂ. : ಸಚಿವ ಬೈರತಿ ಸುರೇಶ್

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…

4 mins ago

ಸಿಲಿಂಡರ್‌ಗಳ ಮೇಲೆ ಕಳ್ಳರ ಕಣ್ಣು!

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್‌ ಕಳ್ಳತನ ಸಹ ಹೆಚ್ಚಾಗಿದ್ದು…

1 hour ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿದ ಮೊಜ್ತಾಬಾ? ದಾಳಿ ಬಗ್ಗೆ ಸಿಗದ ಸ್ಪಷ್ಟನೆ

ಟೆಹ್ರಾನ್ : ಇರಾನ್- ಇಸ್ರೇಲ್‌,‌ ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್‌ ಸುಪ್ರೀಂ…

2 hours ago

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

3 hours ago

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…

3 hours ago

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…

3 hours ago