ಮನರಂಜನೆ

ಹೆಸರು ಬದಲಿಸಿಕೊಂಡ ಶಶಿಕುಮಾರ್ ಮಗ ಅಕ್ಷಿತ್; ಹೊಸ ಹೆಸರೇನು?

ಶಶಿಕುಮಾರ್‍ ಮಗ ಕನ್ನಡ ಚಿತ್ರರಂಗಕ್ಕೆ ಬಂದು ಎರಡ್ಮೂರು ವರ್ಷಗಳೇ ಆಗಿವೆ. ಆದರೆ, ಅದ್ಯಾಕೋ ಇನ್ನೂ ಕನ್ನಡ ಚಿತ್ರರಂಗದಲ್ಲಿ ಗಟ್ಟಿ ನೆಲೆ ಕಂಡುಕೊಳ್ಳುವುದಕ್ಕೆ ಸಾಧ್ಯವಾಗಿಲ್ಲ. ಅಕ್ಷಿತ್‍ ಇದುವರೆಗೂ ‘ಓ ಮೈ ಲವ್‍’ ಮತ್ತು ‘ಕೇವೋಸ್‍’ ಎಂಬ ಚಿತ್ರಗಳಲ್ಲಿ ನಟಿಸಿದ್ದು, ಎರಡೂ ಸದ್ದು ಮಾಡಲಿಲ್ಲ.

ಹೀಗಿರುವಾಗಲೇ ಅಕ್ಷಿತ್‍ ತಮ್ಮ ಮೂರನೆಯ ಚಿತ್ರದೊಂದಿಗೆ ವಾಪಸ್ಸಾಗಿದ್ದಾರೆ. ‘ಕಾದಾಡಿ’ ಹೆಸರಿನ ಈ ಚಿತ್ರವು ಇದೇ ಶುಕ್ರವಾರ (ಜುಲೈ 05) ಬಿಡುಗಡೆಯಾಗುತ್ತಿದೆ. ವಿಶೇಷ ಏನ್‍ ಗೊತ್ತಾ? ಈ ಚಿತ್ರದಲ್ಲಿ ಅಕ್ಷಿತ್‍ ತಮ್ಮ ಹೆಸರು ಬದಲಾಯಿಸಿಕೊಂಡಿದ್ದು, ಆದಿತ್ಯ ಎಂದು ಇಟ್ಟುಕೊಂಡಿದ್ದಾರೆ. ಇನ್ನು ಮುಂದೆ ಅದೇ ಹೆಸರಿನಲ್ಲಿ ಅವರು ಮುಂದುವರೆಯುತ್ತಾರಂತೆ.

ಇಷ್ಟಕ್ಕೂ ಅಕ್ಷಿತ್‍ ಹೆಸರು ಬದಲಾಯಿಸಿಕೊಂಡಿದ್ದೇಕೆ? ಜ್ಯೋತಿಷ್ಯ ಎಂಬ ಉತ್ತರ ಅವರಿಂದ ಬರುತ್ತದೆ. ಜ್ಯೋತಿಷ್ಯದಲ್ಲಿ ನಂಬಿಕೆ ಇರುವುದರಿಂದಲೇ ಅವರು ಈ ಹಿಂದೆ ಹೆಸರು ಬದಲಾಯಿಸಿಕೊಂಡಿದ್ದರಂತೆ. ‘ನನ್ನ ನಿಜವಾದ ಹೆಸರು ಆದಿತ್ಯ. ನನ್ನ ಸ್ನೇಹಿತರೆಲ್ಲಾ ಆದಿತ್ಯ ಅಂತಲೇ ಕರೆಯುತ್ತಾರೆ. ಅಕ್ಷಿತ್‍ ಎನ್ನುವ ಹೆಸರು ಚೆನ್ನಾಗಿದೆ, ಸಿನಿಮಾಗಾಗಿ ಬದಲಾಯಿಸಿಕೋ ಎಂದು ಯಾರೋ ಸಲಹೆ ನೀಡಿದರು. ಅದಕ್ಕಾಗಿ ಬದಲಾಯಿಸಿಕೊಂಡಿದ್ದೆ. ಆದರೆ, ಬಹಳಷ್ಟು ಜನರಿಗೆ ಹೆಸರು ಹೇಳೋಕೆ ಬರುತ್ತಿರಲಿಲ್ಲ. ಅಕ್ಷಯ್, ಅಕ್ಷತ್‍ ಎಂದೆಲ್ಲಾ ಕರೆಯುತ್ತಿದ್ದರು. ಯಾಕೋ ಸರಿ ಹೋಗುತ್ತಿಲ್ಲ ಎಂದು ನನ್ನ ಮೂಲ ಹೆಸರಿಗೆ ವಾಪಸ್ಸಾದೆ. ಇನ್ನು ಮುಂದೆ ಇದೇ ಹೆಸರಿನಲ್ಲಿ ಗುರುತಿಸಿಕೊಳ್ಳುವುದಕ್ಕೆ ಇಷ್ಟಪಡುತ್ತೇನೆ’ ಎನ್ನುತ್ತಾರೆ.

‘ಕಾದಾಡಿ’ ಚಿತ್ರದ ಕುರಿತು ಮಾತನಾಡುವ ಆದಿತ್ಯ, ‘ಇದೊಂದು ವಿಚಿತ್ರವಾದ ಪಾತ್ರ. ಇಲ್ಲಿ ನಾಯಕ ಒಳ್ಳೆಯವನೋ, ಕಟ್ಟವನೋ ಎಂದು ಗೆಸ್ ಮಾಡುವುದು ಕಷ್ಟ. ಮೂರೂವರೆ ವರ್ಷದ ಹಿಂದೆ ಪ್ರಾರಂಭವಾದ ಚಿತ್ರ. ಆಗ ನನ್ನ ಯಾವುದೇ ಸಿನಿಮಾ ಬಿಡುಗಡೆಯಾಗಿರಲಿಲ್ಲ. ಅವರು ಹೇಳಿದ ಕಥೆ ನನಗೆ ಬಹಳ ಇಷ್ಟವಾಯಿತು. ತೆಲುಗು ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ಮಾಡೋಣ ಎಂದರು. ಆ ನಂತರ ಕನ್ನಡದಲ್ಲೂ ಡಬ್‍ ಮಾಡಿ ಬಿಡುಗಡೆ ಮಾಡುವ ನಿರ್ಧಾರವಾಯಿತು. ಕನ್ನಡದಲ್ಲಿ ನಾನೇ ಡಬ್‍ ಮಾಡಿದ್ದೀನಿ. ಕನ್ನಡದಲ್ಲಿ ಚಿತ್ರ ಮೊದಲು ಬಿಡುಗಡೆ ಆಗುತ್ತಿದೆ. ಆಗಸ್ಟ್ನಲಲಿ ಬೇರೆ ಭಾಷೆಗಳಲ್ಲಿ ಬಿಡಗುಡೆಯಾಗುತ್ತಿದೆ’ ಎನ್ನುತ್ತಾರೆ.

ಕನ್ನಡ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ಸಿದ್ದಗೊಂಡಿರುವ, ‘ಕಾದಾಡಿ’ ಚಿತ್ರವನ್ನು ಸತೀಶ್ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಿಂಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ. ಭೀಮ್ಸ್ ಸಿಸಿರಿಲಿಯೋ ಸಂಗೀತ ಮತ್ತು ಡಿ. ಯೋಗಿಪ್ರಸಾದ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

‘ಕಾದಾಡಿ’ ಚಿತ್ರದಲ್ಲಿ ಆದಿತ್ಯಗೆ ಲಾವಣ್ಯ ಸಾಹುಕಾರ್‍ ಮತ್ತು ಚಾಂದಿನಿ ತಮಿಳರಸನ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಪೋಸಾನಿ ಕೃಷ್ಣಮುರಳಿ, ರವಿ ಕಾಳೆ, ಮಾರಿಮುತ್ತು, ಪ್ರೇಮ್‌ ಮನೋಹರ್, ಶ್ರವಣ್‌ ರಾಘವೇಂದ್ರ ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ಅನಾರೋಗ್ಯ ಪೀಡಿತ ಮಹಿಳೆ ಕುಟುಂಬಕ್ಕೆ ಎಚ್.ಡಿ. ಕುಮಾರಸ್ವಾಮಿ ನೆರವು

ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು…

1 hour ago

ಹುಲಿಕಲ್ ಘಾಟ್‌ನಲ್ಲಿ ಗುಡ್ಡ ಕುಸಿತ ; ಮೂವರು ಕಾರ್ಮಿಕರು ಸಾವು.

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…

2 hours ago

ಇಂದಿನಿಂದ ಟೋಲ್‌ಗಳಲ್ಲಿ ಕ್ಯಾಷ್‌ ಇಲ್ಲ ; ಡಿಜಿಟಲ್‌ ಪಾವತಿ ಮಾತ್ರ.

ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು…

3 hours ago

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

6 hours ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

6 hours ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

6 hours ago