ಮನರಂಜನೆ

‘ಮಾರ್ಟಿನ್‍’ಗೆ ‘ವೆಟ್ಟೈಯನ್’ ಮತ್ತು ‘ಕಂಗುವಾ’ ಸವಾಲು …

‘ಮಾರ್ಟಿನ್‍’ ಚಿತ್ರತಂಡ ಎದುರಿಸುತ್ತಿರುವ ಸಮಸ್ಯೆ ಒಂದೆರಡಲ್ಲ. ಮೊದಲಿಗೆ ಚಿತ್ರದ ಬಜೆಟ್‍ ವಿಪರೀತ ಹೆಚ್ಚಾಗಿ, ಚಿತ್ರೀಕರಣ ತಡವಾಗಿ, ಎಲ್ಲವೂ ನಿಧಾನವಾಯಿತು. ನಂತರ ನಿರ್ಮಾಪಕರು ಮತ್ತು ನಿರ್ದೇಶಕರ ನಡುವಿನ ಕಿತ್ತಾಟ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೆಗೂ ಹೋಯಿತು. ಆ ನಂತರ ನಿರ್ದೇಶಕರು ಎಲ್ಲರಿಂದ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದು, ಪ್ರಕರಣ ಇನ್ನಷ್ಟು ಕಗ್ಗಂಟಾಯಿತು. ಈಗ ಎಲ್ಲವೂ ಮುಗಿದು, ಚಿತ್ರ ಬಿಡುಗಡೆಗ ಇನ್ನೇನು ಒಂದೂವರೆ ತಿಂಗಳಿದೆ ಎನ್ನುವಾಗಲೇ ಇನ್ನೊಂದು ಸಮಸ್ಯೆ ಶುರುವಾಗಿದೆ.

‘ಮಾರ್ಟಿನ್‍’ ಚಿತ್ರವು ಅಕ್ಟೋಬರ್‍ 11ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿರುವುದು ಗೊತ್ತೇ ಇದೆ. ಈಗ ಅ.10ರಂದು ರಜನಿಕಾಂತ್‍ ಅಭಿನಯದ ತಮಿಳಿನ ‘ವೆಟ್ಟೈಯನ್‍’ ಮತ್ತು ಸೂರ್ಯ ಅಭಿನಯದ ‘ಕಂಗುವಾ’ ಚಿತ್ರಗಳು ಬಿಡುಗಡೆಯಾಗುತ್ತಿವೆ. ‘ಕಂಗುವಾ’ ಚಿತ್ರದ ಬಿಡುಗಡೆ ದಿನಾಂಕ ಈ ಹಿಂದೆಯೇ ಘೋಷಣೆಯಾಗಿತ್ತು. ಸೋಮವಾರ, ‘ವೆಟ್ಟೈಯನ್‍’ ಚಿತ್ರದ ಬಿಡುಗಡೆ ದಿನಾಂಕ ಸಹ ಘೋಷಣೆಯಾಗಿದ್ದು, ಅದು ಸಹ ಅ.10ರಂದು ಬಿಡುಗಡೆಯಾಗಲಿದೆ.

ಈ ಮೂರೂ ಚಿತ್ರಗಳ ಪೈಕಿ, ‘ಮಾರ್ಟಿನ್‍’ ಮತ್ತು ‘ಕಂಗುವಾ’ ಚಿತ್ರಗಳು ಪ್ಯಾನ್ ಇಂಡಿಯಾ ಚಿತ್ರಗಳಾಗಿದ್ದು, ‘ವೆಟ್ಟೈಯನ್‍’ ಮಾತ್ರ ತಮಿಳಿನಲ್ಲಿ ಬಿಡುಗಡೆಯಾಗುತ್ತಿದೆ. ರಜನಿಕಾಂತ್‍ ಮತ್ತು ಸೂರ್ಯಗೆ ಕರ್ನಾಟಕದಲ್ಲೂ ಅಭಿಮಾನಿಗಳು ಹೆಚ್ಚಿದ್ದು, ‘ವೆಟ್ಟೈಯನ್‍’ ಮತ್ತು ‘ಕಂಗುವಾ’ ಚಿತ್ರಗಳು ಇಲ್ಲೂ ದೊಡ್ಡ ಓಪನಿಂಗ್‍ ಪಡೆಯಬಹುದು ಎಂಬ ನಿರೀಕ್ಷೆ ಇದೆ. ಆ ಎರಡು ಚಿತ್ರಗಳಿಂದ ಆಂಧ್ರ, ತೆಲಂಗಾಣ ಮತ್ತು ತಮಿಳುನಾಡುಗಳಲ್ಲಿ ‘ಮಾರ್ಟಿನ್‍’ಗೆ ಸಮಸ್ಯೆ ಆಗಲಿದೆ. ಪ್ರಮುಖವಾಗಿ ಚಿತ್ರಮಂದಿರಗಳ ಸಂಖ್ಯೆ ಕಡಿಮೆ ಆಗುವ ಸಾಧ್ಯತೆ ಇದೆ.

‘ವೆಟ್ಟೈಯನ್’ ಬಹಳಷ್ಟು ನಿರೀಕ್ಷೆ ಹುಟ್ಟಿಸಲು ನಾನಾ ಕಾರಣಗಳಿವೆ. ಇದು ರಜನಿಕಾಂತ್‍ ಅಭಿನಯದ 170ನೇ ಚಿತ್ರ. ಇದರಲ್ಲಿ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ವೆಟ್ಟೈಯನ್’ ಚಿತ್ರದಲ್ಲಿ ಬಹಳ ವರ್ಷಗಳ ನಂತರ ರಜನಿಕಾಂತ್ ಜೊತೆಗೆ ಅಮಿತಾಭ್ ಬಚ್ಚನ್ ನಟಿಸುತ್ತಿದ್ದಾರೆ. ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್, ರಿತಿಕಾ ಸಿಂಗ್, ದುಶರಾ ವಿಜಯನ್, ರಕ್ಷನ್, ಜಿ ಎಂ ಕುಮಾರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನು, ‘ಕಂಗುವಾ’ ಒಂದು ಫ್ಯಾಂಟಸಿ ಚಿತ್ರವಾಗಿದ್ದು, ಸೂರ್ಯ ಎದುರು ನೆಗೆಟಿವ್‍ ಪಾತ್ರದಲ್ಲಿ ಬಾಲಿವುಡ್‍ ನಟ ಬಾಬ್ಬಿ ಡಿಯೋಲ್‍ ನಟಿಸುತ್ತಿದ್ದಾರೆ. ದಿಶಾ ಪಠಾಣಿ ಈ ಚಿತ್ರದ ನಾಯಕಿ. ಈ ಚಿತ್ರವು 38 ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಭೂಮಿಕಾ

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

58 mins ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

4 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

4 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

5 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

5 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

5 hours ago