ಮನರಂಜನೆ

‘ಮಾರ್ಟಿನ್‍’ಗೆ ‘ವೆಟ್ಟೈಯನ್’ ಮತ್ತು ‘ಕಂಗುವಾ’ ಸವಾಲು …

‘ಮಾರ್ಟಿನ್‍’ ಚಿತ್ರತಂಡ ಎದುರಿಸುತ್ತಿರುವ ಸಮಸ್ಯೆ ಒಂದೆರಡಲ್ಲ. ಮೊದಲಿಗೆ ಚಿತ್ರದ ಬಜೆಟ್‍ ವಿಪರೀತ ಹೆಚ್ಚಾಗಿ, ಚಿತ್ರೀಕರಣ ತಡವಾಗಿ, ಎಲ್ಲವೂ ನಿಧಾನವಾಯಿತು. ನಂತರ ನಿರ್ಮಾಪಕರು ಮತ್ತು ನಿರ್ದೇಶಕರ ನಡುವಿನ ಕಿತ್ತಾಟ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೆಗೂ ಹೋಯಿತು. ಆ ನಂತರ ನಿರ್ದೇಶಕರು ಎಲ್ಲರಿಂದ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದು, ಪ್ರಕರಣ ಇನ್ನಷ್ಟು ಕಗ್ಗಂಟಾಯಿತು. ಈಗ ಎಲ್ಲವೂ ಮುಗಿದು, ಚಿತ್ರ ಬಿಡುಗಡೆಗ ಇನ್ನೇನು ಒಂದೂವರೆ ತಿಂಗಳಿದೆ ಎನ್ನುವಾಗಲೇ ಇನ್ನೊಂದು ಸಮಸ್ಯೆ ಶುರುವಾಗಿದೆ.

‘ಮಾರ್ಟಿನ್‍’ ಚಿತ್ರವು ಅಕ್ಟೋಬರ್‍ 11ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿರುವುದು ಗೊತ್ತೇ ಇದೆ. ಈಗ ಅ.10ರಂದು ರಜನಿಕಾಂತ್‍ ಅಭಿನಯದ ತಮಿಳಿನ ‘ವೆಟ್ಟೈಯನ್‍’ ಮತ್ತು ಸೂರ್ಯ ಅಭಿನಯದ ‘ಕಂಗುವಾ’ ಚಿತ್ರಗಳು ಬಿಡುಗಡೆಯಾಗುತ್ತಿವೆ. ‘ಕಂಗುವಾ’ ಚಿತ್ರದ ಬಿಡುಗಡೆ ದಿನಾಂಕ ಈ ಹಿಂದೆಯೇ ಘೋಷಣೆಯಾಗಿತ್ತು. ಸೋಮವಾರ, ‘ವೆಟ್ಟೈಯನ್‍’ ಚಿತ್ರದ ಬಿಡುಗಡೆ ದಿನಾಂಕ ಸಹ ಘೋಷಣೆಯಾಗಿದ್ದು, ಅದು ಸಹ ಅ.10ರಂದು ಬಿಡುಗಡೆಯಾಗಲಿದೆ.

ಈ ಮೂರೂ ಚಿತ್ರಗಳ ಪೈಕಿ, ‘ಮಾರ್ಟಿನ್‍’ ಮತ್ತು ‘ಕಂಗುವಾ’ ಚಿತ್ರಗಳು ಪ್ಯಾನ್ ಇಂಡಿಯಾ ಚಿತ್ರಗಳಾಗಿದ್ದು, ‘ವೆಟ್ಟೈಯನ್‍’ ಮಾತ್ರ ತಮಿಳಿನಲ್ಲಿ ಬಿಡುಗಡೆಯಾಗುತ್ತಿದೆ. ರಜನಿಕಾಂತ್‍ ಮತ್ತು ಸೂರ್ಯಗೆ ಕರ್ನಾಟಕದಲ್ಲೂ ಅಭಿಮಾನಿಗಳು ಹೆಚ್ಚಿದ್ದು, ‘ವೆಟ್ಟೈಯನ್‍’ ಮತ್ತು ‘ಕಂಗುವಾ’ ಚಿತ್ರಗಳು ಇಲ್ಲೂ ದೊಡ್ಡ ಓಪನಿಂಗ್‍ ಪಡೆಯಬಹುದು ಎಂಬ ನಿರೀಕ್ಷೆ ಇದೆ. ಆ ಎರಡು ಚಿತ್ರಗಳಿಂದ ಆಂಧ್ರ, ತೆಲಂಗಾಣ ಮತ್ತು ತಮಿಳುನಾಡುಗಳಲ್ಲಿ ‘ಮಾರ್ಟಿನ್‍’ಗೆ ಸಮಸ್ಯೆ ಆಗಲಿದೆ. ಪ್ರಮುಖವಾಗಿ ಚಿತ್ರಮಂದಿರಗಳ ಸಂಖ್ಯೆ ಕಡಿಮೆ ಆಗುವ ಸಾಧ್ಯತೆ ಇದೆ.

‘ವೆಟ್ಟೈಯನ್’ ಬಹಳಷ್ಟು ನಿರೀಕ್ಷೆ ಹುಟ್ಟಿಸಲು ನಾನಾ ಕಾರಣಗಳಿವೆ. ಇದು ರಜನಿಕಾಂತ್‍ ಅಭಿನಯದ 170ನೇ ಚಿತ್ರ. ಇದರಲ್ಲಿ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ವೆಟ್ಟೈಯನ್’ ಚಿತ್ರದಲ್ಲಿ ಬಹಳ ವರ್ಷಗಳ ನಂತರ ರಜನಿಕಾಂತ್ ಜೊತೆಗೆ ಅಮಿತಾಭ್ ಬಚ್ಚನ್ ನಟಿಸುತ್ತಿದ್ದಾರೆ. ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್, ರಿತಿಕಾ ಸಿಂಗ್, ದುಶರಾ ವಿಜಯನ್, ರಕ್ಷನ್, ಜಿ ಎಂ ಕುಮಾರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನು, ‘ಕಂಗುವಾ’ ಒಂದು ಫ್ಯಾಂಟಸಿ ಚಿತ್ರವಾಗಿದ್ದು, ಸೂರ್ಯ ಎದುರು ನೆಗೆಟಿವ್‍ ಪಾತ್ರದಲ್ಲಿ ಬಾಲಿವುಡ್‍ ನಟ ಬಾಬ್ಬಿ ಡಿಯೋಲ್‍ ನಟಿಸುತ್ತಿದ್ದಾರೆ. ದಿಶಾ ಪಠಾಣಿ ಈ ಚಿತ್ರದ ನಾಯಕಿ. ಈ ಚಿತ್ರವು 38 ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಭೂಮಿಕಾ

Recent Posts

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

3 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳ ಬೇಕೇ?

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…

3 hours ago

ಉಪನಗರ ಯೋಜನೆ ಖಂಡಿತ ಅಭಿವೃದ್ಧಿಯಲ್ಲ

ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು.…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಗೆದಷ್ಟು ಬಹಿರಂಗ; ರಾಮಮಂದಿರ ಕಾಣಿಕೆ ಲೂಟಿ

ಹಲವು ದಶಕಗಳ ಹೋರಾಟದಿಂದ ಎರಡೂವರೆ ವರ್ಷಗಳ ಹಿಂದೆ ನನಸಾದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀರಾಮ ಮಂದಿರದಗಿರುವ ಭಕ್ತರ ಕಾಣಿಕೆಯ…

3 hours ago

ಎಸ್‌ಐಆರ್: ಮಿಶ್ರ ಪ್ರತಿಕ್ರಿಯೆ

ಕೆ.ಎಸ್.ಚಂದ್ರಶೇಖರ ಮೂರ್ತಿ ‘ಸಂವಿಧಾನಬದ್ಧ ಪ್ರಕ್ರಿಯೆ; ಕಾರ್ಯವಿಧಾನದ ಬಗ್ಗೆ ಅಸಮಾಧಾನ’ ಸಾಹಿತಿಗಳು, ಗಣ್ಯರು, ಮುಖಂಡರ ಅಭಿಪ್ರಾಯ ಮೈಸೂರು: ಭಾರತೀಯ ಚುನಾವಣಾ ಆಯೋಗದ…

3 hours ago