ಮನರಂಜನೆ

‘ಮಾರ್ಟಿನ್‍’ಗೆ ‘ವೆಟ್ಟೈಯನ್’ ಮತ್ತು ‘ಕಂಗುವಾ’ ಸವಾಲು …

‘ಮಾರ್ಟಿನ್‍’ ಚಿತ್ರತಂಡ ಎದುರಿಸುತ್ತಿರುವ ಸಮಸ್ಯೆ ಒಂದೆರಡಲ್ಲ. ಮೊದಲಿಗೆ ಚಿತ್ರದ ಬಜೆಟ್‍ ವಿಪರೀತ ಹೆಚ್ಚಾಗಿ, ಚಿತ್ರೀಕರಣ ತಡವಾಗಿ, ಎಲ್ಲವೂ ನಿಧಾನವಾಯಿತು. ನಂತರ ನಿರ್ಮಾಪಕರು ಮತ್ತು ನಿರ್ದೇಶಕರ ನಡುವಿನ ಕಿತ್ತಾಟ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೆಗೂ ಹೋಯಿತು. ಆ ನಂತರ ನಿರ್ದೇಶಕರು ಎಲ್ಲರಿಂದ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದು, ಪ್ರಕರಣ ಇನ್ನಷ್ಟು ಕಗ್ಗಂಟಾಯಿತು. ಈಗ ಎಲ್ಲವೂ ಮುಗಿದು, ಚಿತ್ರ ಬಿಡುಗಡೆಗ ಇನ್ನೇನು ಒಂದೂವರೆ ತಿಂಗಳಿದೆ ಎನ್ನುವಾಗಲೇ ಇನ್ನೊಂದು ಸಮಸ್ಯೆ ಶುರುವಾಗಿದೆ.

 

‘ಮಾರ್ಟಿನ್‍’ ಚಿತ್ರವು ಅಕ್ಟೋಬರ್‍ 11ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿರುವುದು ಗೊತ್ತೇ ಇದೆ. ಈಗ ಅ.10ರಂದು ರಜನಿಕಾಂತ್‍ ಅಭಿನಯದ ತಮಿಳಿನ ‘ವೆಟ್ಟೈಯನ್‍’ ಮತ್ತು ಸೂರ್ಯ ಅಭಿನಯದ ‘ಕಂಗುವಾ’ ಚಿತ್ರಗಳು ಬಿಡುಗಡೆಯಾಗುತ್ತಿವೆ. ‘ಕಂಗುವಾ’ ಚಿತ್ರದ ಬಿಡುಗಡೆ ದಿನಾಂಕ ಈ ಹಿಂದೆಯೇ ಘೋಷಣೆಯಾಗಿತ್ತು. ಸೋಮವಾರ, ‘ವೆಟ್ಟೈಯನ್‍’ ಚಿತ್ರದ ಬಿಡುಗಡೆ ದಿನಾಂಕ ಸಹ ಘೋಷಣೆಯಾಗಿದ್ದು, ಅದು ಸಹ ಅ.10ರಂದು ಬಿಡುಗಡೆಯಾಗಲಿದೆ.

ಈ ಮೂರೂ ಚಿತ್ರಗಳ ಪೈಕಿ, ‘ಮಾರ್ಟಿನ್‍’ ಮತ್ತು ‘ಕಂಗುವಾ’ ಚಿತ್ರಗಳು ಪ್ಯಾನ್ ಇಂಡಿಯಾ ಚಿತ್ರಗಳಾಗಿದ್ದು, ‘ವೆಟ್ಟೈಯನ್‍’ ಮಾತ್ರ ತಮಿಳಿನಲ್ಲಿ ಬಿಡುಗಡೆಯಾಗುತ್ತಿದೆ. ರಜನಿಕಾಂತ್‍ ಮತ್ತು ಸೂರ್ಯಗೆ ಕರ್ನಾಟಕದಲ್ಲೂ ಅಭಿಮಾನಿಗಳು ಹೆಚ್ಚಿದ್ದು, ‘ವೆಟ್ಟೈಯನ್‍’ ಮತ್ತು ‘ಕಂಗುವಾ’ ಚಿತ್ರಗಳು ಇಲ್ಲೂ ದೊಡ್ಡ ಓಪನಿಂಗ್‍ ಪಡೆಯಬಹುದು ಎಂಬ ನಿರೀಕ್ಷೆ ಇದೆ. ಆ ಎರಡು ಚಿತ್ರಗಳಿಂದ ಆಂಧ್ರ, ತೆಲಂಗಾಣ ಮತ್ತು ತಮಿಳುನಾಡುಗಳಲ್ಲಿ ‘ಮಾರ್ಟಿನ್‍’ಗೆ ಸಮಸ್ಯೆ ಆಗಲಿದೆ. ಪ್ರಮುಖವಾಗಿ ಚಿತ್ರಮಂದಿರಗಳ ಸಂಖ್ಯೆ ಕಡಿಮೆ ಆಗುವ ಸಾಧ್ಯತೆ ಇದೆ.

‘ವೆಟ್ಟೈಯನ್’ ಬಹಳಷ್ಟು ನಿರೀಕ್ಷೆ ಹುಟ್ಟಿಸಲು ನಾನಾ ಕಾರಣಗಳಿವೆ. ಇದು ರಜನಿಕಾಂತ್‍ ಅಭಿನಯದ 170ನೇ ಚಿತ್ರ. ಇದರಲ್ಲಿ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ವೆಟ್ಟೈಯನ್’ ಚಿತ್ರದಲ್ಲಿ ಬಹಳ ವರ್ಷಗಳ ನಂತರ ರಜನಿಕಾಂತ್ ಜೊತೆಗೆ ಅಮಿತಾಭ್ ಬಚ್ಚನ್ ನಟಿಸುತ್ತಿದ್ದಾರೆ. ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್, ರಿತಿಕಾ ಸಿಂಗ್, ದುಶರಾ ವಿಜಯನ್, ರಕ್ಷನ್, ಜಿ ಎಂ ಕುಮಾರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನು, ‘ಕಂಗುವಾ’ ಒಂದು ಫ್ಯಾಂಟಸಿ ಚಿತ್ರವಾಗಿದ್ದು, ಸೂರ್ಯ ಎದುರು ನೆಗೆಟಿವ್‍ ಪಾತ್ರದಲ್ಲಿ ಬಾಲಿವುಡ್‍ ನಟ ಬಾಬ್ಬಿ ಡಿಯೋಲ್‍ ನಟಿಸುತ್ತಿದ್ದಾರೆ. ದಿಶಾ ಪಠಾಣಿ ಈ ಚಿತ್ರದ ನಾಯಕಿ. ಈ ಚಿತ್ರವು 38 ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಭೂಮಿಕಾ

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

3 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

3 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

3 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

3 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

3 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

3 hours ago