ಮನರಂಜನೆ

‘ಮಾರ್ಟಿನ್‍’ಗೆ ‘ವೆಟ್ಟೈಯನ್’ ಮತ್ತು ‘ಕಂಗುವಾ’ ಸವಾಲು …

‘ಮಾರ್ಟಿನ್‍’ ಚಿತ್ರತಂಡ ಎದುರಿಸುತ್ತಿರುವ ಸಮಸ್ಯೆ ಒಂದೆರಡಲ್ಲ. ಮೊದಲಿಗೆ ಚಿತ್ರದ ಬಜೆಟ್‍ ವಿಪರೀತ ಹೆಚ್ಚಾಗಿ, ಚಿತ್ರೀಕರಣ ತಡವಾಗಿ, ಎಲ್ಲವೂ ನಿಧಾನವಾಯಿತು. ನಂತರ ನಿರ್ಮಾಪಕರು ಮತ್ತು ನಿರ್ದೇಶಕರ ನಡುವಿನ ಕಿತ್ತಾಟ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೆಗೂ ಹೋಯಿತು. ಆ ನಂತರ ನಿರ್ದೇಶಕರು ಎಲ್ಲರಿಂದ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದು, ಪ್ರಕರಣ ಇನ್ನಷ್ಟು ಕಗ್ಗಂಟಾಯಿತು. ಈಗ ಎಲ್ಲವೂ ಮುಗಿದು, ಚಿತ್ರ ಬಿಡುಗಡೆಗ ಇನ್ನೇನು ಒಂದೂವರೆ ತಿಂಗಳಿದೆ ಎನ್ನುವಾಗಲೇ ಇನ್ನೊಂದು ಸಮಸ್ಯೆ ಶುರುವಾಗಿದೆ.

 

‘ಮಾರ್ಟಿನ್‍’ ಚಿತ್ರವು ಅಕ್ಟೋಬರ್‍ 11ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿರುವುದು ಗೊತ್ತೇ ಇದೆ. ಈಗ ಅ.10ರಂದು ರಜನಿಕಾಂತ್‍ ಅಭಿನಯದ ತಮಿಳಿನ ‘ವೆಟ್ಟೈಯನ್‍’ ಮತ್ತು ಸೂರ್ಯ ಅಭಿನಯದ ‘ಕಂಗುವಾ’ ಚಿತ್ರಗಳು ಬಿಡುಗಡೆಯಾಗುತ್ತಿವೆ. ‘ಕಂಗುವಾ’ ಚಿತ್ರದ ಬಿಡುಗಡೆ ದಿನಾಂಕ ಈ ಹಿಂದೆಯೇ ಘೋಷಣೆಯಾಗಿತ್ತು. ಸೋಮವಾರ, ‘ವೆಟ್ಟೈಯನ್‍’ ಚಿತ್ರದ ಬಿಡುಗಡೆ ದಿನಾಂಕ ಸಹ ಘೋಷಣೆಯಾಗಿದ್ದು, ಅದು ಸಹ ಅ.10ರಂದು ಬಿಡುಗಡೆಯಾಗಲಿದೆ.

ಈ ಮೂರೂ ಚಿತ್ರಗಳ ಪೈಕಿ, ‘ಮಾರ್ಟಿನ್‍’ ಮತ್ತು ‘ಕಂಗುವಾ’ ಚಿತ್ರಗಳು ಪ್ಯಾನ್ ಇಂಡಿಯಾ ಚಿತ್ರಗಳಾಗಿದ್ದು, ‘ವೆಟ್ಟೈಯನ್‍’ ಮಾತ್ರ ತಮಿಳಿನಲ್ಲಿ ಬಿಡುಗಡೆಯಾಗುತ್ತಿದೆ. ರಜನಿಕಾಂತ್‍ ಮತ್ತು ಸೂರ್ಯಗೆ ಕರ್ನಾಟಕದಲ್ಲೂ ಅಭಿಮಾನಿಗಳು ಹೆಚ್ಚಿದ್ದು, ‘ವೆಟ್ಟೈಯನ್‍’ ಮತ್ತು ‘ಕಂಗುವಾ’ ಚಿತ್ರಗಳು ಇಲ್ಲೂ ದೊಡ್ಡ ಓಪನಿಂಗ್‍ ಪಡೆಯಬಹುದು ಎಂಬ ನಿರೀಕ್ಷೆ ಇದೆ. ಆ ಎರಡು ಚಿತ್ರಗಳಿಂದ ಆಂಧ್ರ, ತೆಲಂಗಾಣ ಮತ್ತು ತಮಿಳುನಾಡುಗಳಲ್ಲಿ ‘ಮಾರ್ಟಿನ್‍’ಗೆ ಸಮಸ್ಯೆ ಆಗಲಿದೆ. ಪ್ರಮುಖವಾಗಿ ಚಿತ್ರಮಂದಿರಗಳ ಸಂಖ್ಯೆ ಕಡಿಮೆ ಆಗುವ ಸಾಧ್ಯತೆ ಇದೆ.

‘ವೆಟ್ಟೈಯನ್’ ಬಹಳಷ್ಟು ನಿರೀಕ್ಷೆ ಹುಟ್ಟಿಸಲು ನಾನಾ ಕಾರಣಗಳಿವೆ. ಇದು ರಜನಿಕಾಂತ್‍ ಅಭಿನಯದ 170ನೇ ಚಿತ್ರ. ಇದರಲ್ಲಿ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ವೆಟ್ಟೈಯನ್’ ಚಿತ್ರದಲ್ಲಿ ಬಹಳ ವರ್ಷಗಳ ನಂತರ ರಜನಿಕಾಂತ್ ಜೊತೆಗೆ ಅಮಿತಾಭ್ ಬಚ್ಚನ್ ನಟಿಸುತ್ತಿದ್ದಾರೆ. ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್, ರಿತಿಕಾ ಸಿಂಗ್, ದುಶರಾ ವಿಜಯನ್, ರಕ್ಷನ್, ಜಿ ಎಂ ಕುಮಾರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನು, ‘ಕಂಗುವಾ’ ಒಂದು ಫ್ಯಾಂಟಸಿ ಚಿತ್ರವಾಗಿದ್ದು, ಸೂರ್ಯ ಎದುರು ನೆಗೆಟಿವ್‍ ಪಾತ್ರದಲ್ಲಿ ಬಾಲಿವುಡ್‍ ನಟ ಬಾಬ್ಬಿ ಡಿಯೋಲ್‍ ನಟಿಸುತ್ತಿದ್ದಾರೆ. ದಿಶಾ ಪಠಾಣಿ ಈ ಚಿತ್ರದ ನಾಯಕಿ. ಈ ಚಿತ್ರವು 38 ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಭೂಮಿಕಾ

Recent Posts

ಬಿಇಒಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಓರ್ವ ಸಾವು, ಹಲವರು ಗಂಭೀರ

ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…

6 mins ago

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

2 hours ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

3 hours ago

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

6 hours ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

6 hours ago