Categories: ಮನರಂಜನೆ

‘ಮಹಾವತಾರ’ವೆತ್ತಿದ ವಿಕ್ಕಿ ಕೌಶಲ್‍; ಪರಶುರಾಮನಾಗಿ ನಟನೆ

ಬಾಲಿವುಡ್‍ ನಟ ವಿಕ್ಕಿ ಕೌಶಲ್‍ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪಾತ್ರಗಳನ್ನು ನಿರ್ವಹಿಸುತ್ತಾ ಬಂದಿದ್ದಾರೆ. ‘ಛಾವಾ’ ಚಿತ್ರದಲ್ಲಿ ಛತ್ರಪತಿ ಸಾಂಭಿಜಿ ಆಗಿ, ‘ಸ್‍ಯಾಮ್‍ ಬಹದ್ದೂರ್‍’ ಚಿತ್ರದಲ್ಲಿ ಸ್ಯಾಮ್‍ ಮಾಣಿಕ್‍ಷಾ ಆಗಿ, ಸರ್ದಾರ್‍ ‘ಉಧಮ್‍’ ಚಿತ್ರದಲ್ಲಿ ಉಧಮ್‍ ಸಿಂಗ್‍ ಆಗಿ ಹಲವು ಅವತಾರಗಳನ್ನು ಎತ್ತುತ್ತಾ ಬಂದಿದ್ದಾರೆ.

ಇದೀಗ ವಿಕ್ಕಿ, ಇನ್ನೊಂದು ‘ಮಹವತಾರ’ವನ್ನು ಎತ್ತುತ್ತಿದ್ದಾರೆ. ಈ ಬಾರಿ ಅವರು ‘ಮಹಾವತಾರ್‍’ ಎನ್ನುವ ಚಿತ್ರದಲ್ಲಿ ಪರಶುರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಮ್ಯಾಡಾಕ್‍ ಫಿಲಂಸ್‍ ಸಂಸ್ಥೆಯಡಿ ದಿನೇಶ್‍ ವಿಜನ್‍ ನಿರ್ಮಾಣ ಮಾಡುತ್ತಿರುವ ಈ ಚಿತ್ರವು ಅಧಿಕೃತವಾಗಿ ಘೋಷಣೆಯಾಗಿದೆ.

‘ಮಹಾವತಾರ್‍’ ಚಿತ್ರದ ಕುರಿತು ಮಾತನಾಡಿರುವ ವಿಕ್ಕಿ ಕೌಶಲ್‍, ‘ದಿನೇಶ್‍ ವಿಜನ್‍ ಕೆಲವು ದಿನಗಳ ಹಿಂದೆ ‘ಮಹಾವತಾರ್‍’ ಚಿತ್ರದ ಕಥೆಯೊಂದಿಗೆ ಬಂದರು. ಕಥೆ ಕೇಳಿ ಇಲ್ಲ ಎನ್ನುವುದಕ್ಕೆ ಸಾಧ್ಯವಾಗಲೇ ಇಲ್ಲ. ಎರಡನೇ ಯೋಚನೆ ಮಾಡದೆ, ಈ ಚಿತ್ರದ ಭಾಗವಾಗುವುದಕ್ಕೆ ಮುಂದಾದೆ. ಈ ಚಿತ್ರದ ಕೆಲಸಗಳು ಮುಂದಿನ ವರ್ಷದ ಜನವರಿಯಲ್ಲಿ ಪ್ರಾರಂಭವಾಗಲಿದೆ. ಸಂಜಯ್‍ ಲೀಲಾ ಬನ್ಸಾಲಿ ಅವರ ‘ಲವ್‍ ಆ್ಯಂಡ್‍ ವಾರ್‍’ ಚಿತ್ರದಲ್ಲಿ ನಟಿಸುತ್ತಿದ್ದು, ಆ ಚಿತ್ರ ಮುಗಿದ ನಂತರ ಮುಂದಿನ ನವೆಂಬರ್‍ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. 2026ರ ಡಿಸೆಂಬರ್‍ ವೇಳೆಗೆ ಚಿತ್‍ರ ಬಿಡುಗಡೆಯಾಗಲಿದೆ’ ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

‘ಮಹಾವತಾರ್‍’ ಚಿತ್ರವನನು ಅಮರ್‍ ಕೌಶಿಕ್‍ ನಿರ್ದೇಶನ ಮಾಡುತ್ತಿದ್ದಾರೆ.

ಭೂಮಿಕಾ

Recent Posts

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

22 mins ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

25 mins ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

30 mins ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

34 mins ago

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…

44 mins ago

ಮೈವಿವಿಯಲ್ಲಿ ಫ್ರೆಂಚ್‌ ಭಾಷೆ ವಿಭಾಗ ಪುನರಾಂಭಿಸಲು ಚರ್ಚೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…

1 hour ago