Categories: ಮನರಂಜನೆ

‘ಮಹಾವತಾರ’ವೆತ್ತಿದ ವಿಕ್ಕಿ ಕೌಶಲ್‍; ಪರಶುರಾಮನಾಗಿ ನಟನೆ

ಬಾಲಿವುಡ್‍ ನಟ ವಿಕ್ಕಿ ಕೌಶಲ್‍ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪಾತ್ರಗಳನ್ನು ನಿರ್ವಹಿಸುತ್ತಾ ಬಂದಿದ್ದಾರೆ. ‘ಛಾವಾ’ ಚಿತ್ರದಲ್ಲಿ ಛತ್ರಪತಿ ಸಾಂಭಿಜಿ ಆಗಿ, ‘ಸ್‍ಯಾಮ್‍ ಬಹದ್ದೂರ್‍’ ಚಿತ್ರದಲ್ಲಿ ಸ್ಯಾಮ್‍ ಮಾಣಿಕ್‍ಷಾ ಆಗಿ, ಸರ್ದಾರ್‍ ‘ಉಧಮ್‍’ ಚಿತ್ರದಲ್ಲಿ ಉಧಮ್‍ ಸಿಂಗ್‍ ಆಗಿ ಹಲವು ಅವತಾರಗಳನ್ನು ಎತ್ತುತ್ತಾ ಬಂದಿದ್ದಾರೆ.

ಇದೀಗ ವಿಕ್ಕಿ, ಇನ್ನೊಂದು ‘ಮಹವತಾರ’ವನ್ನು ಎತ್ತುತ್ತಿದ್ದಾರೆ. ಈ ಬಾರಿ ಅವರು ‘ಮಹಾವತಾರ್‍’ ಎನ್ನುವ ಚಿತ್ರದಲ್ಲಿ ಪರಶುರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಮ್ಯಾಡಾಕ್‍ ಫಿಲಂಸ್‍ ಸಂಸ್ಥೆಯಡಿ ದಿನೇಶ್‍ ವಿಜನ್‍ ನಿರ್ಮಾಣ ಮಾಡುತ್ತಿರುವ ಈ ಚಿತ್ರವು ಅಧಿಕೃತವಾಗಿ ಘೋಷಣೆಯಾಗಿದೆ.

‘ಮಹಾವತಾರ್‍’ ಚಿತ್ರದ ಕುರಿತು ಮಾತನಾಡಿರುವ ವಿಕ್ಕಿ ಕೌಶಲ್‍, ‘ದಿನೇಶ್‍ ವಿಜನ್‍ ಕೆಲವು ದಿನಗಳ ಹಿಂದೆ ‘ಮಹಾವತಾರ್‍’ ಚಿತ್ರದ ಕಥೆಯೊಂದಿಗೆ ಬಂದರು. ಕಥೆ ಕೇಳಿ ಇಲ್ಲ ಎನ್ನುವುದಕ್ಕೆ ಸಾಧ್ಯವಾಗಲೇ ಇಲ್ಲ. ಎರಡನೇ ಯೋಚನೆ ಮಾಡದೆ, ಈ ಚಿತ್ರದ ಭಾಗವಾಗುವುದಕ್ಕೆ ಮುಂದಾದೆ. ಈ ಚಿತ್ರದ ಕೆಲಸಗಳು ಮುಂದಿನ ವರ್ಷದ ಜನವರಿಯಲ್ಲಿ ಪ್ರಾರಂಭವಾಗಲಿದೆ. ಸಂಜಯ್‍ ಲೀಲಾ ಬನ್ಸಾಲಿ ಅವರ ‘ಲವ್‍ ಆ್ಯಂಡ್‍ ವಾರ್‍’ ಚಿತ್ರದಲ್ಲಿ ನಟಿಸುತ್ತಿದ್ದು, ಆ ಚಿತ್ರ ಮುಗಿದ ನಂತರ ಮುಂದಿನ ನವೆಂಬರ್‍ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. 2026ರ ಡಿಸೆಂಬರ್‍ ವೇಳೆಗೆ ಚಿತ್‍ರ ಬಿಡುಗಡೆಯಾಗಲಿದೆ’ ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

‘ಮಹಾವತಾರ್‍’ ಚಿತ್ರವನನು ಅಮರ್‍ ಕೌಶಿಕ್‍ ನಿರ್ದೇಶನ ಮಾಡುತ್ತಿದ್ದಾರೆ.

ಭೂಮಿಕಾ

Recent Posts

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

55 mins ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಪತ್ನಿ, ಪುತ್ರನಿಗೆ ಎಸ್‌ಐಟಿ ಬುಲಾವ್‌

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡವು ಪತ್ನಿ ಹಾಗೂ ಮಗನನ್ನು…

1 hour ago

ಬೈಕ್‌ ಟ್ಯಾಕ್ಸಿಗೆ ಒಪ್ಪಿಗೆ: ಸುಪ್ರೀಂಕೋರ್ಟ್‌ ಮೊರೆ ಹೋಗಲಿದೆ ಸರ್ಕಾರ?

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಅಪ್ಲಿಕೇಶನ್‌ ಆಧಾರಿತ ಟ್ಯಾಕ್ಸಿ ನೀಡುವ ಕಂಪನಿಗಳ ನಡುವೆ ಬೈಕ್‌ ಟ್ಯಾಕ್ಸಿ ವಿಚಾರಕ್ಕೆ ಜಟಾಪಟಿ ನಡೆದಿತ್ತು.…

2 hours ago

ಕೇಂದ್ರ ಸರ್ಕಾರ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಮಂಡಿಸಿದೆ: ರೈತ ಹಳ್ಳಿಕೆರೆಹುಂಡಿ ಭಾಗ್ಯರಾಜ್

ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್‌ ಆಗಿದೆ…

2 hours ago

ಹಿರೀಕಾಟಿಯಲ್ಲಿ ಅಂಬೇಡ್ಕರ್‌ ಪ್ರತಿಮೆ ನಿರ್ಮಾಣ ಸಂಬಂಧ ಮುಖಂಡರೊಂದಿಗೆ ಚರ್ಚೆ

ಮೈಸೂರು: ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ…

3 hours ago

ರಾಮನಗರದಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೇ ಒಂದೇ ಕುಟುಂಬದ ಮೂವರು ಸಾವು

ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್‌…

3 hours ago