Categories: ಮನರಂಜನೆ

‘ಮಹಾವತಾರ’ವೆತ್ತಿದ ವಿಕ್ಕಿ ಕೌಶಲ್‍; ಪರಶುರಾಮನಾಗಿ ನಟನೆ

ಬಾಲಿವುಡ್‍ ನಟ ವಿಕ್ಕಿ ಕೌಶಲ್‍ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪಾತ್ರಗಳನ್ನು ನಿರ್ವಹಿಸುತ್ತಾ ಬಂದಿದ್ದಾರೆ. ‘ಛಾವಾ’ ಚಿತ್ರದಲ್ಲಿ ಛತ್ರಪತಿ ಸಾಂಭಿಜಿ ಆಗಿ, ‘ಸ್‍ಯಾಮ್‍ ಬಹದ್ದೂರ್‍’ ಚಿತ್ರದಲ್ಲಿ ಸ್ಯಾಮ್‍ ಮಾಣಿಕ್‍ಷಾ ಆಗಿ, ಸರ್ದಾರ್‍ ‘ಉಧಮ್‍’ ಚಿತ್ರದಲ್ಲಿ ಉಧಮ್‍ ಸಿಂಗ್‍ ಆಗಿ ಹಲವು ಅವತಾರಗಳನ್ನು ಎತ್ತುತ್ತಾ ಬಂದಿದ್ದಾರೆ.

ಇದೀಗ ವಿಕ್ಕಿ, ಇನ್ನೊಂದು ‘ಮಹವತಾರ’ವನ್ನು ಎತ್ತುತ್ತಿದ್ದಾರೆ. ಈ ಬಾರಿ ಅವರು ‘ಮಹಾವತಾರ್‍’ ಎನ್ನುವ ಚಿತ್ರದಲ್ಲಿ ಪರಶುರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಮ್ಯಾಡಾಕ್‍ ಫಿಲಂಸ್‍ ಸಂಸ್ಥೆಯಡಿ ದಿನೇಶ್‍ ವಿಜನ್‍ ನಿರ್ಮಾಣ ಮಾಡುತ್ತಿರುವ ಈ ಚಿತ್ರವು ಅಧಿಕೃತವಾಗಿ ಘೋಷಣೆಯಾಗಿದೆ.

‘ಮಹಾವತಾರ್‍’ ಚಿತ್ರದ ಕುರಿತು ಮಾತನಾಡಿರುವ ವಿಕ್ಕಿ ಕೌಶಲ್‍, ‘ದಿನೇಶ್‍ ವಿಜನ್‍ ಕೆಲವು ದಿನಗಳ ಹಿಂದೆ ‘ಮಹಾವತಾರ್‍’ ಚಿತ್ರದ ಕಥೆಯೊಂದಿಗೆ ಬಂದರು. ಕಥೆ ಕೇಳಿ ಇಲ್ಲ ಎನ್ನುವುದಕ್ಕೆ ಸಾಧ್ಯವಾಗಲೇ ಇಲ್ಲ. ಎರಡನೇ ಯೋಚನೆ ಮಾಡದೆ, ಈ ಚಿತ್ರದ ಭಾಗವಾಗುವುದಕ್ಕೆ ಮುಂದಾದೆ. ಈ ಚಿತ್ರದ ಕೆಲಸಗಳು ಮುಂದಿನ ವರ್ಷದ ಜನವರಿಯಲ್ಲಿ ಪ್ರಾರಂಭವಾಗಲಿದೆ. ಸಂಜಯ್‍ ಲೀಲಾ ಬನ್ಸಾಲಿ ಅವರ ‘ಲವ್‍ ಆ್ಯಂಡ್‍ ವಾರ್‍’ ಚಿತ್ರದಲ್ಲಿ ನಟಿಸುತ್ತಿದ್ದು, ಆ ಚಿತ್ರ ಮುಗಿದ ನಂತರ ಮುಂದಿನ ನವೆಂಬರ್‍ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. 2026ರ ಡಿಸೆಂಬರ್‍ ವೇಳೆಗೆ ಚಿತ್‍ರ ಬಿಡುಗಡೆಯಾಗಲಿದೆ’ ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

‘ಮಹಾವತಾರ್‍’ ಚಿತ್ರವನನು ಅಮರ್‍ ಕೌಶಿಕ್‍ ನಿರ್ದೇಶನ ಮಾಡುತ್ತಿದ್ದಾರೆ.

ಭೂಮಿಕಾ

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

1 min ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

10 mins ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

13 mins ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

15 mins ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

20 mins ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

1 hour ago