ಮನರಂಜನೆ

ದುಬೈನಲ್ಲಿ ಮೊದಲು ಪ್ರೀಮಿಯರ್‍ ಆಗಲಿದೆ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಕನ್ನಡ ಚಿತ್ರಗಳು ಬಿಡುಗಡೆಗೂ ಒಂದು ದಿನ ಮೊದಲೇ ಪ್ರೀಮಿಯರ್ ಕಾಣುವುದು, ಆ ವಿಶೇಷ ಪ್ರದರ್ಶನದಲ್ಲಿ ಚಿತ್ರರಂಗದ ಗಣ್ಯರು ನೋಡಿ ಚಿತ್ರದ ಬಗ್ಗೆ ಮಾತನಾಡುವುದು, ಇನ್ನೊಂದು ಕಡೆ ಅಭಿಮಾನಿಗಳಿಗೆಂದೇ ವಿಶೇಷ ಪ್ರೀಮಿಯರ್‍ ಶೋಗಳನ್ನು ಆಯೋಜಿಸುವುದು … ಇದ್ಯಾವುದೂ ಹೊಸದಲ್ಲ, ವಿಶೇಷವೂ ಅಲ್ಲ.

ಆದರೆ, ರಾಜ್ಯಕ್ಕಿಂತ ಮೊದಲ ಬೇರೆ ದೇಶಗಳಲ್ಲಿ ಕನ್ನಡ ಚಿತ್ರಗಳು ಪ್ರದರ್ಶನ ಕಾಣುವುದು ಕಡಿಮೆ. ಇದುವರೆಗೂ ಬೆರಳಣಿಕೆಯಷ್ಟು ಚಿತ್ರಗಳು ರಾಜ್ಯದಲ್ಲಿ ಬಿಡುಗಡೆ ಆಗುವುದಕ್ಕಿಂತ ಮೊದಲು ಅಮೇರಿಕಾ ಮತ್ತು ಗಲ್ಫ್ ರಾಷ್ಟ್ರಗಳಲ್ಲಿ ಬಿಡುಗಡೆಯಾಗಿದೆ. ಈಗ ಈ ಸಾಲಿಗೆ ಅರುಣ್ ಅಮುಕ್ತ ನಿರ್ದೇಶನದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಹ ಸೇರಿದೆ.

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವು ಜುಲೈ 19ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಹೌದು, ‘ವಿದ್ಯಾರ್ಥಿ ವಿದ್ಯಾರ್ಥಿನಿಯರ’ ಹವಾ ಸಾಗರದಾಚೆಗೂ ಹಬ್ಬಿದ್ದು, ಜುಲೈ 14ರಂದು ದುಬೈನಲ್ಲಿ ಈ ಚಿತ್ರದ ಪ್ರೀಮಿಯರ್ ಶೋ ನಡೆಯಲಿದೆ. ಒಎಂಜಿ ಕಂಪೆನಿಯು ಗಲ್ಫ್ ರಾಷ್ಟ್ರಗಳಿಗೆ ಚಿತ್ರದ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದ್ದು, ಚಿತ್ರವನ್ನು ಮೊದಲು ದುಬೈನಲ್ಲಿ ಬಿಡುಗಡೆ ಮಾಡುವುದಕ್ಕೆ ಮುಂದಾಗಿದೆ.

ಚಿತ್ರದ ಹೆಸರೇ ಹೇಳುವಂತೆ ಇದು ವಿದ್ಯಾರ್ಥಿ, ವಿದ್ಯಾರ್ಥಿನಿಯರ ಕುರುತಾದ ಚಿತ್ರ. ಕಾಲೇಜ್ ಹುಡುಗ-ಹುಡುಗಿಯರ ಹದಿಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಈ ಚಿತ್ರದಲ್ಲಿ ತೆರೆದಿಡಲಾಗಿದೆಯಂತೆ. ಹಾದಿ ತಪ್ಪಿದ ಮಕ್ಕಳನ್ನು ಹಾದಿಗೆ ತರುವ ಯತ್ನವೂ ಈ ಚಿತ್ರದಲ್ಲಿ ಮಾಡಲಾಗಿದೆಯಂತೆ. ಹಾಗಾಗಿ, ಇದು ವಿದ್ಯಾರ್ಥಿ ವಿದ್ಯಾರ್ಥಿನಿಯರು ನೋಡುವುದಕ್ಕಿಂತ, ಪೋಷಕರು ತಪ್ಪದೇ ನೋಡಲೇಬೇಕಾದ ಚಿತ್ರ ಎಂದು ಹೇಳುತ್ತಾರೆ ನಿರ್ದೇಶಕ ಅರುಣ್‍ ಅಮುಕ್ತ.

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’, Rapper ಮತ್ತು ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಮೂರನೆಯ ಚಿತ್ರವಾದರೂ, ಬಿಡುಗಡೆ ಆಗುತ್ತಿರುವ ಮೊದಲ ಚಿತ್ರ. ಚಿತ್ರದಲ್ಲಿ ಚಂದನ್ ಶೆಟ್ಟಿ ಜೊತೆಗೆ ಅಮರ್, ಭಾವನಾ, ಮನಸ್ವಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ‘ಕಾಕ್ರೋಚ್’ ಸುಧಿ ಮುಂತಾದವರು ನಟಿಸಿದ್ದಾರೆ.

ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ. ಶಿವಲಿಂಗೇಗೌಡ ನಿರ್ಮಿಸುತ್ತಿರುವ ಈ ಚಿತ್ರಕ್ಕೆ, ಅರುಣ್‍ ಅಮುಕ್ತ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ವಿಜೇತ್‍ ಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ…

26 mins ago

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: ಏನದು ಗೊತ್ತಾ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…

2 hours ago

ಏಪ್ರಿಲ್.‌1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ಏಪ್ರಿಲ್.‌1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…

3 hours ago

ರಂಗೇರಿದ ಉಪಚುನಾವಣೆ ಕಣ: ಸಮರ್ಥ್‌ ಮಲ್ಲಿಕಾರ್ಜುನ್‌, ಉಮೇಶ್‌ ಮೇಟಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ಏಪ್ರಿಲ್‌.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…

3 hours ago

ಅಮೇರಿಕಾದ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಆಯ್ಕೆ

ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ…

3 hours ago

ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ: ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಹಾರ್ಮುಜ್‌ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್‌ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗಡುವು…

4 hours ago