ಈ ಹಿಂದೆ ‘ಸುಂಟರಗಾಳಿ’ ಚಿತ್ರದ ಕ್ಲೈಮ್ಯಾಕ್ಸ್ ಭಾಗದಲ್ಲಿ ದರ್ಶನ್, ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ವಿಜಯ್ ರಾಘವೇಂದ್ರ ಸಹ ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ
ಕರ್ನಾಟಕದ ಜನಪ್ರಿಯ ಜಾನಪದ ಕಲೆಗಳಲ್ಲಿ ವೀರಗಾಸೆ ಸಹ ಒಂದು. ವೀರಗಾಸೆ ಕಲೆ ಹಾಗೂ ಅದರ ಅಧಿದೇವರಾದ ವೀರಭದ್ರ ದೇವರ ಇತಿಹಾಸವನ್ನು ಹೇಳುವ ‘ರುದ್ರಾಭಿಷೇಕಂ’ ಚಿತ್ರದಲ್ಲಿ ಇದೀಗ ವಿಜಯ್ ರಾಘವೇಂದ್ರ ವೀರಗಾಸೆ ಗೆಟಪ್ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ.
ಇತ್ತೀಚೆಗೆ ಚಿಕ್ಕಬಳ್ಳಾಪುರದ ಶ್ರೀರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ ಹಾಗೂ ದೇವನಹಳ್ಳಿಯ ಚಿಕ್ಕತದಮಂಗಲ ಗ್ರಾಮದಲ್ಲಿ ಸೆಟ್ ಹಾಕಿ ಕ್ಲೈಮ್ಯಾಕ್ಸ್ ಹಾಡಿನ ಚಿತ್ರೀಕರಣ ನಡೆಸಲಾಗಿದೆ. ಈ ಹಾಡಿನಲ್ಲಿ ಖುದ್ದು ವಿಜಯ್ ರಾಘವೇಂದ್ರ ಜೊತೆಗೆ ಬೇರೆ ಊರುಗಳಿಂದ ಆಗಮಿಸಿದ ವೀರಗಾಸೆ ಕಲಾವಿದರು ಸಹ ಭಾಗವಹಿಸಿದ್ದರು.
ವೀರಗಾಸೆ ಕುಟುಂಬವೊಂದನ್ನು ಹಿನ್ನೆಲೆಯಾಗಿಟ್ಟುಕೊಂಡು ಆ ಕಲೆಯ ಮೂಲ, ಆ ಕಲಾವಿದರ ಇತಿಹಾಸವನ್ನು ಕಮರ್ಷಿಯಲ್ ಕಥೆಯ ಮೂಲಕ ಹೇಳುವ ಪ್ರಯತ್ನವೇ ‘ರುದ್ರಾಭಿಷೇಕಂ’. ವಸಂತ್ ಕುಮಾರ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ.
ವಿಜಯ್ ರಾಘವೇಂದ್ರ ಈ ಚಿತ್ರದಲ್ಲಿ ಮೊದಲ ಬಾರಿಗೆ ಅಪ್ಪ- ಮಗನಾಗಿ ಎರಡು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಿಯಾಂಕಾ ತಿಮ್ಮೇಶ್, ಬಲ ರಾಜವಾಡಿ, ವಸಂತ್ ಕುಮಾರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ವಿ. ಮನೋಹರ್ ಸಂಗೀತ ಸಂಯೋಜನೆ, ಮುತ್ತುರಾಜ್ ಛಾಯಾಗ್ರಹಣ ಇರುವ ಈ ಚಿತ್ರವು ಫ್ಯಾನ್ ಇಂಡಿಯಾ ಕ್ರಿಯೇಶನ್ಸ್ ಬ್ಯಾನರ್ ಅಡಿ ನಿರ್ಮಾಣವಾಗುತ್ತಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…