ಈ ಹಿಂದೆ ‘ಸುಂಟರಗಾಳಿ’ ಚಿತ್ರದ ಕ್ಲೈಮ್ಯಾಕ್ಸ್ ಭಾಗದಲ್ಲಿ ದರ್ಶನ್, ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ವಿಜಯ್ ರಾಘವೇಂದ್ರ ಸಹ ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ
ಕರ್ನಾಟಕದ ಜನಪ್ರಿಯ ಜಾನಪದ ಕಲೆಗಳಲ್ಲಿ ವೀರಗಾಸೆ ಸಹ ಒಂದು. ವೀರಗಾಸೆ ಕಲೆ ಹಾಗೂ ಅದರ ಅಧಿದೇವರಾದ ವೀರಭದ್ರ ದೇವರ ಇತಿಹಾಸವನ್ನು ಹೇಳುವ ‘ರುದ್ರಾಭಿಷೇಕಂ’ ಚಿತ್ರದಲ್ಲಿ ಇದೀಗ ವಿಜಯ್ ರಾಘವೇಂದ್ರ ವೀರಗಾಸೆ ಗೆಟಪ್ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ.
ಇತ್ತೀಚೆಗೆ ಚಿಕ್ಕಬಳ್ಳಾಪುರದ ಶ್ರೀರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ ಹಾಗೂ ದೇವನಹಳ್ಳಿಯ ಚಿಕ್ಕತದಮಂಗಲ ಗ್ರಾಮದಲ್ಲಿ ಸೆಟ್ ಹಾಕಿ ಕ್ಲೈಮ್ಯಾಕ್ಸ್ ಹಾಡಿನ ಚಿತ್ರೀಕರಣ ನಡೆಸಲಾಗಿದೆ. ಈ ಹಾಡಿನಲ್ಲಿ ಖುದ್ದು ವಿಜಯ್ ರಾಘವೇಂದ್ರ ಜೊತೆಗೆ ಬೇರೆ ಊರುಗಳಿಂದ ಆಗಮಿಸಿದ ವೀರಗಾಸೆ ಕಲಾವಿದರು ಸಹ ಭಾಗವಹಿಸಿದ್ದರು.
ವೀರಗಾಸೆ ಕುಟುಂಬವೊಂದನ್ನು ಹಿನ್ನೆಲೆಯಾಗಿಟ್ಟುಕೊಂಡು ಆ ಕಲೆಯ ಮೂಲ, ಆ ಕಲಾವಿದರ ಇತಿಹಾಸವನ್ನು ಕಮರ್ಷಿಯಲ್ ಕಥೆಯ ಮೂಲಕ ಹೇಳುವ ಪ್ರಯತ್ನವೇ ‘ರುದ್ರಾಭಿಷೇಕಂ’. ವಸಂತ್ ಕುಮಾರ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ.
ವಿಜಯ್ ರಾಘವೇಂದ್ರ ಈ ಚಿತ್ರದಲ್ಲಿ ಮೊದಲ ಬಾರಿಗೆ ಅಪ್ಪ- ಮಗನಾಗಿ ಎರಡು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಿಯಾಂಕಾ ತಿಮ್ಮೇಶ್, ಬಲ ರಾಜವಾಡಿ, ವಸಂತ್ ಕುಮಾರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ವಿ. ಮನೋಹರ್ ಸಂಗೀತ ಸಂಯೋಜನೆ, ಮುತ್ತುರಾಜ್ ಛಾಯಾಗ್ರಹಣ ಇರುವ ಈ ಚಿತ್ರವು ಫ್ಯಾನ್ ಇಂಡಿಯಾ ಕ್ರಿಯೇಶನ್ಸ್ ಬ್ಯಾನರ್ ಅಡಿ ನಿರ್ಮಾಣವಾಗುತ್ತಿದೆ.
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…