ಮನರಂಜನೆ

ವೀರಗಾಸೆ ವೇಷದಲ್ಲಿ ವಿಜಯ್‍ ರಾಘವೇಂದ್ರ; ‘ರುದ್ರಾಭಿಷೇಕಂ’ಗೆ ಹಾಡಿನ ಚಿತ್ರೀಕರಣ

ಈ ಹಿಂದೆ ‘ಸುಂಟರಗಾಳಿ’ ಚಿತ್ರದ ಕ್ಲೈಮ್ಯಾಕ್ಸ್ ಭಾಗದಲ್ಲಿ ದರ್ಶನ್‍, ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ವಿಜಯ್‍ ರಾಘವೇಂದ್ರ ಸಹ ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ

ಕರ್ನಾಟಕದ ಜನಪ್ರಿಯ ಜಾನಪದ ಕಲೆಗಳಲ್ಲಿ ವೀರಗಾಸೆ ಸಹ ಒಂದು. ವೀರಗಾಸೆ ಕಲೆ ಹಾಗೂ ಅದರ ಅಧಿದೇವರಾದ ವೀರಭದ್ರ ದೇವರ ಇತಿಹಾಸವನ್ನು ಹೇಳುವ ‘ರುದ್ರಾಭಿಷೇಕಂ’ ಚಿತ್ರದಲ್ಲಿ ಇದೀಗ ವಿಜಯ್‍ ರಾಘವೇಂದ್ರ ವೀರಗಾಸೆ ಗೆಟಪ್‍ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ಚಿಕ್ಕಬಳ್ಳಾಪುರದ ಶ್ರೀರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ ಹಾಗೂ ದೇವನಹಳ್ಳಿಯ ಚಿಕ್ಕತದಮಂಗಲ ಗ್ರಾಮದಲ್ಲಿ ಸೆಟ್ ಹಾಕಿ ಕ್ಲೈಮ್ಯಾಕ್ಸ್ ಹಾಡಿನ ಚಿತ್ರೀಕರಣ ನಡೆಸಲಾಗಿದೆ. ಈ ಹಾಡಿನಲ್ಲಿ ಖುದ್ದು ವಿಜಯ್‍ ರಾಘವೇಂದ್ರ ಜೊತೆಗೆ ಬೇರೆ ಊರುಗಳಿಂದ ಆಗಮಿಸಿದ ವೀರಗಾಸೆ ಕಲಾವಿದರು ಸಹ ಭಾಗವಹಿಸಿದ್ದರು.

ವೀರಗಾಸೆ ಕುಟುಂಬವೊಂದನ್ನು ಹಿನ್ನೆಲೆಯಾಗಿಟ್ಟುಕೊಂಡು ಆ ಕಲೆಯ ಮೂಲ, ಆ ಕಲಾವಿದರ ಇತಿಹಾಸವನ್ನು ಕಮರ್ಷಿಯಲ್ ಕಥೆಯ ಮೂಲಕ ಹೇಳುವ ಪ್ರಯತ್ನವೇ ‘ರುದ್ರಾಭಿಷೇಕಂ’. ವಸಂತ್‍ ಕುಮಾರ್‍ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ.

ವಿಜಯ್‍ ರಾಘವೇಂದ್ರ ಈ ಚಿತ್ರದಲ್ಲಿ ಮೊದಲ ಬಾರಿಗೆ ಅಪ್ಪ- ಮಗನಾಗಿ ಎರಡು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಿಯಾಂಕಾ ತಿಮ್ಮೇಶ್‍, ಬಲ ರಾಜವಾಡಿ, ವಸಂತ್‍ ಕುಮಾರ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ವಿ. ಮನೋಹರ್ ಸಂಗೀತ ಸಂಯೋಜನೆ, ಮುತ್ತುರಾಜ್ ಛಾಯಾಗ್ರಹಣ ಇರುವ ಈ ಚಿತ್ರವು ಫ್ಯಾನ್‍ ಇಂಡಿಯಾ ಕ್ರಿಯೇಶನ್ಸ್ ಬ್ಯಾನರ್‍ ಅಡಿ ನಿರ್ಮಾಣವಾಗುತ್ತಿದೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago