ಮನರಂಜನೆ

ಮತ್ತೊಂದು ಥ್ರಿಲ್ಲರ್‍ ಚಿತ್ರದಲ್ಲಿ ವಿಜಯ್‍ ರಾಘವೇಂದ್ರ; ‘FIR 6 to 6’ ಟ್ರೇಲರ್‍ ಬಿಡುಗಡೆ

ವಿಜಯ್‍ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವಿಶೇಷವೆಂದರೆ, ‘ಕೇಸ್ ಆಫ್‍ ಕೊಂಡಾನ’, ‘ಜಾಗ್‍ 101’ ಮತ್ತು ‘ಗ್ರೇ ಗೇಮ್ಸ್’ ಹೀಗೆ ಮೂರೂ ಚಿತ್ರಗಳು ಥ್ರಿಲ್ಲರ್‍ ಚಿತ್ರಗಳಾಗಿದ್ದವು. ಈಗ ಅವರು ಇನ್ನೊಂದು ಥ್ರಿಲ್ಲರ್ ಚಿತ್ರವನ್ನು ಸದ್ದಿಲ್ಲದೆ ಮುಗಿಸಿದ್ದು, ಆ ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದೆ.

ವಿಜಯ್‍ ರಾಘವೇಂದ್ರ ಹೊಸ ಚಿತ್ರಕ್ಕೆ ‘FIR 6 to 6’ ಎಂಬ ಹೆಸರನ್ನು ಇಡಲಾಗಿದ್ದು, ಈ ಹಿಂದೆ ‘ಪಟ್ಟಾಭಿಷೇಕ’ ಎಂಬ ಚಿತ್ರವನ್ನು ನಿರ್ಮಿಸಿದ್ದ ಭಾಗ್ಯ ರಮೇಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆ.ವಿ. ರಮಣರಾಜ್ ಈ ಚಿತ್ರದ ನಿರ್ದೇಶಕರು.

‘FIR 6 to 6’ ಚಿತ್ರದ ಕುರಿತು ಮಾತನಾಡುವ ವಿಜಯ್‍ ರಾಘವೇಂದ್ರ, ‘ಇದೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾ. ಇಡೀ ಚಿತ್ರವನ್ನು ರಾತ್ರಿ ಹೊತ್ತು ಚಿತ್ರೀಕರಣ ಮಾಡಿದ್ದೇವೆ. ಹಲವು ರಾತ್ರಿಗಲ ಕಾಲ ಈ ಚಿತ್ರಕ್ಕಾಗಿ ಕಷ್ಟಪಟ್ಟಿದ್ದೇವೆ. ಒಮ್ಮೊಮ್ಮೆ ಬೆಳಗಿನ‌ ಜಾವ ನಾಲ್ಕರವರೆಗೆ ಚಿತ್ರೀಕರಣ ಮಾಡಿದ್ದೇವೆ‌. ಈ ಚಿತ್ರದಲ್ಲಿ ಸಾಹಸ ದೃಶ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಥ್ರಿಲ್ಲರ್ ಮಂಜು ಅವರ ಜೊತೆಗೆ ಕೆಲಸ ಮಾಡುವುದು ತುಂಬಾ ಸುಲಭ. ಒಳ್ಳೆಯ ಅನುಭವ ಸಿಗುತ್ತದೆ’ ಎಂದರು.

ರಮಣರಾಜ್ ಈ ಹಿಂದೆ ತೆಲುಗಿನ ಜೆಡಿ ಚಕ್ರವರ್ತಿ ಅವರ ಜೊತೆ ಒಂದು ಚಿತ್ರ ಮಾಡಿದ್ದಾರೆ. ಆ ಚಿತ್ರವಿನ್ನೂ ಬಿಡುಗಡೆ ಆಗಿಲ್ಲ. ‘FIR 6 to 6’ ಅವರ ನಿರ್ದೇಶನದ ಎರಡನೇ ಚಿತ್ರ. ‘ಜೆಡಿ ಅವರ ಸಿನಿಮಾ ಮಾಡುವಾಗ ಹೊಳೆದಂಥ ಕಥೆ ಇದು. ಯುವಕನೊಬ್ಬ ಒಂದು ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡು ನಂತರ ಆ ಸಂದರ್ಭವನ್ನು ಹೇಗೆ ಎದುರಿಸುತ್ತಾನೆ ಅನ್ನೋದನ್ನು ಸಂಜೆ ಆರರಿಂದ ಬೆಳಗಿನ ಜಾವ ಆರರವರೆಗೆ ನಡೆಯುವ ಕಥೆಯ ಮೂಲಕ ಥ್ರಿಲ್ಲಿಂಗ್ ಆಗಿ ಹೇಳಲು ಪ್ರಯತ್ನಿಸಿದ್ದೇವೆ. ವಿಜಯ್‍ ರಾಘವೇಂದ್ರ ಅವರ ಜತೆ ಕೆಲಸ ಮಾಡಿದ್ದು ಒಳ್ಳೆಯ ಅನುಭವ. 35 ರಾತ್ರಿಗಳಂದು ಚಿತ್ರೀಕರಣ ಮಾಡಿದ್ದೇವೆ. ಚಿತ್ರ ಚೆನ್ನಾಗಿ ಬಂದಿದೆ’ ಎಂದು ಹೇಳಿದರು.

‘FIR 6 to 6’ ಚಿತ್ರದಲ್ಲಿ ವಿಜಯ್‍ ರಾಘವೇಂದ್ರ ಜೊತೆಗೆ ಸಿರಿ ರಾಜ್‍, ನಾಗೇಂದ್ರ ಅರಸ್‍, ಬಲ ರಾಜವಾಡಿ, ಯಶ್‍ ಶೆಟ್ಟಿ, ಯಶ, ಶ್ವೇತಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಓಂಜಿ ಅವರ ಛಾಯಾಗ್ರಹಣ, ನಾಗೇಂದ್ರ ಅರಸ್‍ ಸಂಕಲನ, ಸತೀಶ್ ಬಾಬು ಹಾಗೂ ಎಂ.ಎಸ್. ತ್ಯಾಗರಾಜ್ ಸಂಗೀತವಿದೆ.

ಭೂಮಿಕಾ

Recent Posts

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

2 hours ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

3 hours ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

3 hours ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

4 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

5 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

6 hours ago