ಮನರಂಜನೆ

ಮತ್ತೊಂದು ಥ್ರಿಲ್ಲರ್‍ ಚಿತ್ರದಲ್ಲಿ ವಿಜಯ್‍ ರಾಘವೇಂದ್ರ; ‘FIR 6 to 6’ ಟ್ರೇಲರ್‍ ಬಿಡುಗಡೆ

ವಿಜಯ್‍ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವಿಶೇಷವೆಂದರೆ, ‘ಕೇಸ್ ಆಫ್‍ ಕೊಂಡಾನ’, ‘ಜಾಗ್‍ 101’ ಮತ್ತು ‘ಗ್ರೇ ಗೇಮ್ಸ್’ ಹೀಗೆ ಮೂರೂ ಚಿತ್ರಗಳು ಥ್ರಿಲ್ಲರ್‍ ಚಿತ್ರಗಳಾಗಿದ್ದವು. ಈಗ ಅವರು ಇನ್ನೊಂದು ಥ್ರಿಲ್ಲರ್ ಚಿತ್ರವನ್ನು ಸದ್ದಿಲ್ಲದೆ ಮುಗಿಸಿದ್ದು, ಆ ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದೆ.

ವಿಜಯ್‍ ರಾಘವೇಂದ್ರ ಹೊಸ ಚಿತ್ರಕ್ಕೆ ‘FIR 6 to 6’ ಎಂಬ ಹೆಸರನ್ನು ಇಡಲಾಗಿದ್ದು, ಈ ಹಿಂದೆ ‘ಪಟ್ಟಾಭಿಷೇಕ’ ಎಂಬ ಚಿತ್ರವನ್ನು ನಿರ್ಮಿಸಿದ್ದ ಭಾಗ್ಯ ರಮೇಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆ.ವಿ. ರಮಣರಾಜ್ ಈ ಚಿತ್ರದ ನಿರ್ದೇಶಕರು.

‘FIR 6 to 6’ ಚಿತ್ರದ ಕುರಿತು ಮಾತನಾಡುವ ವಿಜಯ್‍ ರಾಘವೇಂದ್ರ, ‘ಇದೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾ. ಇಡೀ ಚಿತ್ರವನ್ನು ರಾತ್ರಿ ಹೊತ್ತು ಚಿತ್ರೀಕರಣ ಮಾಡಿದ್ದೇವೆ. ಹಲವು ರಾತ್ರಿಗಲ ಕಾಲ ಈ ಚಿತ್ರಕ್ಕಾಗಿ ಕಷ್ಟಪಟ್ಟಿದ್ದೇವೆ. ಒಮ್ಮೊಮ್ಮೆ ಬೆಳಗಿನ‌ ಜಾವ ನಾಲ್ಕರವರೆಗೆ ಚಿತ್ರೀಕರಣ ಮಾಡಿದ್ದೇವೆ‌. ಈ ಚಿತ್ರದಲ್ಲಿ ಸಾಹಸ ದೃಶ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಥ್ರಿಲ್ಲರ್ ಮಂಜು ಅವರ ಜೊತೆಗೆ ಕೆಲಸ ಮಾಡುವುದು ತುಂಬಾ ಸುಲಭ. ಒಳ್ಳೆಯ ಅನುಭವ ಸಿಗುತ್ತದೆ’ ಎಂದರು.

ರಮಣರಾಜ್ ಈ ಹಿಂದೆ ತೆಲುಗಿನ ಜೆಡಿ ಚಕ್ರವರ್ತಿ ಅವರ ಜೊತೆ ಒಂದು ಚಿತ್ರ ಮಾಡಿದ್ದಾರೆ. ಆ ಚಿತ್ರವಿನ್ನೂ ಬಿಡುಗಡೆ ಆಗಿಲ್ಲ. ‘FIR 6 to 6’ ಅವರ ನಿರ್ದೇಶನದ ಎರಡನೇ ಚಿತ್ರ. ‘ಜೆಡಿ ಅವರ ಸಿನಿಮಾ ಮಾಡುವಾಗ ಹೊಳೆದಂಥ ಕಥೆ ಇದು. ಯುವಕನೊಬ್ಬ ಒಂದು ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡು ನಂತರ ಆ ಸಂದರ್ಭವನ್ನು ಹೇಗೆ ಎದುರಿಸುತ್ತಾನೆ ಅನ್ನೋದನ್ನು ಸಂಜೆ ಆರರಿಂದ ಬೆಳಗಿನ ಜಾವ ಆರರವರೆಗೆ ನಡೆಯುವ ಕಥೆಯ ಮೂಲಕ ಥ್ರಿಲ್ಲಿಂಗ್ ಆಗಿ ಹೇಳಲು ಪ್ರಯತ್ನಿಸಿದ್ದೇವೆ. ವಿಜಯ್‍ ರಾಘವೇಂದ್ರ ಅವರ ಜತೆ ಕೆಲಸ ಮಾಡಿದ್ದು ಒಳ್ಳೆಯ ಅನುಭವ. 35 ರಾತ್ರಿಗಳಂದು ಚಿತ್ರೀಕರಣ ಮಾಡಿದ್ದೇವೆ. ಚಿತ್ರ ಚೆನ್ನಾಗಿ ಬಂದಿದೆ’ ಎಂದು ಹೇಳಿದರು.

‘FIR 6 to 6’ ಚಿತ್ರದಲ್ಲಿ ವಿಜಯ್‍ ರಾಘವೇಂದ್ರ ಜೊತೆಗೆ ಸಿರಿ ರಾಜ್‍, ನಾಗೇಂದ್ರ ಅರಸ್‍, ಬಲ ರಾಜವಾಡಿ, ಯಶ್‍ ಶೆಟ್ಟಿ, ಯಶ, ಶ್ವೇತಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಓಂಜಿ ಅವರ ಛಾಯಾಗ್ರಹಣ, ನಾಗೇಂದ್ರ ಅರಸ್‍ ಸಂಕಲನ, ಸತೀಶ್ ಬಾಬು ಹಾಗೂ ಎಂ.ಎಸ್. ತ್ಯಾಗರಾಜ್ ಸಂಗೀತವಿದೆ.

ಭೂಮಿಕಾ

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

5 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

6 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

8 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

9 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

10 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

10 hours ago