ಮನರಂಜನೆ

ಮತ್ತೊಂದು ಥ್ರಿಲ್ಲರ್‍ ಚಿತ್ರದಲ್ಲಿ ವಿಜಯ್‍ ರಾಘವೇಂದ್ರ; ‘FIR 6 to 6’ ಟ್ರೇಲರ್‍ ಬಿಡುಗಡೆ

ವಿಜಯ್‍ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವಿಶೇಷವೆಂದರೆ, ‘ಕೇಸ್ ಆಫ್‍ ಕೊಂಡಾನ’, ‘ಜಾಗ್‍ 101’ ಮತ್ತು ‘ಗ್ರೇ ಗೇಮ್ಸ್’ ಹೀಗೆ ಮೂರೂ ಚಿತ್ರಗಳು ಥ್ರಿಲ್ಲರ್‍ ಚಿತ್ರಗಳಾಗಿದ್ದವು. ಈಗ ಅವರು ಇನ್ನೊಂದು ಥ್ರಿಲ್ಲರ್ ಚಿತ್ರವನ್ನು ಸದ್ದಿಲ್ಲದೆ ಮುಗಿಸಿದ್ದು, ಆ ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದೆ.

ವಿಜಯ್‍ ರಾಘವೇಂದ್ರ ಹೊಸ ಚಿತ್ರಕ್ಕೆ ‘FIR 6 to 6’ ಎಂಬ ಹೆಸರನ್ನು ಇಡಲಾಗಿದ್ದು, ಈ ಹಿಂದೆ ‘ಪಟ್ಟಾಭಿಷೇಕ’ ಎಂಬ ಚಿತ್ರವನ್ನು ನಿರ್ಮಿಸಿದ್ದ ಭಾಗ್ಯ ರಮೇಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆ.ವಿ. ರಮಣರಾಜ್ ಈ ಚಿತ್ರದ ನಿರ್ದೇಶಕರು.

‘FIR 6 to 6’ ಚಿತ್ರದ ಕುರಿತು ಮಾತನಾಡುವ ವಿಜಯ್‍ ರಾಘವೇಂದ್ರ, ‘ಇದೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾ. ಇಡೀ ಚಿತ್ರವನ್ನು ರಾತ್ರಿ ಹೊತ್ತು ಚಿತ್ರೀಕರಣ ಮಾಡಿದ್ದೇವೆ. ಹಲವು ರಾತ್ರಿಗಲ ಕಾಲ ಈ ಚಿತ್ರಕ್ಕಾಗಿ ಕಷ್ಟಪಟ್ಟಿದ್ದೇವೆ. ಒಮ್ಮೊಮ್ಮೆ ಬೆಳಗಿನ‌ ಜಾವ ನಾಲ್ಕರವರೆಗೆ ಚಿತ್ರೀಕರಣ ಮಾಡಿದ್ದೇವೆ‌. ಈ ಚಿತ್ರದಲ್ಲಿ ಸಾಹಸ ದೃಶ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಥ್ರಿಲ್ಲರ್ ಮಂಜು ಅವರ ಜೊತೆಗೆ ಕೆಲಸ ಮಾಡುವುದು ತುಂಬಾ ಸುಲಭ. ಒಳ್ಳೆಯ ಅನುಭವ ಸಿಗುತ್ತದೆ’ ಎಂದರು.

ರಮಣರಾಜ್ ಈ ಹಿಂದೆ ತೆಲುಗಿನ ಜೆಡಿ ಚಕ್ರವರ್ತಿ ಅವರ ಜೊತೆ ಒಂದು ಚಿತ್ರ ಮಾಡಿದ್ದಾರೆ. ಆ ಚಿತ್ರವಿನ್ನೂ ಬಿಡುಗಡೆ ಆಗಿಲ್ಲ. ‘FIR 6 to 6’ ಅವರ ನಿರ್ದೇಶನದ ಎರಡನೇ ಚಿತ್ರ. ‘ಜೆಡಿ ಅವರ ಸಿನಿಮಾ ಮಾಡುವಾಗ ಹೊಳೆದಂಥ ಕಥೆ ಇದು. ಯುವಕನೊಬ್ಬ ಒಂದು ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡು ನಂತರ ಆ ಸಂದರ್ಭವನ್ನು ಹೇಗೆ ಎದುರಿಸುತ್ತಾನೆ ಅನ್ನೋದನ್ನು ಸಂಜೆ ಆರರಿಂದ ಬೆಳಗಿನ ಜಾವ ಆರರವರೆಗೆ ನಡೆಯುವ ಕಥೆಯ ಮೂಲಕ ಥ್ರಿಲ್ಲಿಂಗ್ ಆಗಿ ಹೇಳಲು ಪ್ರಯತ್ನಿಸಿದ್ದೇವೆ. ವಿಜಯ್‍ ರಾಘವೇಂದ್ರ ಅವರ ಜತೆ ಕೆಲಸ ಮಾಡಿದ್ದು ಒಳ್ಳೆಯ ಅನುಭವ. 35 ರಾತ್ರಿಗಳಂದು ಚಿತ್ರೀಕರಣ ಮಾಡಿದ್ದೇವೆ. ಚಿತ್ರ ಚೆನ್ನಾಗಿ ಬಂದಿದೆ’ ಎಂದು ಹೇಳಿದರು.

‘FIR 6 to 6’ ಚಿತ್ರದಲ್ಲಿ ವಿಜಯ್‍ ರಾಘವೇಂದ್ರ ಜೊತೆಗೆ ಸಿರಿ ರಾಜ್‍, ನಾಗೇಂದ್ರ ಅರಸ್‍, ಬಲ ರಾಜವಾಡಿ, ಯಶ್‍ ಶೆಟ್ಟಿ, ಯಶ, ಶ್ವೇತಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಓಂಜಿ ಅವರ ಛಾಯಾಗ್ರಹಣ, ನಾಗೇಂದ್ರ ಅರಸ್‍ ಸಂಕಲನ, ಸತೀಶ್ ಬಾಬು ಹಾಗೂ ಎಂ.ಎಸ್. ತ್ಯಾಗರಾಜ್ ಸಂಗೀತವಿದೆ.

ಭೂಮಿಕಾ

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

10 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

10 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

10 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

10 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

11 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

11 hours ago