ಮನರಂಜನೆ

ಮಹಾನ್’ ಆದ ವಿಜಯ್‍ ರಾಘವೇಂದ್ರ, ಇದು ಅನ್ನದಾತನ ಕುರಿತಾದ ಕಥೆ

ಪಿ.ಸಿ. ಶೇಖರ್‍ ನಿರ್ದೇಶನದ ‘ಬ್ಯಾಡ್‍’ ಚಿತ್ರ ಕಳೆದ ವಾರವಷ್ಟೇ ಬಿಡುಗಡೆಯಾಗಿದೆ. ಈ ಮಧ್ಯೆ, ಅವರ ಹೊಸ ಚಿತ್ರದ ಶೀರ್ಷಿಕೆ ಅನಾವರಣ ಸದ್ದಿಲ್ಲದೆ ಆಗಿದೆ. ಶೇಖರ್‍ ಈ ಬಾರಿ ವಿಜಯ್‍ ರಾಘವೇಂದ್ರ ಅಭಿನಯದಲ್ಲಿ ಚಿತ್ರವೊಂದನ್ನು ನಿರ್ದಶನ ಮಾಡುತ್ತಿದ್ದು, ಈ ಚಿತ್ರಕ್ಕೆ ‘ಮಹಾನ್‍’ ಎಂದು ಹೆಸರಿಡಲಾಗಿದೆ. ಈ ಶೀರ್ಷಿಕೆಯನ್ನು ಶಿವರಾಜಕುಮಾರ್‍ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

‘ಮಹಾನ್‍’ ಚಿತ್ರವನ್ನು ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ನಿರ್ಮಿಸುತ್ತಿದ್ದು, ಪಿ.ಸಿ.ಶೇಖರ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ.

ಈ ಚಿತ್ರದಲ್ಲಿ ಮನರಂಜನೆ ಜೊತೆಗೆ ಸಂದೇಶವಿದೆ ಎನ್ನುವ ವಿಜಯ್‍ ರಾಘವೇಂದ್ರ, ‘ಈ ಚಿತ್ರದಲ್ಲಿ ಮನೋರಂಜನೆ ಇದೆ. ಮನೋರಂಜನೆಯ ಹಿಂದೆ ಒಂದು ಸಂದೇಶವಿದೆ. ನಿಜಕ್ಕೂ ಆ ಸಂದೇಶ ‘ಮಹಾನ್’ ಸಂದೇಶವಾಗಿರಲಿದೆ’ ಎನ್ನುತ್ತಾರೆ.

ಇದು ದೇಶಕ್ಕೆ ಅನ್ನ ನೀಡುವ ಅನ್ನದಾತನಾದ ರೈತನ ಕುರಿತಾದ ಕಥೆ ಎನ್ನುವ ಶೇಖರ್‍, ‘ಅದೇ ಕಾರಣಕ್ಕೆ ಚಿತ್ರಕ್ಕೆ ‘ಮಹಾನ್’ ಎಂದು ಹೆಸರಿಡಲಾಗಿದೆ. ‘ಮಹಾನ್’ ಎಂದರೆ ಪ್ರಮುಖ, ಶ್ರೇಷ್ಠ ಎಂಬ ಅರ್ಥಗಳು ಬರುತ್ತವೆ. ಅನ್ನ ನೀಡುವ ರೈತ ಎಲ್ಲರಿಗಿಂತ ದೊಡ್ಡವನು ಎಂದು ಎಲ್ಲರಿಗೂ ತಿಳಿದ ವಿಷಯ. ಹಾಗಾಗಿ ನಮ್ಮ ಚಿತ್ರಕ್ಕೆ ‘ಮಹಾನ್’ ಎಂದು ಹೆಸರಿಡಲಾಗಿದೆ. ಚಿತ್ರಕ್ಕೆ ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದಲ್ಲಿ ಇನ್ನೂ ಪ್ರಮುಖ ಕಲಾವಿದರು ಅಭಿನಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುವುದಾಗಿ’ ತಿಳಿಸುತ್ತಾರೆ.

ಈ ಚಿತ್ರ ನಮ್ಮ ಪಾಲಿಗೆ ಕೇವಲ ಒಂದು ಸಿನೆಮಾ ಅಲ್ಲ, ಇದು ನಮ್ಮ ರೈತರಿಗೆ ಅರ್ಪಿಸುವ ಗೌರವ ಎನ್ನುವ ನಿರ್ಮಾಪಕ ಪ್ರಕಾಶ್‍, ‘ಈ ಪಾತ್ರಕ್ಕೆ ವಿಜಯ್‍ ರಾಘವೇಂದ್ರ ಅವರಿಗಿಂತ ಹೆಚ್ಚು ಸೂಕ್ತ ವ್ಯಕ್ತಿ ಯಾರೂ ಇಲ್ಲ. ಅವರ ಅಭಿನಯ, ಅವರ ಆತ್ಮೀಯತೆ ಈ ಪಾತ್ರಕ್ಕೆ ಜೀವ ತುಂಬಲಿದೆ’ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

1 hour ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

1 hour ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

1 hour ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

1 hour ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

2 hours ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

2 hours ago