ಪಿ.ಸಿ. ಶೇಖರ್ ನಿರ್ದೇಶನದ ‘ಬ್ಯಾಡ್’ ಚಿತ್ರ ಕಳೆದ ವಾರವಷ್ಟೇ ಬಿಡುಗಡೆಯಾಗಿದೆ. ಈ ಮಧ್ಯೆ, ಅವರ ಹೊಸ ಚಿತ್ರದ ಶೀರ್ಷಿಕೆ ಅನಾವರಣ ಸದ್ದಿಲ್ಲದೆ ಆಗಿದೆ. ಶೇಖರ್ ಈ ಬಾರಿ ವಿಜಯ್ ರಾಘವೇಂದ್ರ ಅಭಿನಯದಲ್ಲಿ ಚಿತ್ರವೊಂದನ್ನು ನಿರ್ದಶನ ಮಾಡುತ್ತಿದ್ದು, ಈ ಚಿತ್ರಕ್ಕೆ ‘ಮಹಾನ್’ ಎಂದು ಹೆಸರಿಡಲಾಗಿದೆ. ಈ ಶೀರ್ಷಿಕೆಯನ್ನು ಶಿವರಾಜಕುಮಾರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
‘ಮಹಾನ್’ ಚಿತ್ರವನ್ನು ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ನಿರ್ಮಿಸುತ್ತಿದ್ದು, ಪಿ.ಸಿ.ಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ.
ಈ ಚಿತ್ರದಲ್ಲಿ ಮನರಂಜನೆ ಜೊತೆಗೆ ಸಂದೇಶವಿದೆ ಎನ್ನುವ ವಿಜಯ್ ರಾಘವೇಂದ್ರ, ‘ಈ ಚಿತ್ರದಲ್ಲಿ ಮನೋರಂಜನೆ ಇದೆ. ಮನೋರಂಜನೆಯ ಹಿಂದೆ ಒಂದು ಸಂದೇಶವಿದೆ. ನಿಜಕ್ಕೂ ಆ ಸಂದೇಶ ‘ಮಹಾನ್’ ಸಂದೇಶವಾಗಿರಲಿದೆ’ ಎನ್ನುತ್ತಾರೆ.
ಇದು ದೇಶಕ್ಕೆ ಅನ್ನ ನೀಡುವ ಅನ್ನದಾತನಾದ ರೈತನ ಕುರಿತಾದ ಕಥೆ ಎನ್ನುವ ಶೇಖರ್, ‘ಅದೇ ಕಾರಣಕ್ಕೆ ಚಿತ್ರಕ್ಕೆ ‘ಮಹಾನ್’ ಎಂದು ಹೆಸರಿಡಲಾಗಿದೆ. ‘ಮಹಾನ್’ ಎಂದರೆ ಪ್ರಮುಖ, ಶ್ರೇಷ್ಠ ಎಂಬ ಅರ್ಥಗಳು ಬರುತ್ತವೆ. ಅನ್ನ ನೀಡುವ ರೈತ ಎಲ್ಲರಿಗಿಂತ ದೊಡ್ಡವನು ಎಂದು ಎಲ್ಲರಿಗೂ ತಿಳಿದ ವಿಷಯ. ಹಾಗಾಗಿ ನಮ್ಮ ಚಿತ್ರಕ್ಕೆ ‘ಮಹಾನ್’ ಎಂದು ಹೆಸರಿಡಲಾಗಿದೆ. ಚಿತ್ರಕ್ಕೆ ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದಲ್ಲಿ ಇನ್ನೂ ಪ್ರಮುಖ ಕಲಾವಿದರು ಅಭಿನಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುವುದಾಗಿ’ ತಿಳಿಸುತ್ತಾರೆ.
ಈ ಚಿತ್ರ ನಮ್ಮ ಪಾಲಿಗೆ ಕೇವಲ ಒಂದು ಸಿನೆಮಾ ಅಲ್ಲ, ಇದು ನಮ್ಮ ರೈತರಿಗೆ ಅರ್ಪಿಸುವ ಗೌರವ ಎನ್ನುವ ನಿರ್ಮಾಪಕ ಪ್ರಕಾಶ್, ‘ಈ ಪಾತ್ರಕ್ಕೆ ವಿಜಯ್ ರಾಘವೇಂದ್ರ ಅವರಿಗಿಂತ ಹೆಚ್ಚು ಸೂಕ್ತ ವ್ಯಕ್ತಿ ಯಾರೂ ಇಲ್ಲ. ಅವರ ಅಭಿನಯ, ಅವರ ಆತ್ಮೀಯತೆ ಈ ಪಾತ್ರಕ್ಕೆ ಜೀವ ತುಂಬಲಿದೆ’ ಎಂದು ಹೇಳಿದ್ದಾರೆ.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…