ಮನರಂಜನೆ

ಮಹಾನ್’ ಆದ ವಿಜಯ್‍ ರಾಘವೇಂದ್ರ, ಇದು ಅನ್ನದಾತನ ಕುರಿತಾದ ಕಥೆ

ಪಿ.ಸಿ. ಶೇಖರ್‍ ನಿರ್ದೇಶನದ ‘ಬ್ಯಾಡ್‍’ ಚಿತ್ರ ಕಳೆದ ವಾರವಷ್ಟೇ ಬಿಡುಗಡೆಯಾಗಿದೆ. ಈ ಮಧ್ಯೆ, ಅವರ ಹೊಸ ಚಿತ್ರದ ಶೀರ್ಷಿಕೆ ಅನಾವರಣ ಸದ್ದಿಲ್ಲದೆ ಆಗಿದೆ. ಶೇಖರ್‍ ಈ ಬಾರಿ ವಿಜಯ್‍ ರಾಘವೇಂದ್ರ ಅಭಿನಯದಲ್ಲಿ ಚಿತ್ರವೊಂದನ್ನು ನಿರ್ದಶನ ಮಾಡುತ್ತಿದ್ದು, ಈ ಚಿತ್ರಕ್ಕೆ ‘ಮಹಾನ್‍’ ಎಂದು ಹೆಸರಿಡಲಾಗಿದೆ. ಈ ಶೀರ್ಷಿಕೆಯನ್ನು ಶಿವರಾಜಕುಮಾರ್‍ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

‘ಮಹಾನ್‍’ ಚಿತ್ರವನ್ನು ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ನಿರ್ಮಿಸುತ್ತಿದ್ದು, ಪಿ.ಸಿ.ಶೇಖರ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ.

ಈ ಚಿತ್ರದಲ್ಲಿ ಮನರಂಜನೆ ಜೊತೆಗೆ ಸಂದೇಶವಿದೆ ಎನ್ನುವ ವಿಜಯ್‍ ರಾಘವೇಂದ್ರ, ‘ಈ ಚಿತ್ರದಲ್ಲಿ ಮನೋರಂಜನೆ ಇದೆ. ಮನೋರಂಜನೆಯ ಹಿಂದೆ ಒಂದು ಸಂದೇಶವಿದೆ. ನಿಜಕ್ಕೂ ಆ ಸಂದೇಶ ‘ಮಹಾನ್’ ಸಂದೇಶವಾಗಿರಲಿದೆ’ ಎನ್ನುತ್ತಾರೆ.

ಇದು ದೇಶಕ್ಕೆ ಅನ್ನ ನೀಡುವ ಅನ್ನದಾತನಾದ ರೈತನ ಕುರಿತಾದ ಕಥೆ ಎನ್ನುವ ಶೇಖರ್‍, ‘ಅದೇ ಕಾರಣಕ್ಕೆ ಚಿತ್ರಕ್ಕೆ ‘ಮಹಾನ್’ ಎಂದು ಹೆಸರಿಡಲಾಗಿದೆ. ‘ಮಹಾನ್’ ಎಂದರೆ ಪ್ರಮುಖ, ಶ್ರೇಷ್ಠ ಎಂಬ ಅರ್ಥಗಳು ಬರುತ್ತವೆ. ಅನ್ನ ನೀಡುವ ರೈತ ಎಲ್ಲರಿಗಿಂತ ದೊಡ್ಡವನು ಎಂದು ಎಲ್ಲರಿಗೂ ತಿಳಿದ ವಿಷಯ. ಹಾಗಾಗಿ ನಮ್ಮ ಚಿತ್ರಕ್ಕೆ ‘ಮಹಾನ್’ ಎಂದು ಹೆಸರಿಡಲಾಗಿದೆ. ಚಿತ್ರಕ್ಕೆ ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದಲ್ಲಿ ಇನ್ನೂ ಪ್ರಮುಖ ಕಲಾವಿದರು ಅಭಿನಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುವುದಾಗಿ’ ತಿಳಿಸುತ್ತಾರೆ.

ಈ ಚಿತ್ರ ನಮ್ಮ ಪಾಲಿಗೆ ಕೇವಲ ಒಂದು ಸಿನೆಮಾ ಅಲ್ಲ, ಇದು ನಮ್ಮ ರೈತರಿಗೆ ಅರ್ಪಿಸುವ ಗೌರವ ಎನ್ನುವ ನಿರ್ಮಾಪಕ ಪ್ರಕಾಶ್‍, ‘ಈ ಪಾತ್ರಕ್ಕೆ ವಿಜಯ್‍ ರಾಘವೇಂದ್ರ ಅವರಿಗಿಂತ ಹೆಚ್ಚು ಸೂಕ್ತ ವ್ಯಕ್ತಿ ಯಾರೂ ಇಲ್ಲ. ಅವರ ಅಭಿನಯ, ಅವರ ಆತ್ಮೀಯತೆ ಈ ಪಾತ್ರಕ್ಕೆ ಜೀವ ತುಂಬಲಿದೆ’ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

17 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

17 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

17 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 day ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

1 day ago