ಮನರಂಜನೆ

ಸ್ವಪ್ನ ಮಂಟಪ’ ಆಯ್ತು, ಇನ್ನೊಂದು ಹೊಸ ಚಿತ್ರದೊಂದಿಗೆ ವಿಜಯ್‍ ರಾಘವೇಂದ್ರ

ವಿಜಯ್‍ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವರ್ಷದ ಆರಂಭದಲ್ಲಿ ಬಿಡುಗಡೆಯಾದ ‘ನಿಮಗೊಂದು ಸಿಹಿಸುದ್ದಿ’ಯಲ್ಲಿ ಅತಿಥಿ ಪಾತ್ರದಲ್ಲಿ ವಿಜಯ್‍ ರಾಘವೇಂದ್ರ ಕಾಣಿಸಿಕೊಂಡಿದ್ದರು. ಆ ನಂತರ ವಿಜಯ್‍ ರಾಘವೇಂದ್ರ ಅಭಿನಯದ ‘FIR 6 To 6’ ಮತ್ತು ‘ಸ್ವಪ್ನ ಮಂಟಪ’ ಚಿತ್ರಗಳು ಬಿಡುಗಡೆಯಾಗಿವೆ. ಹೀಗಿರುವಾಗಲೇ, ಮುಂದಿನ ತಿಂಗಳು ವಿಜಯ್‍ ರಾಘವೇಂದ್ರ ಅಭಿನಯದ ಇನ್ನೊಂದು ಹೊಸ ಚಿತ್ರ ಬಿಡುಗಡೆಯಾಗಲಿದೆ.

ವಿಜಯ್‍ ಈ ಬಾರಿ ‘ರಿಪ್ಪನ್‍ ಸ್ವಾಮಿ’ಯಾಗಿ ತೆರೆಗೆ ಬರಲಿದ್ದಾರೆ. ಈ ಹಿಂದೆ ‘ಮಾಲ್ಗುಡಿ ಡೇಸ್’ ಚಿತ್ರ ನಿರ್ದೇಶನ ಮಾಡಿದ್ದ ಕಿಶೋರ್ ಮೂಡಬಿದ್ರೆ, ‘ರಿಪ್ಪನ್ ಸ್ವಾಮಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರವು ಆಗಸ್ಟ್ 29ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ.

‘ರಿಪ್ಪನ್‍ ಸ್ವಾಮಿ’ಯಲ್ಲೂ ವಿಜಯ್‍ ರಾಘವೇಂದ್ರ ವಿಭಿನ್ನವಾದ ಪಾತ್ರವೊಂದರಲ್ಲಿ ಕಾಣಿಸಕೊಂಡಿದ್ದಾರಂತೆ. ಇದೊಂದು ರಗ್ಗೆಡ್‍ ಪಾತ್ರವಾಗಿದ್ದು, ವಿಜಯ್‍ ಈ ಚಿತ್ರದಲ್ಲಿ ಬಂದೂಕು ಹಿಡಿದಿರುವುದು ವಿಶೇಷ. ಈ ಚಿತ್ರದಲ್ಲಿ ವಿಜಯ್‍ ರಾಘವೇಂದ್ರ ನಕ್ಸಲೈಟ್‍ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಸುದ್ದಿ ಇದ್ದು, ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ. ಆದರೆ, ಚಿತ್ರದ ಪೋಸ್ಟರ್‍ಗಳನ್ನು ಗಮನಿಸಿದರೆ, ಇದೊಂದು ನಕ್ಸಲಿಸಂ ಹಿನ್ನೆಲೆಯ ಚಿತ್ರ ಎಂದೆನಿಸುತ್ತದೆ.

ಚಿತ್ರದಲ್ಲಿ ವಿಜಯ್‍ಗೆ ಜೋಡಿಯಾಗಿ ಶಿವಮೊಗ್ಗ ಮೂಲದ ಅಶ್ವಿನಿ ಚಂದ್ರಶೇಖರ್ ನಟಿಸಿದ್ದಾರೆ. ಉಳಿದಂತೆ ಪ್ರಕಾಶ್ ತುಮ್ಮಿನಾಡು, ವಜ್ರದೀರ್ ಜೈನ್, ಯಮುನಾ ಶ್ರೀನಿಧಿ, ಮೋಹನ್ ಶೇಣಿ, ಕೃಷ್ಣಮೂರ್ತಿ ಕವತ್ತಾರ್, ಪ್ರಭಾಕರ್ ಕುಂದಾರ್, ರಂಜನ್ ಶೆಟ್ಟಿ, ಸಂತೋಷ್ ಶೆಟ್ಟಿ ಮುಂತಾದವರು ಇದ್ದಾರೆ.

ಪಂಚಾಂನನ ಫಿಲಂಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಾಣ ಮಾಡಲಾಗಿದೆ. ಕೊಪ್ಪ, ಕಳಸ, ಬಾಳೆಹೊನ್ನೂರು ಸುತ್ತಮುತ್ತ ‘ರಿಪ್ಪನ್‍ ಸ್ವಾಮಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಚಿತ್ರಕ್ಕೆ ರಂಗನಾಥ್‍ ಅವರ ಛಾಯಾಗ್ರಹಣವಿದ್ದರೆ, ಮಲಯಾಳಂನ ಖ್ಯಾತ ಸಂಗೀತ ನಿರ್ದೇಶಕ ಸ್ಯಾಮ್ಯುವೆಲ್ ಅಭಿ ಸಂಗೀತ ಸಂಯೋಜಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ವಿರೋಧಿಸಿ ಮುಂದುವರಿದ ಪ್ರತಿಭಟನೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…

8 mins ago

ಸದನದಲ್ಲಿ ಅಗೌರವ ತೋರಿದ ಶಾಸಕರ ವಿರುದ್ಧ ಕ್ರಮ ಆಗಲಿ: ಆರ್.‌ಅಶೋಕ್‌

ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್‌ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.…

16 mins ago

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

47 mins ago

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

2 hours ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

2 hours ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

3 hours ago