ಮನರಂಜನೆ

‘ಮಹಾರಾಜ’ ಚಿತ್ರಕ್ಕೆ ವಿಜಯ್‍ ಸೇತುಪತಿ ತೆಗೆದುಕೊಂಡ ಸಂಭಾವನೆ ಎಷ್ಟು?

ವಿಜಯ್‍ ಸೇತುಪತಿ ಅಭಿನಯದ ತಮಿಳು ಚಿತ್ರ ‘ಮಹಾರಾಜ’, ಜೂನ್‍ 14ರಂದು ಬಿಡುಗಡೆಯಾಗಿ ಸೂಪರ್‍ ಹಿಟ್ ಆಗಿದೆ. ಸೋತು ಸುಣ್ಣವಾಗಿದ್ದ ತಮಿಳು ಚಿತ್ರರಂಗಕ್ಕೆ ಆಕ್ಸಿಜನ್ ನೀಡಿದೆ. ಚಿತ್ರವು 100 ಕೋಟಿ ರೂ. ಗಳಿಕೆ ಮಾಡುವ ಮೂಲಕ ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ.

ಎಲ್ಲಾ ಸರಿ, ಈ ಚಿತ್ರಕ್ಕೆ ನಾಯಕ ವಿಜಯ್‍ ಸೇತುಪತಿ ತೆಗೆದುಕೊಂಡ ಸಂಭಾವನೆ ಎಷ್ಟು? ಇಂಥದ್ದೊಂದು ಪ್ರಶ್ನೆ ಇದೀಗ ಎಲ್ಲೆಡೆ ಕೇಳಿ ಬರುತ್ತಿದೆ. ಅದಕ್ಕೆ ಕಾರಣವೂ ಇದೆ. ಅದೇನೆಂದರೆ, ಚಿತ್ರಕ್ಕೆ ವಿಜಯ್ ಸೇತುಪತಿ ಒಂದು ರೂಪಾಯಿ ಸಹ ಸಂಭಾವನೆ ಪಡೆದಿಲ್ಲವಂತೆ.

ಹೌದು, ಮೂಲಗಳ ಪ್ರಕಾರ, ಚಿತ್ರಕ್ಕೆ 20 ಕೋಟಿ ರೂ. ಬಜೆಟ್‍ ಎತ್ತಿಡಲಾಗಿತ್ತಂತೆ. ಅಷ್ಟರಲ್ಲಿ ಮುಗಿಸುವ ಅಗತ್ಯವಿದ್ದರಿಂದ, ವಿಜಯ್‍ ಸೇತುಪತಿ ಯಾವುದೇ ಸಂಭಾವನೆ ಪಡೆದಿಲ್ಲವಂತೆ. ಏಕೆಂದರೆ, ಈ ಕಥೆ ಕೇಳಿ ವಿಜಯ್‍ ಸೇತುಪತಿ ಬಹಳ ಖುಷಿಯಾಗಿದ್ದರು. ಈ ಚಿತ್ರವು ತನ್ನ ವೃತ್ತಿಜೀವನಕ್ಕೆ ದೊಡ್ಡ ಬ್ರೇಕ್‍ ನೀಡಬಹುದು ಎಂದು ನಂಬಿದ್ದರು. ಚಿತ್ರದ ಬಜೆಟ್‍ 20 ಕೋಟಿ ಆದರೆ, ಅವರು ಚಿತ್ರವೊಂದಕ್ಕ ಪಡೆಯುವ ಸಂಭಾವನೆಯೇ 18 ಕೋಟಿಯಷ್ಟಿದೆ. ಅವರಿಗೇ 18 ಕೋಟಿ ಕೊಟ್ಟರೆ, ಚಿತ್ರ ಮಾಡುವುದಾದರೂ ಹೇಗೆ? ಅದೇ ಕಾರಣಕ್ಕೆ ಅವರು ಚಿತ್ರಕ್ಕೆ ಯಾವುದೇ ಸಂಭಾವನೆ ಸ್ವೀಕರಿಸಲಿಲ್ಲವಂತೆ. ಅದರ ಬದಲು, ಚಿತ್ರ ಗೆದ್ದರೆ ಬರುವ ಲಾಭದಲ್ಲಿ ಪರ್ಸಂಟೇಜ್ ಕೇಳಿದ್ದರಂತೆ.

ಹಾಗೆ ನೋಡಿದರೆ, ಇದರಿಂದ ಅವರಿಗೆ ಒಳ್ಳೆಯದೇ ಆಗಿದೆ. ಏಕೆಂದರೆ, ಬರೀ ಸಂಭಾವನೆ ಪಡೆದಿದ್ದರೆ, ಸಣ್ಣ ಮೊತ್ತ ಸಿಗುತ್ತಿತ್ತೇನೋ, ಈಗ ಚಿತ್ರ 100 ಕೋಟಿ ರೂ. ಗಳಿಕೆ ಮಾಡಿರುವುದರಿಂದ, ವಿಜಯ್‍ ಸೇತುಪತಿ ತಮ್ಮ ಸಂಭಾವನೆಗಿಂತ ಹೆಚ್ಚು ಸಂಭಾವನೆ ಪಡೆಯುತ್ತಾರೆ ಎಂದು ಹೇಳಲಾಗುತ್ತಿದೆ.

ಅಂದಹಾಗೆ, ಇದು ವಿಜಯ್‍ ಸೇತುಪತಿ ಅಭಿನಯದ ಈ ವರ್ಷದ ಎರಡನೇ ಯಶಸ್ವಿ ಚಿತ್ರ. ಇದಕ್ಕೂ ಮೊದಲು ವರ್ಷದ ಆರಂಭದಲ್ಲಿ ಬಿಡುಗಡೆಯಾದ ವಿಜಯ್ ಸೇತುಪತಿ ಅಭಿನಯದ ‘ಮೆರ್ರಿ ಕ್ರಿಸ್ಮಸ್‍’ ಸಹ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿತ್ತು. ಈಗ ‘ಮಹಾರಾಜ’ ಚಿತ್ರ ಸಹ ಯಶಸ್ವಿಯಾಗಿದೆ. ಈ ಚಿತ್ರದ ಇದೀಗ ನೆಟ್‍ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿದೆ.

ಈ ಚಿತ್ರವನ್ನು ವೀಕ್ಷಿಸಿರುವ ಬಾಲಿವುಡ್‍ ನಟ ಆಮೀರ್ ಖಾನ್‍, ಚಿತ್ರದ ರೀಮೇಕ್ ಹಕ್ಕುಗಳನ್ನು ಖರೀದಿಸಿದ್ದು, ಅದನ್ನು ಹಿಂದಿಯಲ್ಲಿ ಮಾಡುವ ನಿರೀಕ್ಷೆ ಇದೆ.

ಭೂಮಿಕಾ

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

7 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

7 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

7 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

7 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

7 hours ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

7 hours ago