ಮನರಂಜನೆ

‘ಮಹಾರಾಜ’ ಚಿತ್ರಕ್ಕೆ ವಿಜಯ್‍ ಸೇತುಪತಿ ತೆಗೆದುಕೊಂಡ ಸಂಭಾವನೆ ಎಷ್ಟು?

ವಿಜಯ್‍ ಸೇತುಪತಿ ಅಭಿನಯದ ತಮಿಳು ಚಿತ್ರ ‘ಮಹಾರಾಜ’, ಜೂನ್‍ 14ರಂದು ಬಿಡುಗಡೆಯಾಗಿ ಸೂಪರ್‍ ಹಿಟ್ ಆಗಿದೆ. ಸೋತು ಸುಣ್ಣವಾಗಿದ್ದ ತಮಿಳು ಚಿತ್ರರಂಗಕ್ಕೆ ಆಕ್ಸಿಜನ್ ನೀಡಿದೆ. ಚಿತ್ರವು 100 ಕೋಟಿ ರೂ. ಗಳಿಕೆ ಮಾಡುವ ಮೂಲಕ ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ.

ಎಲ್ಲಾ ಸರಿ, ಈ ಚಿತ್ರಕ್ಕೆ ನಾಯಕ ವಿಜಯ್‍ ಸೇತುಪತಿ ತೆಗೆದುಕೊಂಡ ಸಂಭಾವನೆ ಎಷ್ಟು? ಇಂಥದ್ದೊಂದು ಪ್ರಶ್ನೆ ಇದೀಗ ಎಲ್ಲೆಡೆ ಕೇಳಿ ಬರುತ್ತಿದೆ. ಅದಕ್ಕೆ ಕಾರಣವೂ ಇದೆ. ಅದೇನೆಂದರೆ, ಚಿತ್ರಕ್ಕೆ ವಿಜಯ್ ಸೇತುಪತಿ ಒಂದು ರೂಪಾಯಿ ಸಹ ಸಂಭಾವನೆ ಪಡೆದಿಲ್ಲವಂತೆ.

ಹೌದು, ಮೂಲಗಳ ಪ್ರಕಾರ, ಚಿತ್ರಕ್ಕೆ 20 ಕೋಟಿ ರೂ. ಬಜೆಟ್‍ ಎತ್ತಿಡಲಾಗಿತ್ತಂತೆ. ಅಷ್ಟರಲ್ಲಿ ಮುಗಿಸುವ ಅಗತ್ಯವಿದ್ದರಿಂದ, ವಿಜಯ್‍ ಸೇತುಪತಿ ಯಾವುದೇ ಸಂಭಾವನೆ ಪಡೆದಿಲ್ಲವಂತೆ. ಏಕೆಂದರೆ, ಈ ಕಥೆ ಕೇಳಿ ವಿಜಯ್‍ ಸೇತುಪತಿ ಬಹಳ ಖುಷಿಯಾಗಿದ್ದರು. ಈ ಚಿತ್ರವು ತನ್ನ ವೃತ್ತಿಜೀವನಕ್ಕೆ ದೊಡ್ಡ ಬ್ರೇಕ್‍ ನೀಡಬಹುದು ಎಂದು ನಂಬಿದ್ದರು. ಚಿತ್ರದ ಬಜೆಟ್‍ 20 ಕೋಟಿ ಆದರೆ, ಅವರು ಚಿತ್ರವೊಂದಕ್ಕ ಪಡೆಯುವ ಸಂಭಾವನೆಯೇ 18 ಕೋಟಿಯಷ್ಟಿದೆ. ಅವರಿಗೇ 18 ಕೋಟಿ ಕೊಟ್ಟರೆ, ಚಿತ್ರ ಮಾಡುವುದಾದರೂ ಹೇಗೆ? ಅದೇ ಕಾರಣಕ್ಕೆ ಅವರು ಚಿತ್ರಕ್ಕೆ ಯಾವುದೇ ಸಂಭಾವನೆ ಸ್ವೀಕರಿಸಲಿಲ್ಲವಂತೆ. ಅದರ ಬದಲು, ಚಿತ್ರ ಗೆದ್ದರೆ ಬರುವ ಲಾಭದಲ್ಲಿ ಪರ್ಸಂಟೇಜ್ ಕೇಳಿದ್ದರಂತೆ.

ಹಾಗೆ ನೋಡಿದರೆ, ಇದರಿಂದ ಅವರಿಗೆ ಒಳ್ಳೆಯದೇ ಆಗಿದೆ. ಏಕೆಂದರೆ, ಬರೀ ಸಂಭಾವನೆ ಪಡೆದಿದ್ದರೆ, ಸಣ್ಣ ಮೊತ್ತ ಸಿಗುತ್ತಿತ್ತೇನೋ, ಈಗ ಚಿತ್ರ 100 ಕೋಟಿ ರೂ. ಗಳಿಕೆ ಮಾಡಿರುವುದರಿಂದ, ವಿಜಯ್‍ ಸೇತುಪತಿ ತಮ್ಮ ಸಂಭಾವನೆಗಿಂತ ಹೆಚ್ಚು ಸಂಭಾವನೆ ಪಡೆಯುತ್ತಾರೆ ಎಂದು ಹೇಳಲಾಗುತ್ತಿದೆ.

ಅಂದಹಾಗೆ, ಇದು ವಿಜಯ್‍ ಸೇತುಪತಿ ಅಭಿನಯದ ಈ ವರ್ಷದ ಎರಡನೇ ಯಶಸ್ವಿ ಚಿತ್ರ. ಇದಕ್ಕೂ ಮೊದಲು ವರ್ಷದ ಆರಂಭದಲ್ಲಿ ಬಿಡುಗಡೆಯಾದ ವಿಜಯ್ ಸೇತುಪತಿ ಅಭಿನಯದ ‘ಮೆರ್ರಿ ಕ್ರಿಸ್ಮಸ್‍’ ಸಹ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿತ್ತು. ಈಗ ‘ಮಹಾರಾಜ’ ಚಿತ್ರ ಸಹ ಯಶಸ್ವಿಯಾಗಿದೆ. ಈ ಚಿತ್ರದ ಇದೀಗ ನೆಟ್‍ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿದೆ.

ಈ ಚಿತ್ರವನ್ನು ವೀಕ್ಷಿಸಿರುವ ಬಾಲಿವುಡ್‍ ನಟ ಆಮೀರ್ ಖಾನ್‍, ಚಿತ್ರದ ರೀಮೇಕ್ ಹಕ್ಕುಗಳನ್ನು ಖರೀದಿಸಿದ್ದು, ಅದನ್ನು ಹಿಂದಿಯಲ್ಲಿ ಮಾಡುವ ನಿರೀಕ್ಷೆ ಇದೆ.

ಭೂಮಿಕಾ

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

2 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

3 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

4 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

5 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

5 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

5 hours ago