ಮನರಂಜನೆ

‘ಮಹಾರಾಜ’ ಚಿತ್ರಕ್ಕೆ ವಿಜಯ್‍ ಸೇತುಪತಿ ತೆಗೆದುಕೊಂಡ ಸಂಭಾವನೆ ಎಷ್ಟು?

ವಿಜಯ್‍ ಸೇತುಪತಿ ಅಭಿನಯದ ತಮಿಳು ಚಿತ್ರ ‘ಮಹಾರಾಜ’, ಜೂನ್‍ 14ರಂದು ಬಿಡುಗಡೆಯಾಗಿ ಸೂಪರ್‍ ಹಿಟ್ ಆಗಿದೆ. ಸೋತು ಸುಣ್ಣವಾಗಿದ್ದ ತಮಿಳು ಚಿತ್ರರಂಗಕ್ಕೆ ಆಕ್ಸಿಜನ್ ನೀಡಿದೆ. ಚಿತ್ರವು 100 ಕೋಟಿ ರೂ. ಗಳಿಕೆ ಮಾಡುವ ಮೂಲಕ ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ.

ಎಲ್ಲಾ ಸರಿ, ಈ ಚಿತ್ರಕ್ಕೆ ನಾಯಕ ವಿಜಯ್‍ ಸೇತುಪತಿ ತೆಗೆದುಕೊಂಡ ಸಂಭಾವನೆ ಎಷ್ಟು? ಇಂಥದ್ದೊಂದು ಪ್ರಶ್ನೆ ಇದೀಗ ಎಲ್ಲೆಡೆ ಕೇಳಿ ಬರುತ್ತಿದೆ. ಅದಕ್ಕೆ ಕಾರಣವೂ ಇದೆ. ಅದೇನೆಂದರೆ, ಚಿತ್ರಕ್ಕೆ ವಿಜಯ್ ಸೇತುಪತಿ ಒಂದು ರೂಪಾಯಿ ಸಹ ಸಂಭಾವನೆ ಪಡೆದಿಲ್ಲವಂತೆ.

ಹೌದು, ಮೂಲಗಳ ಪ್ರಕಾರ, ಚಿತ್ರಕ್ಕೆ 20 ಕೋಟಿ ರೂ. ಬಜೆಟ್‍ ಎತ್ತಿಡಲಾಗಿತ್ತಂತೆ. ಅಷ್ಟರಲ್ಲಿ ಮುಗಿಸುವ ಅಗತ್ಯವಿದ್ದರಿಂದ, ವಿಜಯ್‍ ಸೇತುಪತಿ ಯಾವುದೇ ಸಂಭಾವನೆ ಪಡೆದಿಲ್ಲವಂತೆ. ಏಕೆಂದರೆ, ಈ ಕಥೆ ಕೇಳಿ ವಿಜಯ್‍ ಸೇತುಪತಿ ಬಹಳ ಖುಷಿಯಾಗಿದ್ದರು. ಈ ಚಿತ್ರವು ತನ್ನ ವೃತ್ತಿಜೀವನಕ್ಕೆ ದೊಡ್ಡ ಬ್ರೇಕ್‍ ನೀಡಬಹುದು ಎಂದು ನಂಬಿದ್ದರು. ಚಿತ್ರದ ಬಜೆಟ್‍ 20 ಕೋಟಿ ಆದರೆ, ಅವರು ಚಿತ್ರವೊಂದಕ್ಕ ಪಡೆಯುವ ಸಂಭಾವನೆಯೇ 18 ಕೋಟಿಯಷ್ಟಿದೆ. ಅವರಿಗೇ 18 ಕೋಟಿ ಕೊಟ್ಟರೆ, ಚಿತ್ರ ಮಾಡುವುದಾದರೂ ಹೇಗೆ? ಅದೇ ಕಾರಣಕ್ಕೆ ಅವರು ಚಿತ್ರಕ್ಕೆ ಯಾವುದೇ ಸಂಭಾವನೆ ಸ್ವೀಕರಿಸಲಿಲ್ಲವಂತೆ. ಅದರ ಬದಲು, ಚಿತ್ರ ಗೆದ್ದರೆ ಬರುವ ಲಾಭದಲ್ಲಿ ಪರ್ಸಂಟೇಜ್ ಕೇಳಿದ್ದರಂತೆ.

ಹಾಗೆ ನೋಡಿದರೆ, ಇದರಿಂದ ಅವರಿಗೆ ಒಳ್ಳೆಯದೇ ಆಗಿದೆ. ಏಕೆಂದರೆ, ಬರೀ ಸಂಭಾವನೆ ಪಡೆದಿದ್ದರೆ, ಸಣ್ಣ ಮೊತ್ತ ಸಿಗುತ್ತಿತ್ತೇನೋ, ಈಗ ಚಿತ್ರ 100 ಕೋಟಿ ರೂ. ಗಳಿಕೆ ಮಾಡಿರುವುದರಿಂದ, ವಿಜಯ್‍ ಸೇತುಪತಿ ತಮ್ಮ ಸಂಭಾವನೆಗಿಂತ ಹೆಚ್ಚು ಸಂಭಾವನೆ ಪಡೆಯುತ್ತಾರೆ ಎಂದು ಹೇಳಲಾಗುತ್ತಿದೆ.

ಅಂದಹಾಗೆ, ಇದು ವಿಜಯ್‍ ಸೇತುಪತಿ ಅಭಿನಯದ ಈ ವರ್ಷದ ಎರಡನೇ ಯಶಸ್ವಿ ಚಿತ್ರ. ಇದಕ್ಕೂ ಮೊದಲು ವರ್ಷದ ಆರಂಭದಲ್ಲಿ ಬಿಡುಗಡೆಯಾದ ವಿಜಯ್ ಸೇತುಪತಿ ಅಭಿನಯದ ‘ಮೆರ್ರಿ ಕ್ರಿಸ್ಮಸ್‍’ ಸಹ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿತ್ತು. ಈಗ ‘ಮಹಾರಾಜ’ ಚಿತ್ರ ಸಹ ಯಶಸ್ವಿಯಾಗಿದೆ. ಈ ಚಿತ್ರದ ಇದೀಗ ನೆಟ್‍ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿದೆ.

ಈ ಚಿತ್ರವನ್ನು ವೀಕ್ಷಿಸಿರುವ ಬಾಲಿವುಡ್‍ ನಟ ಆಮೀರ್ ಖಾನ್‍, ಚಿತ್ರದ ರೀಮೇಕ್ ಹಕ್ಕುಗಳನ್ನು ಖರೀದಿಸಿದ್ದು, ಅದನ್ನು ಹಿಂದಿಯಲ್ಲಿ ಮಾಡುವ ನಿರೀಕ್ಷೆ ಇದೆ.

ಭೂಮಿಕಾ

Recent Posts

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

3 hours ago

ಕಳಾಹೀನವಾಗಿದೆ ರಾಜೀವ್ ನಗರದ ಈ ಉದ್ಯಾನ!

ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…

3 hours ago

ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಕಾಟ

ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…

3 hours ago

ಕೊಡಗು ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಹತ್ತಾರು ಸಮಸ್ಯೆ

ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…

3 hours ago

3 ದಿನಗಳಲ್ಲಿ ಎಲ್ಲರ ಬಯೋಮೆಟ್ರಿಕ್ ಆಗುತ್ತಾ.?

ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ  ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…

3 hours ago

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

11 hours ago