ಮನರಂಜನೆ

‘ಮಹಾರಾಜ’ ಚಿತ್ರಕ್ಕೆ ವಿಜಯ್‍ ಸೇತುಪತಿ ತೆಗೆದುಕೊಂಡ ಸಂಭಾವನೆ ಎಷ್ಟು?

ವಿಜಯ್‍ ಸೇತುಪತಿ ಅಭಿನಯದ ತಮಿಳು ಚಿತ್ರ ‘ಮಹಾರಾಜ’, ಜೂನ್‍ 14ರಂದು ಬಿಡುಗಡೆಯಾಗಿ ಸೂಪರ್‍ ಹಿಟ್ ಆಗಿದೆ. ಸೋತು ಸುಣ್ಣವಾಗಿದ್ದ ತಮಿಳು ಚಿತ್ರರಂಗಕ್ಕೆ ಆಕ್ಸಿಜನ್ ನೀಡಿದೆ. ಚಿತ್ರವು 100 ಕೋಟಿ ರೂ. ಗಳಿಕೆ ಮಾಡುವ ಮೂಲಕ ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ.

ಎಲ್ಲಾ ಸರಿ, ಈ ಚಿತ್ರಕ್ಕೆ ನಾಯಕ ವಿಜಯ್‍ ಸೇತುಪತಿ ತೆಗೆದುಕೊಂಡ ಸಂಭಾವನೆ ಎಷ್ಟು? ಇಂಥದ್ದೊಂದು ಪ್ರಶ್ನೆ ಇದೀಗ ಎಲ್ಲೆಡೆ ಕೇಳಿ ಬರುತ್ತಿದೆ. ಅದಕ್ಕೆ ಕಾರಣವೂ ಇದೆ. ಅದೇನೆಂದರೆ, ಚಿತ್ರಕ್ಕೆ ವಿಜಯ್ ಸೇತುಪತಿ ಒಂದು ರೂಪಾಯಿ ಸಹ ಸಂಭಾವನೆ ಪಡೆದಿಲ್ಲವಂತೆ.

ಹೌದು, ಮೂಲಗಳ ಪ್ರಕಾರ, ಚಿತ್ರಕ್ಕೆ 20 ಕೋಟಿ ರೂ. ಬಜೆಟ್‍ ಎತ್ತಿಡಲಾಗಿತ್ತಂತೆ. ಅಷ್ಟರಲ್ಲಿ ಮುಗಿಸುವ ಅಗತ್ಯವಿದ್ದರಿಂದ, ವಿಜಯ್‍ ಸೇತುಪತಿ ಯಾವುದೇ ಸಂಭಾವನೆ ಪಡೆದಿಲ್ಲವಂತೆ. ಏಕೆಂದರೆ, ಈ ಕಥೆ ಕೇಳಿ ವಿಜಯ್‍ ಸೇತುಪತಿ ಬಹಳ ಖುಷಿಯಾಗಿದ್ದರು. ಈ ಚಿತ್ರವು ತನ್ನ ವೃತ್ತಿಜೀವನಕ್ಕೆ ದೊಡ್ಡ ಬ್ರೇಕ್‍ ನೀಡಬಹುದು ಎಂದು ನಂಬಿದ್ದರು. ಚಿತ್ರದ ಬಜೆಟ್‍ 20 ಕೋಟಿ ಆದರೆ, ಅವರು ಚಿತ್ರವೊಂದಕ್ಕ ಪಡೆಯುವ ಸಂಭಾವನೆಯೇ 18 ಕೋಟಿಯಷ್ಟಿದೆ. ಅವರಿಗೇ 18 ಕೋಟಿ ಕೊಟ್ಟರೆ, ಚಿತ್ರ ಮಾಡುವುದಾದರೂ ಹೇಗೆ? ಅದೇ ಕಾರಣಕ್ಕೆ ಅವರು ಚಿತ್ರಕ್ಕೆ ಯಾವುದೇ ಸಂಭಾವನೆ ಸ್ವೀಕರಿಸಲಿಲ್ಲವಂತೆ. ಅದರ ಬದಲು, ಚಿತ್ರ ಗೆದ್ದರೆ ಬರುವ ಲಾಭದಲ್ಲಿ ಪರ್ಸಂಟೇಜ್ ಕೇಳಿದ್ದರಂತೆ.

ಹಾಗೆ ನೋಡಿದರೆ, ಇದರಿಂದ ಅವರಿಗೆ ಒಳ್ಳೆಯದೇ ಆಗಿದೆ. ಏಕೆಂದರೆ, ಬರೀ ಸಂಭಾವನೆ ಪಡೆದಿದ್ದರೆ, ಸಣ್ಣ ಮೊತ್ತ ಸಿಗುತ್ತಿತ್ತೇನೋ, ಈಗ ಚಿತ್ರ 100 ಕೋಟಿ ರೂ. ಗಳಿಕೆ ಮಾಡಿರುವುದರಿಂದ, ವಿಜಯ್‍ ಸೇತುಪತಿ ತಮ್ಮ ಸಂಭಾವನೆಗಿಂತ ಹೆಚ್ಚು ಸಂಭಾವನೆ ಪಡೆಯುತ್ತಾರೆ ಎಂದು ಹೇಳಲಾಗುತ್ತಿದೆ.

ಅಂದಹಾಗೆ, ಇದು ವಿಜಯ್‍ ಸೇತುಪತಿ ಅಭಿನಯದ ಈ ವರ್ಷದ ಎರಡನೇ ಯಶಸ್ವಿ ಚಿತ್ರ. ಇದಕ್ಕೂ ಮೊದಲು ವರ್ಷದ ಆರಂಭದಲ್ಲಿ ಬಿಡುಗಡೆಯಾದ ವಿಜಯ್ ಸೇತುಪತಿ ಅಭಿನಯದ ‘ಮೆರ್ರಿ ಕ್ರಿಸ್ಮಸ್‍’ ಸಹ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿತ್ತು. ಈಗ ‘ಮಹಾರಾಜ’ ಚಿತ್ರ ಸಹ ಯಶಸ್ವಿಯಾಗಿದೆ. ಈ ಚಿತ್ರದ ಇದೀಗ ನೆಟ್‍ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿದೆ.

ಈ ಚಿತ್ರವನ್ನು ವೀಕ್ಷಿಸಿರುವ ಬಾಲಿವುಡ್‍ ನಟ ಆಮೀರ್ ಖಾನ್‍, ಚಿತ್ರದ ರೀಮೇಕ್ ಹಕ್ಕುಗಳನ್ನು ಖರೀದಿಸಿದ್ದು, ಅದನ್ನು ಹಿಂದಿಯಲ್ಲಿ ಮಾಡುವ ನಿರೀಕ್ಷೆ ಇದೆ.

ಭೂಮಿಕಾ

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago