ಮನರಂಜನೆ

‘ಮಹಾರಾಜ’ ಚಿತ್ರಕ್ಕೆ ವಿಜಯ್‍ ಸೇತುಪತಿ ತೆಗೆದುಕೊಂಡ ಸಂಭಾವನೆ ಎಷ್ಟು?

ವಿಜಯ್‍ ಸೇತುಪತಿ ಅಭಿನಯದ ತಮಿಳು ಚಿತ್ರ ‘ಮಹಾರಾಜ’, ಜೂನ್‍ 14ರಂದು ಬಿಡುಗಡೆಯಾಗಿ ಸೂಪರ್‍ ಹಿಟ್ ಆಗಿದೆ. ಸೋತು ಸುಣ್ಣವಾಗಿದ್ದ ತಮಿಳು ಚಿತ್ರರಂಗಕ್ಕೆ ಆಕ್ಸಿಜನ್ ನೀಡಿದೆ. ಚಿತ್ರವು 100 ಕೋಟಿ ರೂ. ಗಳಿಕೆ ಮಾಡುವ ಮೂಲಕ ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ.

ಎಲ್ಲಾ ಸರಿ, ಈ ಚಿತ್ರಕ್ಕೆ ನಾಯಕ ವಿಜಯ್‍ ಸೇತುಪತಿ ತೆಗೆದುಕೊಂಡ ಸಂಭಾವನೆ ಎಷ್ಟು? ಇಂಥದ್ದೊಂದು ಪ್ರಶ್ನೆ ಇದೀಗ ಎಲ್ಲೆಡೆ ಕೇಳಿ ಬರುತ್ತಿದೆ. ಅದಕ್ಕೆ ಕಾರಣವೂ ಇದೆ. ಅದೇನೆಂದರೆ, ಚಿತ್ರಕ್ಕೆ ವಿಜಯ್ ಸೇತುಪತಿ ಒಂದು ರೂಪಾಯಿ ಸಹ ಸಂಭಾವನೆ ಪಡೆದಿಲ್ಲವಂತೆ.

ಹೌದು, ಮೂಲಗಳ ಪ್ರಕಾರ, ಚಿತ್ರಕ್ಕೆ 20 ಕೋಟಿ ರೂ. ಬಜೆಟ್‍ ಎತ್ತಿಡಲಾಗಿತ್ತಂತೆ. ಅಷ್ಟರಲ್ಲಿ ಮುಗಿಸುವ ಅಗತ್ಯವಿದ್ದರಿಂದ, ವಿಜಯ್‍ ಸೇತುಪತಿ ಯಾವುದೇ ಸಂಭಾವನೆ ಪಡೆದಿಲ್ಲವಂತೆ. ಏಕೆಂದರೆ, ಈ ಕಥೆ ಕೇಳಿ ವಿಜಯ್‍ ಸೇತುಪತಿ ಬಹಳ ಖುಷಿಯಾಗಿದ್ದರು. ಈ ಚಿತ್ರವು ತನ್ನ ವೃತ್ತಿಜೀವನಕ್ಕೆ ದೊಡ್ಡ ಬ್ರೇಕ್‍ ನೀಡಬಹುದು ಎಂದು ನಂಬಿದ್ದರು. ಚಿತ್ರದ ಬಜೆಟ್‍ 20 ಕೋಟಿ ಆದರೆ, ಅವರು ಚಿತ್ರವೊಂದಕ್ಕ ಪಡೆಯುವ ಸಂಭಾವನೆಯೇ 18 ಕೋಟಿಯಷ್ಟಿದೆ. ಅವರಿಗೇ 18 ಕೋಟಿ ಕೊಟ್ಟರೆ, ಚಿತ್ರ ಮಾಡುವುದಾದರೂ ಹೇಗೆ? ಅದೇ ಕಾರಣಕ್ಕೆ ಅವರು ಚಿತ್ರಕ್ಕೆ ಯಾವುದೇ ಸಂಭಾವನೆ ಸ್ವೀಕರಿಸಲಿಲ್ಲವಂತೆ. ಅದರ ಬದಲು, ಚಿತ್ರ ಗೆದ್ದರೆ ಬರುವ ಲಾಭದಲ್ಲಿ ಪರ್ಸಂಟೇಜ್ ಕೇಳಿದ್ದರಂತೆ.

ಹಾಗೆ ನೋಡಿದರೆ, ಇದರಿಂದ ಅವರಿಗೆ ಒಳ್ಳೆಯದೇ ಆಗಿದೆ. ಏಕೆಂದರೆ, ಬರೀ ಸಂಭಾವನೆ ಪಡೆದಿದ್ದರೆ, ಸಣ್ಣ ಮೊತ್ತ ಸಿಗುತ್ತಿತ್ತೇನೋ, ಈಗ ಚಿತ್ರ 100 ಕೋಟಿ ರೂ. ಗಳಿಕೆ ಮಾಡಿರುವುದರಿಂದ, ವಿಜಯ್‍ ಸೇತುಪತಿ ತಮ್ಮ ಸಂಭಾವನೆಗಿಂತ ಹೆಚ್ಚು ಸಂಭಾವನೆ ಪಡೆಯುತ್ತಾರೆ ಎಂದು ಹೇಳಲಾಗುತ್ತಿದೆ.

ಅಂದಹಾಗೆ, ಇದು ವಿಜಯ್‍ ಸೇತುಪತಿ ಅಭಿನಯದ ಈ ವರ್ಷದ ಎರಡನೇ ಯಶಸ್ವಿ ಚಿತ್ರ. ಇದಕ್ಕೂ ಮೊದಲು ವರ್ಷದ ಆರಂಭದಲ್ಲಿ ಬಿಡುಗಡೆಯಾದ ವಿಜಯ್ ಸೇತುಪತಿ ಅಭಿನಯದ ‘ಮೆರ್ರಿ ಕ್ರಿಸ್ಮಸ್‍’ ಸಹ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿತ್ತು. ಈಗ ‘ಮಹಾರಾಜ’ ಚಿತ್ರ ಸಹ ಯಶಸ್ವಿಯಾಗಿದೆ. ಈ ಚಿತ್ರದ ಇದೀಗ ನೆಟ್‍ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಿದೆ.

ಈ ಚಿತ್ರವನ್ನು ವೀಕ್ಷಿಸಿರುವ ಬಾಲಿವುಡ್‍ ನಟ ಆಮೀರ್ ಖಾನ್‍, ಚಿತ್ರದ ರೀಮೇಕ್ ಹಕ್ಕುಗಳನ್ನು ಖರೀದಿಸಿದ್ದು, ಅದನ್ನು ಹಿಂದಿಯಲ್ಲಿ ಮಾಡುವ ನಿರೀಕ್ಷೆ ಇದೆ.

ಭೂಮಿಕಾ

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

2 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

2 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

2 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

2 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

3 hours ago