ಮನರಂಜನೆ

ದಳಪತಿ ವಿಜಯ್ 69ನೇ ಚಿತ್ರದ ಫಸ್ಟ್ ಲುಕ್ ರಿಲೀಸ್

 

ಹೆಚ್. ವಿನೋದ್ ನಿರ್ದೇಶನದ ದಳಪತಿ ವಿಜಯ್ ಅವರ 69ನೇ ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಬಿಡುಗಡೆಯಾಗಿದೆ

ತಮಿಳು ಸಿನಿಮಾ ಬಾಕ್ಸ್ ಆಫೀಸ್ ಕಿಂಗ್ ವಿಜಯ್ ಸತತ ಹಿಟ್‌ಗಳೊಂದಿಗೆ ಮುನ್ನುಗ್ಗುತ್ತಿದ್ದಾರೆ. ಹೆಚ್. ವಿನೋದ್ ನಿರ್ದೇಶನದಲ್ಲಿ ದಳಪತಿ 69 ಚಿತ್ರ ನಿರ್ಮಾಣವಾಗುತ್ತಿದೆ. ಸಿನಿಮಾದಿಂದ ನಿವೃತ್ತಿ ಹೊಂದುವ ಮುನ್ನ ವಿಜಯ್ ನಟಿಸಲಿರುವ ಕೊನೆಯ ಚಿತ್ರ ಇದಾಗಿದೆ.

ಬೀಸ್ಟ್ ಸಿನಿಮಾದಲ್ಲಿ ವಿಜಯ್ ಜೊತೆ ನಟಿಸಿದ್ದ ಪೂಜಾ ಹೆಗ್ಡೆ ನಾಯಕಿ. ಬಾಲಿವುಡ್ ನಟ ಬಾಬಿ ಡಿಯೋಲ್ ಖಳನಾಯಕನಾಗಿ ನಟಿಸುತ್ತಿದ್ದಾರೆ. ಮಮಿತಾ ಬೈಜು, ಡಿಜೆ ಅರುಣಾಚಲಂ ಮುಂತಾದ ತಾರಾಗಣ ಕೂಡ ಚಿತ್ರದಲ್ಲಿದೆ. ಅನಿರುದ್ಧ್ ಸಂಗೀತ ನೀಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಈ ಚಿತ್ರವನ್ನು ಬೃಹತ್ ಬಜೆಟ್‌ನಲ್ಲಿ ನಿರ್ಮಿಸುತ್ತಿದೆ.

ಸತ್ಯನ್ ಸೂರ್ಯನ್ ಛಾಯಾಗ್ರಹಣ, ಅನಲ್ ಅರಸು ಸಾಹಸ, ಪ್ರದೀಪ್ ಇ ರಾಘವ್ ಸಂಕಲನ, ಸೆಲ್ವಕುಮಾರ್ (ಕಲಾ ನಿರ್ದೇಶನ) ಮುಂತಾದ ಬಲಿಷ್ಠ ತಾಂತ್ರಿಕ ತಂಡದೊಂದಿಗೆ ದಳಪತಿ 69 ಚಿತ್ರೀಕರಣ ಭರದಿಂದ ಸಾಗಿದೆ. ಈ ಚಿತ್ರ ಈ ವರ್ಷ ಅಕ್ಟೋಬರ್‌ನಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾ ನಂತರ ವಿಜಯ್ ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ.

ಗಣರಾಜ್ಯೋತ್ಸವದಂದು ದಳಪತಿ 69 ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಚಿತ್ರಕ್ಕೆ ನಾಲೈಯ ತೀರ್ಪು ಎಂದು ಹೆಸರಿಡಲಾಗಿದೆ. ಪೋಸ್ಟರ್‌ನಲ್ಲಿ ವಿಜಯ್ ತಮ್ಮ ಹಿಂದೆ ಇರುವ ಜನರೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವಂತೆ ತೋರಿಸಲಾಗಿದೆ. ವಿಜಯ್ ಈ ಚಿತ್ರದಲ್ಲಿ ಸೇನಾಧಿಕಾರಿಯಾಗಿ ನಟಿಸುತ್ತಿದ್ದಾರೆ ಎನ್ನಲಾಗಿದೆ.

andolana

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

1 hour ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

1 hour ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

2 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

2 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

2 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

2 hours ago