ಮನರಂಜನೆ

ದಳಪತಿ ವಿಜಯ್ 69ನೇ ಚಿತ್ರದ ಫಸ್ಟ್ ಲುಕ್ ರಿಲೀಸ್

 

ಹೆಚ್. ವಿನೋದ್ ನಿರ್ದೇಶನದ ದಳಪತಿ ವಿಜಯ್ ಅವರ 69ನೇ ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಬಿಡುಗಡೆಯಾಗಿದೆ

ತಮಿಳು ಸಿನಿಮಾ ಬಾಕ್ಸ್ ಆಫೀಸ್ ಕಿಂಗ್ ವಿಜಯ್ ಸತತ ಹಿಟ್‌ಗಳೊಂದಿಗೆ ಮುನ್ನುಗ್ಗುತ್ತಿದ್ದಾರೆ. ಹೆಚ್. ವಿನೋದ್ ನಿರ್ದೇಶನದಲ್ಲಿ ದಳಪತಿ 69 ಚಿತ್ರ ನಿರ್ಮಾಣವಾಗುತ್ತಿದೆ. ಸಿನಿಮಾದಿಂದ ನಿವೃತ್ತಿ ಹೊಂದುವ ಮುನ್ನ ವಿಜಯ್ ನಟಿಸಲಿರುವ ಕೊನೆಯ ಚಿತ್ರ ಇದಾಗಿದೆ.

ಬೀಸ್ಟ್ ಸಿನಿಮಾದಲ್ಲಿ ವಿಜಯ್ ಜೊತೆ ನಟಿಸಿದ್ದ ಪೂಜಾ ಹೆಗ್ಡೆ ನಾಯಕಿ. ಬಾಲಿವುಡ್ ನಟ ಬಾಬಿ ಡಿಯೋಲ್ ಖಳನಾಯಕನಾಗಿ ನಟಿಸುತ್ತಿದ್ದಾರೆ. ಮಮಿತಾ ಬೈಜು, ಡಿಜೆ ಅರುಣಾಚಲಂ ಮುಂತಾದ ತಾರಾಗಣ ಕೂಡ ಚಿತ್ರದಲ್ಲಿದೆ. ಅನಿರುದ್ಧ್ ಸಂಗೀತ ನೀಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಈ ಚಿತ್ರವನ್ನು ಬೃಹತ್ ಬಜೆಟ್‌ನಲ್ಲಿ ನಿರ್ಮಿಸುತ್ತಿದೆ.

ಸತ್ಯನ್ ಸೂರ್ಯನ್ ಛಾಯಾಗ್ರಹಣ, ಅನಲ್ ಅರಸು ಸಾಹಸ, ಪ್ರದೀಪ್ ಇ ರಾಘವ್ ಸಂಕಲನ, ಸೆಲ್ವಕುಮಾರ್ (ಕಲಾ ನಿರ್ದೇಶನ) ಮುಂತಾದ ಬಲಿಷ್ಠ ತಾಂತ್ರಿಕ ತಂಡದೊಂದಿಗೆ ದಳಪತಿ 69 ಚಿತ್ರೀಕರಣ ಭರದಿಂದ ಸಾಗಿದೆ. ಈ ಚಿತ್ರ ಈ ವರ್ಷ ಅಕ್ಟೋಬರ್‌ನಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾ ನಂತರ ವಿಜಯ್ ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ.

ಗಣರಾಜ್ಯೋತ್ಸವದಂದು ದಳಪತಿ 69 ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಚಿತ್ರಕ್ಕೆ ನಾಲೈಯ ತೀರ್ಪು ಎಂದು ಹೆಸರಿಡಲಾಗಿದೆ. ಪೋಸ್ಟರ್‌ನಲ್ಲಿ ವಿಜಯ್ ತಮ್ಮ ಹಿಂದೆ ಇರುವ ಜನರೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವಂತೆ ತೋರಿಸಲಾಗಿದೆ. ವಿಜಯ್ ಈ ಚಿತ್ರದಲ್ಲಿ ಸೇನಾಧಿಕಾರಿಯಾಗಿ ನಟಿಸುತ್ತಿದ್ದಾರೆ ಎನ್ನಲಾಗಿದೆ.

andolana

Recent Posts

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

3 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

3 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

3 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…

3 hours ago

114 ಪ್ರದೇಶಗಳಲ್ಲಿ ಪ್ರವಾಹ, ಭೂಕುಸಿತ ಅಪಾಯ

ನವೀನ್ ಡಿಸೋಜ ಮಳೆ ಕಡಿಮೆಯಿದ್ದರೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ; ಅಪಾಯಕಾರಿ ಪ್ರದೇಶಗಳ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜುಲೈ ಆರಂಭದಿಂದ…

3 hours ago

ಟಿಎಪಿಸಿಎಂಎಸ್ ಚುನಾವಣೆಗೆ ಪಕ್ಷಗಳಿಂದ ಭರ್ಜರಿ ಸಿದ್ಧತೆ

ಭೇರ್ಯ ಮಹೇಶ್ ಕೆ.ಆರ್.ನಗರ: ಜು.೨೬ರಂದು ಚುನಾವಣೆ; ನಾಮಪತ್ರ ಸಲ್ಲಿಕೆ ಆರಂಭ  ಕೆ.ಆರ್.ನಗರ: ತಾಲ್ಲೂಕು ಕೃಷಿ ಉತ್ಪನ್ನಗಳ ಸಹಕಾರ ಮಾರಾಟ ಸಂಘದ…

3 hours ago