ಮನರಂಜನೆ

ಕಲರ್ಸ್ ಕನ್ನಡಕ್ಕೆ ವಿಜಯ್‍ ಸೂರ್ಯ; ನಿರ್ದೇಶನಕ್ಕೆ ರಕ್ಷ್ ರಾಮ್‍

ಸ್ಟಾರ್‍ ಸುವರ್ಣದಲ್ಲಿ ಪ್ರಸಾರವಾದ ‘ನಮ್ಮ ಲಚ್ಚಿ’ ಧಾರಾವಾಹಿಯಲ್ಲಿ ನಟಿಸಿದ್ದ ವಿಜಯ್‍ ಸೂರ್ಯ, ಇದೀಗ ಿನ್ನೊಂದು ಹೊಸ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ಆ ಧಾರಾವಾಹಿ ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಕಲರ್ಸ ಕನ್ನಡದಲ್ಲಿ ಪ್ರಸಾರವಾಗಲಿದೆ. ಅದೇ ‘ದೃಷ್ಟಿಬೊಟ್ಟು’.

ಈ ಹಿಂದೆ ಕಲರ್ಸ್ ಕನ್ನಡ ವಾಹಿನಿಯಲ್‍ಲಿ ‘ಅಗ್ನಿ ಸಾಕ್ಷಿ’ ಎಂಬ ಹಿಟ್‍ ಧಾರಾವಾಹಿಯಲ್ಲಿ ನಟಿಸಿದ್ದ ವಿಜಯ್‍ ಸೂರ್ಯ, ಆ ನಂತರ ಬೇರೆ ಚಾನಲ್‍ಗಳ ಧಾರಾವಾಹಿಗಳಲ್ಲಿ ಬ್ಯುಸಿಯಾಗಿದ್ದರು. ಈಗ ಬಹಳ ದಿನಗಳ ನಂತರ ಅವರು ಕಲರ್ಸ್ ಕನ್ನಡಕ್ಕೆ ವಾಪಸ್ಸಾಗಿದ್ದಾರೆ. ಈ ಬಾರಿ ಅವರು ‘ದೃಷ್ಟಿಬೊಟ್ಟು’ ಎಂಬ ಧಾರಾವಾಹಿಯಲ್ಲಿ ನಟಿಸಿದ್ದು, ಈ ಧಾರಾವಾಹಿಯನ್ನು ಮತ್ತೊಮ್ಮ ನಟ ರಕ್ಷ್ ರಾಮ್‍ ನಿರ್ಮಿಸುವುದರ ಜೊತಗೆ ಕ್ರಿಯೇಟಿವ್‍ ಡೈರೆಕ್ಟರ್‍ ಆಗಿ ಕೆಲಸ ಮಾಡುತ್ತಿದ್ದಾರೆ.

ಹೌದು, ‘ಬಹದ್ದೂರ್’ ಚೇತನ್‍ ಕುಮಾರ್‍ ನಿರ್ದೇಶನದ ‘ಬರ್ಮ’ ಚಿತ್ರದಲ್ಲಿ ಹೀರೋ ಆಗಿ ನಟಿಸುತ್ತಿರುವ ರಕ್ಷ್, ಅದರ ಜೊತೆಗೆ ಈ ಧಾರಾವಾಹಿಯನ್ನು ಮುನ್ನಡೆಸುವ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಅವರ ಪತ್ನಿ ಅನುಷಾ ಶಿವಪ್ರಸಾದ್‍, ಶ್ರೀ ಸಾಯಿ ಆಂಜನೇಯ ಕಂಪನಿ ಸಂಸ್ಥೆಯಡಿ ನಿರ್ಮಿಸುತ್ತಿದ್ದು, ಕುಮಾರ್‍ ಕೆರೆಗೋಡು ನಿರ್ದೇಶನ ಮಾಡುತ್ತಿದ್ದಾರೆ.

ಎರಡು ವಿಭಿನ್ನ ಕೌಟುಂಬಿಕ ಹಿನ್ನೆಲೆಗಳಿಂದ ಬಂದ ದೃಷ್ಟಿ ಎಂಬ ಹುಡುಗಿ ಹಾಗೂ ದತ್ತ ಶ್ರೀರಾಮ್ ಪಾಟೀಲ್ ಎಂಬ ಹುಡುಗನ ಬದುಕುಗಳು ಸಂಧಿಸಿದಾಗ ನಡೆಯುವ ಕಥೆಯೇ ಈ ‘ದೃಷ್ಟಿಬೊಟ್ಟು’. ದೃಷ್ಟಿಯ ಪಾಲಿಗೆ ರೂಪ ಅನ್ನುವುದೇ ಶಾಪ. ತನ್ನ ರೂಪವನ್ನೇ ಬದಲಾಯಿಸಿಕೊಂಡು ಬದುಕುತ್ತಿರುವ ಅವಳಿಗೆ ತನ್ನ ಸೋದರಿಯನ್ನು ಮರಳಿ ಮನೆಗೆ ಕರೆತಂದು ಕುಟುಂಬವನ್ನು ಒಂದು ಮಾಡಬೇಕೆಂಬ ಗುರಿ. ಮೊದಲು ಮೆಕಾನಿಕ್ ಆಗಿ ಈಗ ರೌಡಿಯಾಗಿರುವ ದತ್ತ, ಸುಂದರವಾಗಿರುವ ಹೆಣ್ಣುಗಳನ್ನ ಕಂಡರೆ ಉರಿದು ಬೀಳುತ್ತಾನೆ. ದುರುಳ ಪೋಲೀಸನೊಬ್ಬನ ಕೈಗೆ ಸಿಕ್ಕ ದೃಷ್ಟಿ ಅವನ ಕಿರುಕುಳಕ್ಕೆ ಸಿಕ್ಕು ಒದ್ದಾಡುತ್ತಿರುವಾಗ, ದತ್ತನ ಪ್ರವೇಶವಾಗುತ್ತದೆ. ಆಮೇಲೆ ಏನಾಗುತ್ತದೆ ಎಂದು ಗೊತ್ತಾಗಬೇಕಿದ್ದರೆ ‘ದೃಷ್ಟಿಬೊಟ್ಟು’ ನೋಡಬೇಕು.

‘ದೃಷ್ಟಿಬೊಟ್ಟು’ ಧಾರಾವಾಹಿಯಲ್ಲಿ ವಿಜಯ್‍ ಲಲಿತಾ ಸೂರ್ಯ ಜೊತೆಗೆ ಅರ್ಪಿತಾ ಮೋಹಿತೆ, ದೀಪಶ್ರೀ ಹರೀಶ್‍, ಅಶೋಕ್‍ ಹೆಗ್ಡೆ, ರಾಘು ಶಿವಮೊಗ್ಗ, ತನ್ಮಯ ಕಶ್ಯಪ್‍ ಮುಂತಾದವರು ನಟಿಸುತ್ತಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ.

ಭೂಮಿಕಾ

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago