ಮನರಂಜನೆ

ಕಲರ್ಸ್ ಕನ್ನಡಕ್ಕೆ ವಿಜಯ್‍ ಸೂರ್ಯ; ನಿರ್ದೇಶನಕ್ಕೆ ರಕ್ಷ್ ರಾಮ್‍

ಸ್ಟಾರ್‍ ಸುವರ್ಣದಲ್ಲಿ ಪ್ರಸಾರವಾದ ‘ನಮ್ಮ ಲಚ್ಚಿ’ ಧಾರಾವಾಹಿಯಲ್ಲಿ ನಟಿಸಿದ್ದ ವಿಜಯ್‍ ಸೂರ್ಯ, ಇದೀಗ ಿನ್ನೊಂದು ಹೊಸ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ಆ ಧಾರಾವಾಹಿ ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಕಲರ್ಸ ಕನ್ನಡದಲ್ಲಿ ಪ್ರಸಾರವಾಗಲಿದೆ. ಅದೇ ‘ದೃಷ್ಟಿಬೊಟ್ಟು’.

ಈ ಹಿಂದೆ ಕಲರ್ಸ್ ಕನ್ನಡ ವಾಹಿನಿಯಲ್‍ಲಿ ‘ಅಗ್ನಿ ಸಾಕ್ಷಿ’ ಎಂಬ ಹಿಟ್‍ ಧಾರಾವಾಹಿಯಲ್ಲಿ ನಟಿಸಿದ್ದ ವಿಜಯ್‍ ಸೂರ್ಯ, ಆ ನಂತರ ಬೇರೆ ಚಾನಲ್‍ಗಳ ಧಾರಾವಾಹಿಗಳಲ್ಲಿ ಬ್ಯುಸಿಯಾಗಿದ್ದರು. ಈಗ ಬಹಳ ದಿನಗಳ ನಂತರ ಅವರು ಕಲರ್ಸ್ ಕನ್ನಡಕ್ಕೆ ವಾಪಸ್ಸಾಗಿದ್ದಾರೆ. ಈ ಬಾರಿ ಅವರು ‘ದೃಷ್ಟಿಬೊಟ್ಟು’ ಎಂಬ ಧಾರಾವಾಹಿಯಲ್ಲಿ ನಟಿಸಿದ್ದು, ಈ ಧಾರಾವಾಹಿಯನ್ನು ಮತ್ತೊಮ್ಮ ನಟ ರಕ್ಷ್ ರಾಮ್‍ ನಿರ್ಮಿಸುವುದರ ಜೊತಗೆ ಕ್ರಿಯೇಟಿವ್‍ ಡೈರೆಕ್ಟರ್‍ ಆಗಿ ಕೆಲಸ ಮಾಡುತ್ತಿದ್ದಾರೆ.

ಹೌದು, ‘ಬಹದ್ದೂರ್’ ಚೇತನ್‍ ಕುಮಾರ್‍ ನಿರ್ದೇಶನದ ‘ಬರ್ಮ’ ಚಿತ್ರದಲ್ಲಿ ಹೀರೋ ಆಗಿ ನಟಿಸುತ್ತಿರುವ ರಕ್ಷ್, ಅದರ ಜೊತೆಗೆ ಈ ಧಾರಾವಾಹಿಯನ್ನು ಮುನ್ನಡೆಸುವ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಅವರ ಪತ್ನಿ ಅನುಷಾ ಶಿವಪ್ರಸಾದ್‍, ಶ್ರೀ ಸಾಯಿ ಆಂಜನೇಯ ಕಂಪನಿ ಸಂಸ್ಥೆಯಡಿ ನಿರ್ಮಿಸುತ್ತಿದ್ದು, ಕುಮಾರ್‍ ಕೆರೆಗೋಡು ನಿರ್ದೇಶನ ಮಾಡುತ್ತಿದ್ದಾರೆ.

ಎರಡು ವಿಭಿನ್ನ ಕೌಟುಂಬಿಕ ಹಿನ್ನೆಲೆಗಳಿಂದ ಬಂದ ದೃಷ್ಟಿ ಎಂಬ ಹುಡುಗಿ ಹಾಗೂ ದತ್ತ ಶ್ರೀರಾಮ್ ಪಾಟೀಲ್ ಎಂಬ ಹುಡುಗನ ಬದುಕುಗಳು ಸಂಧಿಸಿದಾಗ ನಡೆಯುವ ಕಥೆಯೇ ಈ ‘ದೃಷ್ಟಿಬೊಟ್ಟು’. ದೃಷ್ಟಿಯ ಪಾಲಿಗೆ ರೂಪ ಅನ್ನುವುದೇ ಶಾಪ. ತನ್ನ ರೂಪವನ್ನೇ ಬದಲಾಯಿಸಿಕೊಂಡು ಬದುಕುತ್ತಿರುವ ಅವಳಿಗೆ ತನ್ನ ಸೋದರಿಯನ್ನು ಮರಳಿ ಮನೆಗೆ ಕರೆತಂದು ಕುಟುಂಬವನ್ನು ಒಂದು ಮಾಡಬೇಕೆಂಬ ಗುರಿ. ಮೊದಲು ಮೆಕಾನಿಕ್ ಆಗಿ ಈಗ ರೌಡಿಯಾಗಿರುವ ದತ್ತ, ಸುಂದರವಾಗಿರುವ ಹೆಣ್ಣುಗಳನ್ನ ಕಂಡರೆ ಉರಿದು ಬೀಳುತ್ತಾನೆ. ದುರುಳ ಪೋಲೀಸನೊಬ್ಬನ ಕೈಗೆ ಸಿಕ್ಕ ದೃಷ್ಟಿ ಅವನ ಕಿರುಕುಳಕ್ಕೆ ಸಿಕ್ಕು ಒದ್ದಾಡುತ್ತಿರುವಾಗ, ದತ್ತನ ಪ್ರವೇಶವಾಗುತ್ತದೆ. ಆಮೇಲೆ ಏನಾಗುತ್ತದೆ ಎಂದು ಗೊತ್ತಾಗಬೇಕಿದ್ದರೆ ‘ದೃಷ್ಟಿಬೊಟ್ಟು’ ನೋಡಬೇಕು.

‘ದೃಷ್ಟಿಬೊಟ್ಟು’ ಧಾರಾವಾಹಿಯಲ್ಲಿ ವಿಜಯ್‍ ಲಲಿತಾ ಸೂರ್ಯ ಜೊತೆಗೆ ಅರ್ಪಿತಾ ಮೋಹಿತೆ, ದೀಪಶ್ರೀ ಹರೀಶ್‍, ಅಶೋಕ್‍ ಹೆಗ್ಡೆ, ರಾಘು ಶಿವಮೊಗ್ಗ, ತನ್ಮಯ ಕಶ್ಯಪ್‍ ಮುಂತಾದವರು ನಟಿಸುತ್ತಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ.

ಭೂಮಿಕಾ

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

2 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

3 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

3 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

4 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

5 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

6 hours ago