ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ರನ್ನು ನೋಡಲು 4ನೇ ಬಾರಿ ಪತ್ನಿ ವಿಜಯಲಕ್ಷ್ಮೀ ಬಂದಿದ್ದರು. ಅತ್ತಿಗೆ ಜೊತೆ ತಮ್ಮ ದಿನಕರ್ ತೂಗುದೀಪ್ ಕೂಡ ಜೈಲಿಗೆ ಭೇಟಿ ನೀಡಿದ್ದರು.
ದರ್ಶನ್ ಜೈಲಿಗೆ ಹೋದ ಬಳಿಕ ಪ್ರಕರಣದ ಹೋರಾಟದ ಜವಾಬ್ದಾರಿಯನ್ನು ಪತ್ನಿ ವಿಜಯಲಕ್ಷ್ಮೀ ಅವರೇ ತೆಗೆದುಕೊಂಡಿದ್ದು, ದರ್ಶನ್ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಪ್ರಕರಣದ ಹೋರಾಟದ ಕುರಿತು ಚರ್ಚಿಸಲು ಮತ್ತು ದರ್ಶನ್ರನ್ನು ನೋಡಲು ವಿಜಯಲಕ್ಷ್ಮೀ ಮತ್ತು ದಿನಕರ್ ಜೊತೆ ಅಕ್ಕನ ಮಗ ಚಂದನ್ ಕೂಡ ಜೈಲಿಗೆ ಭೇಟಿ ನೀಡಿದ್ದರು.
ಜೈಲಿನಲ್ಲಿ ಪ್ರಕರಣದ ಹೋರಾಟದ ಬಗ್ಗೆ ದರ್ಶನ್ ಜೊತೆ ಸುದೀರ್ಘ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ನಟ ದರ್ಶನ್ಗೆ ಯಾವಾಗ ಜಾಮೀನು ಸಿಗುತ್ತೆ ಎಂಬುದೇ ಅಭಿಮಾನಿಗಳಿಗೆ ಕಾಡುವ ಪ್ರಶ್ನೆಯಾಗಿದೆ.
ಇನ್ನೂ ಜೈಲು ನಿಯಮಗಳ ಪ್ರಕಾರ, ಒಂದು ವಾರದಲ್ಲಿ ಮೂವರಿಗೆ ಮಾತ್ರ ಭೇಟಿ ಮಾಡಲು ಅವಕಾಶ ಇರುತ್ತದೆ. ಈ ಹಿನ್ನೆಲೆಯಲ್ಲಿ ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮೀ, ದರ್ಶನ್ ಸಹೋದರ ದಿನಕರ್ ಹಾಗೂ ದರ್ಶನ್ ಅಕ್ಕನ ಮಗ ಚಂದನ್ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ, ಧೈರ್ಯ ಹೇಳಿದ್ದಾರೆ.
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…