ಮನರಂಜನೆ

ದರ್ಶನ್‌ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್‌ ತೂಗುದೀಪ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ರನ್ನು ನೋಡಲು 4ನೇ ಬಾರಿ ಪತ್ನಿ ವಿಜಯಲಕ್ಷ್ಮೀ ಬಂದಿದ್ದರು. ಅತ್ತಿಗೆ ಜೊತೆ ತಮ್ಮ ದಿನಕರ್‌ ತೂಗುದೀಪ್‌ ಕೂಡ ಜೈಲಿಗೆ ಭೇಟಿ ನೀಡಿದ್ದರು.

ದರ್ಶನ್ ಜೈಲಿಗೆ ಹೋದ ಬಳಿಕ ಪ್ರಕರಣದ ಹೋರಾಟದ ಜವಾಬ್ದಾರಿಯನ್ನು ಪತ್ನಿ ವಿಜಯಲಕ್ಷ್ಮೀ ಅವರೇ ತೆಗೆದುಕೊಂಡಿದ್ದು, ದರ್ಶನ್‌ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಪ್ರಕರಣದ ಹೋರಾಟದ ಕುರಿತು ಚರ್ಚಿಸಲು ಮತ್ತು ದರ್ಶನ್‌ರನ್ನು ನೋಡಲು ವಿಜಯಲಕ್ಷ್ಮೀ ಮತ್ತು ದಿನಕರ್‌ ಜೊತೆ ಅಕ್ಕನ ಮಗ ಚಂದನ್‌ ಕೂಡ ಜೈಲಿಗೆ ಭೇಟಿ ನೀಡಿದ್ದರು.

ಜೈಲಿನಲ್ಲಿ ಪ್ರಕರಣದ ಹೋರಾಟದ ಬಗ್ಗೆ ದರ್ಶನ್‌ ಜೊತೆ ಸುದೀರ್ಘ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ನಟ ದರ್ಶನ್‌ಗೆ ಯಾವಾಗ ಜಾಮೀನು ಸಿಗುತ್ತೆ ಎಂಬುದೇ ಅಭಿಮಾನಿಗಳಿಗೆ ಕಾಡುವ ಪ್ರಶ್ನೆಯಾಗಿದೆ.

ಇನ್ನೂ ಜೈಲು ನಿಯಮಗಳ ಪ್ರಕಾರ, ಒಂದು ವಾರದಲ್ಲಿ ಮೂವರಿಗೆ ಮಾತ್ರ ಭೇಟಿ ಮಾಡಲು ಅವಕಾಶ ಇರುತ್ತದೆ. ಈ ಹಿನ್ನೆಲೆಯಲ್ಲಿ ಇಂದು ದರ್ಶನ್‌ ಪತ್ನಿ ವಿಜಯಲಕ್ಷ್ಮೀ, ದರ್ಶನ್‌ ಸಹೋದರ ದಿನಕರ್‌ ಹಾಗೂ ದರ್ಶನ್‌ ಅಕ್ಕನ ಮಗ ಚಂದನ್‌ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ, ಧೈರ್ಯ ಹೇಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಜನಮೆಚ್ಚಿದ್ದ ಆರ್ಕೆಸ್ಟ್ರಾ ; ಬದಲಾದ ಕ್ರೇಜ್

ಆರ್ಕೆಸ್ಟ್ರಾ. . . ಈ ಪದ ಕೇಳಿದರೆ ಸಾಕು, ಯುವಜನರ ಎದೆ ಯಲ್ಲಿ ತಮ್ಮ ಮೆಚ್ಚಿನ ಸಿನಿಮಾಗಳ ಹಾಡುಗಳ ಝೇಂಕಾರ,…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಮಾನವ್‌ ಸೋನಿ ಎಂಬ ಮಾನವೀಯ ಕಳಕಳಿಯ ಮನಸ್ಸು

ʼಫನ್‌ ಸ್ಮಾರ್ಟ್‌ ನಾಲೆಡ್ಜ್‌ ಸಲ್ಯೂಶನ್‌ ಫೌಂಡೇಶನ್‌ʼ ಮೂಲಕ ಮಾನವೀಯ ಸೇವೆ   ೨೬ ವರ್ಷ ಪ್ರಾಯದ, ಕೊಲ್ಕೊತ್ತಾದ ಮಾನವ್ ಸೋನಿ…

2 hours ago

ಮಹಪಂಚ್‌ ಕಾರ್ಟೂನ್‌

ಮಹಪಂಚ್‌ ಕಾರ್ಟೂನ್‌ |ಜುಲೈ 8 ಬುಧವಾರ  

5 hours ago

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

21 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

21 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

22 hours ago