ಮನರಂಜನೆ

ಕೊಲ್ಲೂರಿನಲ್ಲಿ ನವಚಂಡಿಕಾ ಹೋಮ ಮಾಡಿಸಿದ ವಿಜಯಲಕ್ಷ್ಮೀ ದರ್ಶನ್

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್‍ ಆದಷ್ಟು ಬೇಗ ಬಿಡುಗಡೆ ಆಗಬೇಕೆಂದು ಅವರ ಪತ್ನಿ ವಿಜಯಲಕ್ಷ್ಮೀ ಕೊಲ್ಲೂರಿನಲ್ಲಿ ನವಚಂಡಿಕಾ ಹೋಮವನ್ನು ಮಾಡಿಸಿದ್ದಾರೆ.

ತಮ್ಮ ಪುತ್ರ ವಿನೀಷ್‍ ಹಾಗೂ ಸಂಬಂಧಿಗಳ ಜೊತೆಗೆ ಕೊಲ್ಲೂರಿಗೆ ಹೋದ ವಿಜಯಲಕ್ಷ್ಮೀ, ಶುಕ್ರವಾರ ನರಸಿಂಹ ಅಡಿಗರ ನೇತೃತ್ವದಲ್ಲಿ ನವಚಂಡಿಕಾಯಾಗ ಮಾಡಿಸಿದ್ದಾರೆ. ನಂತರ ದೇವಿಗೆ ಫಲಪುಷ್ಪ ಮತ್ತು ರೇಷ್ಮೆ ಸೀರಿಯನ್ನು ಸಲ್ಲಿಸಿ, ಸಂಕಲ್ಪ ಮಾಡಿಸಿಕೊಂಡು ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

ಈ ಚಂಡಿಕಾಯಾಗದಿಂದ ದುಷ್ಟ ಶಕ್ತಿಗಳು ದೂರವಾಗುತ್ತದೆ ಮತ್ತು ಸಕರಾತ್ಮಕ ಶಕ್ತಿ ಬರುತ್ತದೆ ಎಂಬ ನಂಬಿಕೆಯಿಂದ ಮಾಡಿಸಲಾಗುತ್ತದೆ. ಇದರಿಂದ ಶತ್ರು ಬಾಧೆ ನಿವಾರಣೆಯಾಗುವುದರ ಜೊತೆಗೆ ಆರೋಗ್ಯ ಹಾಗೂ ಸಂಪತ್ತು ವೃದ್ಧಿಸುತ್ತದೆ ಎಂದು ಹೇಳಲಾಗುತ್ತದೆ.

ಇದಕ್ಕೂ ಮೊದಲು ವಿಜಯಲಕ್ಷ್ಮೀ ದರ್ಶನ್‍ ಅವರು ನಿರ್ದೇಶಕ ಪ್ರೇಮ್‍ ಜೊತೆಗೂಡಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‍ ಅವರನ್ನು ಭೇಟಿ ಮಾಡಿ ಹಲವು ದರ್ಶನ್ ಬಂಧನಕ್ಕೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆನ್ನಲಾಗಿದೆ.

ಇದಕ್ಕೂ ಮೊದಲು ಇನ್‍ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದ ವಿಜಯಲಕ್ಷ್ಮೀ, ಮೃತ ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದರು. ಅಷ್ಟೇ ಅಲ್ಲ, ತಾಯಿ ಚಾಮುಂಡೇಶ್ವರಿ ಮತ್ತು ನಮ್ಮ ಕಾನೂನು ವ್ಯವಸ್ಥೆಯಲ್ಲಿ ನಂಬಿಕೆ ಇರುವುದಾಗಿ ಹೇಳಿದ್ದರು.

ಅಂದಹಾಗೆ, ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ದರ್ಶನ್‍ ಮತ್ತು ಇತರೆ ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದೆ. ದರ್ಶನ್ ಸೇರಿದಂತೆ ಒಟ್ಟು 17 ಆರೋಪಿಗಳು ಕಳೆದ ಒಂದು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪೈಕಿ ದರ್ಶನ್‍ ಸೇರಿದಂತೆ 14 ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೆ, ನಾಲ್ವರು ಆರೋಪಿಗಳು ತುಮಕೂರು ಜೈಲಿನಲ್ಲಿದ್ದಾರೆ. ಇವರೆಲ್ಲರ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನ ಅಂದರೆ ಆಗಸ್ಟ್ 1ರವರೆಗೂ ವಿಸ್ತರಣೆ ಮಾಡಿದೆ.

ಭೂಮಿಕಾ

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

2 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

2 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

2 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

2 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

4 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

5 hours ago