ಮನರಂಜನೆ

ಕೊಲ್ಲೂರಿನಲ್ಲಿ ನವಚಂಡಿಕಾ ಹೋಮ ಮಾಡಿಸಿದ ವಿಜಯಲಕ್ಷ್ಮೀ ದರ್ಶನ್

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್‍ ಆದಷ್ಟು ಬೇಗ ಬಿಡುಗಡೆ ಆಗಬೇಕೆಂದು ಅವರ ಪತ್ನಿ ವಿಜಯಲಕ್ಷ್ಮೀ ಕೊಲ್ಲೂರಿನಲ್ಲಿ ನವಚಂಡಿಕಾ ಹೋಮವನ್ನು ಮಾಡಿಸಿದ್ದಾರೆ.

ತಮ್ಮ ಪುತ್ರ ವಿನೀಷ್‍ ಹಾಗೂ ಸಂಬಂಧಿಗಳ ಜೊತೆಗೆ ಕೊಲ್ಲೂರಿಗೆ ಹೋದ ವಿಜಯಲಕ್ಷ್ಮೀ, ಶುಕ್ರವಾರ ನರಸಿಂಹ ಅಡಿಗರ ನೇತೃತ್ವದಲ್ಲಿ ನವಚಂಡಿಕಾಯಾಗ ಮಾಡಿಸಿದ್ದಾರೆ. ನಂತರ ದೇವಿಗೆ ಫಲಪುಷ್ಪ ಮತ್ತು ರೇಷ್ಮೆ ಸೀರಿಯನ್ನು ಸಲ್ಲಿಸಿ, ಸಂಕಲ್ಪ ಮಾಡಿಸಿಕೊಂಡು ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

ಈ ಚಂಡಿಕಾಯಾಗದಿಂದ ದುಷ್ಟ ಶಕ್ತಿಗಳು ದೂರವಾಗುತ್ತದೆ ಮತ್ತು ಸಕರಾತ್ಮಕ ಶಕ್ತಿ ಬರುತ್ತದೆ ಎಂಬ ನಂಬಿಕೆಯಿಂದ ಮಾಡಿಸಲಾಗುತ್ತದೆ. ಇದರಿಂದ ಶತ್ರು ಬಾಧೆ ನಿವಾರಣೆಯಾಗುವುದರ ಜೊತೆಗೆ ಆರೋಗ್ಯ ಹಾಗೂ ಸಂಪತ್ತು ವೃದ್ಧಿಸುತ್ತದೆ ಎಂದು ಹೇಳಲಾಗುತ್ತದೆ.

ಇದಕ್ಕೂ ಮೊದಲು ವಿಜಯಲಕ್ಷ್ಮೀ ದರ್ಶನ್‍ ಅವರು ನಿರ್ದೇಶಕ ಪ್ರೇಮ್‍ ಜೊತೆಗೂಡಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‍ ಅವರನ್ನು ಭೇಟಿ ಮಾಡಿ ಹಲವು ದರ್ಶನ್ ಬಂಧನಕ್ಕೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆನ್ನಲಾಗಿದೆ.

ಇದಕ್ಕೂ ಮೊದಲು ಇನ್‍ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದ ವಿಜಯಲಕ್ಷ್ಮೀ, ಮೃತ ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದರು. ಅಷ್ಟೇ ಅಲ್ಲ, ತಾಯಿ ಚಾಮುಂಡೇಶ್ವರಿ ಮತ್ತು ನಮ್ಮ ಕಾನೂನು ವ್ಯವಸ್ಥೆಯಲ್ಲಿ ನಂಬಿಕೆ ಇರುವುದಾಗಿ ಹೇಳಿದ್ದರು.

ಅಂದಹಾಗೆ, ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ದರ್ಶನ್‍ ಮತ್ತು ಇತರೆ ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದೆ. ದರ್ಶನ್ ಸೇರಿದಂತೆ ಒಟ್ಟು 17 ಆರೋಪಿಗಳು ಕಳೆದ ಒಂದು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪೈಕಿ ದರ್ಶನ್‍ ಸೇರಿದಂತೆ 14 ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೆ, ನಾಲ್ವರು ಆರೋಪಿಗಳು ತುಮಕೂರು ಜೈಲಿನಲ್ಲಿದ್ದಾರೆ. ಇವರೆಲ್ಲರ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನ ಅಂದರೆ ಆಗಸ್ಟ್ 1ರವರೆಗೂ ವಿಸ್ತರಣೆ ಮಾಡಿದೆ.

ಭೂಮಿಕಾ

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

4 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

14 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

18 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

19 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

19 hours ago