ಮನರಂಜನೆ

ದುನಿಯಾ’ ವಿಜಯ್‍ ಮಗಳಿಗೆ ವಿನಯ್‍ ಹೀರೋ: ‘ಸಿಟಿ ಲೈಟ್ಸ್’ ಚಿತ್ರಕ್ಕೆ ಸೇರ್ಪಡೆ

‘ದುನಿಯಾ’ ವಿಜಯ್ ಮಗಳು ರಿತನ್ಯ ಈ ವರ್ಷದ ಏಪ್ರಿಲ್‌ನಲ್ಲಿ ಪ್ರಾರಂಭವಾದ ಜಡೇಶ್‍ ಹಂಪಿ ನಿರ್ದೇಶನದ ‘ರಾಚಯ್ಯ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಈಗ ವಿಜಯ್‍ ಅವರ ಇನ್ನೊಬ್ಬ ಮಗಳು ಮೋನಿಷಾ ಸಹ ‘ಸಿಟಿ ಲೈಟ್ಸ್’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈಗ ಆ ಚಿತ್ರಕ್ಕೆ ವಿನಯ್‍ ರಾಜಕುಮಾರ್‍ ನಾಯಕನಾಗಿ ಎಂಟ್ರಿ ಕೊಟ್ಟಿದ್ದಾರೆ.

‘ಸಿಟಿ ಲೈಟ್ಸ್ ಚಿತ್ರದ ಮೊದಲ ಪೋಸ್ಟರ್‍ ಗಣೇಶ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ವಿಶೇಷವೆಂದರೆ, ‘ಸಿಟಿ ಲೈಟ್ಸ್’ ಚಿತ್ರವನ್ನು ‘ದುನಿಯಾ’ ವಿಜಯ್ ನಿರ್ದೇಶನ ಮಾಡುತ್ತಿದ್ದಾರೆ. ಮೊದಲ ಹಂತವಾಗಿ ನಾಯಕಿಯನ್ನು ಪರಿಚಯಿಸಲಾಗಿತ್ತು. ಇದೀಗ ನಾಯಕನನ್ನು ಪರಿಚಯಿಸುವ ಪೋಸ್ಟರ್‍ ಬಿಡುಗಡೆ ಮಾಡಲಾಗಿದೆ.

ಕೆಲವು ದಿನಗಳ ಹಿಂದೆ ವಿನಯ್‍ ರಾಜಕುಮಾರ್‍ ಅಭಿನಯದ ‘ಪೆಪೆ’ ಚಿತ್ರ ಬಿಡುಗಡೆಯಾಗಿತ್ತು. ಚಿತ್ರ ಭಾರೀ ಪ್ರಚಾರದೊಂದಿಗೆ ಬಿಡುಗಡೆಯಾದರೂ, ಪ್ರೇಕ್ಷಕರ ನಿರೀಕ್ಷೆಗೆ ನಿಲುಕಲಿಲ್ಲ. ಈ ಚಿತ್ರದಲ್ಲಿ ಪ್ರಚಾರ ಮಾಡುವುದರ ಜೊತೆಗೆ, ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲೂ ಭಾಗಿಯಾಗಿದ್ದರು. ಇದೀಗ ವಿಜಯ್‍ ತಮ್ಮ ಮುಂದಿನ ಚಿತ್ರದಲ್ಲಿ ವಿನಯ್‍ ಅವರನ್ನು ನಿರ್ದೇಶನ ಮಾಡುತ್ತಿದ್ದಾರೆ.

ಮೋನಿಷಾಗೆ ಚಿಕ್ಕಂದಿನಿಂದಲೂ ನಟನೆಯ ಬಗ್ಗೆ ಆಸಕ್ತಿ ಇತ್ತಂತೆ. ಚಿತ್ರರಂಗಕ್ಕೆ ಬರಬೇಕು ಮತ್ತು ನಟಿಯಾಗಿ ಗುರುತಿಸಿಕೊಳ್ಳಬೇಕು ಎಂದು ಅಪ್ಪನಿಗೆ ಪೀಡಿಸುತ್ತಿದ್ದರಂತೆ. ಆಗೆಲ್ಲಾ ವಿಜಯ್, ‘ಮೊದಲು ಓದು, ಸಿನಿಮಾ ಬೇಡ’ ಎಂದು ಹೇಳುತ್ತಿದ್ದರಂತೆ. ಕೊನೆಗೆ ಅಪ್ಪನನ್ನು ಒಪ್ಪಿಸುವಲ್ಲಿ ಮೋನಿಷಾ ಯಶಸ್ವಿಯಾಗಿದ್ದಾರೆ. ಬ್ಯಾಚುಲರ್‍ ಆಫ್‍ ಥಿಯೇಟರ್‍ ಮುಗಿಸಿರುವ ಮೋನಿಷಾಗೆ ರಂಗಭೂಮಿಯಲ್ಲಿ ಸಿಕ್ಕ ಅನುಭವ ಇನ್ನಷ್ಟು ವಿಶ್ವಾಸ ಹೆಚ್ಚಿಸಿತಂತೆ. ಅದೇ ವಿಶ್ವಾಸ ವಿಜಯ್‍ ಅವರನ್ನೂ ಒಪ್ಪಿಸಲಿಕ್ಕೆ ಸಾಧ್ಯವಾಯಿತು ಎಂದು ಮೋನಿಷಾ ನಂಬಿಕೆ. ಆ ನಂತರ ನ್ಯೂಯಾರ್ಕ್ ಫಿಲ್ಮ್ ಅಕಾಡೆಮಿಯಲ್ಲಿ ಒಂದು ವರ್ಷದ ಪದವಿ ಪಡೆಯುವುದಕ್ಕೆ ಅಮೇರಿಕಾಗೆ ಹಾರಿದ್ದಾರೆ. ಅಲ್ಲಿಂದ ಬಂದು ಇದೀಗ ‘ಸಿಟಿ ಲೈಟ್ಸ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಸದ್ಯಕ್ಕೆ ಪೋಸ್ಟರ್ ಮಾತ್ರ ಬಿಡುಗಡೆಯಾಗಿದ್ದು, ಚಿತ್ರ ಯಾವಾಗ ಸೆಟ್ಟೇರುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇದೆ. ಸದ್ಯ ‘ದುನಿಯಾ’ ವಿಜಯ್‍ ಅಭಿನಯದ ‘ರಾಚಯ್ಯ’ ಚಿತ್ರದ ಮೂರನೇ ಹಂತದ ಚಿತ್ರೀಕರಣ ಕೋಲಾರದಲ್ಲಿ ನಡೆಯುತ್ತಿದ್ದು, ಬಹುಶಃ ಈ ವರ್ಷಾಂತ್ಯಕ್ಕೆ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆ ಇದೆ.

 

 

ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

1 hour ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

1 hour ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

2 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

2 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

2 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

2 hours ago